ಸಾಲದ ಬಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 31ರಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ನಡೆದಿದೆ.
ಮಾಬೂಬಸಾಬ್ ಗನಿಸಾಬ ಸುಂಕದ (52) ಆತ್ಮಹತ್ಯೆಗೆ ಶರಣಾದ ರೈತ. ಗ್ರಾಮದಿಂದ 1 ಕಿಮೀ ದೂರದಲ್ಲಿರುವ ಹುಲಗೂರು ದಾರಿಯಲ್ಲಿರುವ ಹೊಲದಲ್ಲಿಯ ಬನ್ನಿ ಮರಕ್ಕೆ ಬುಧವಾರ ಬೆಳಿಗ್ಗೆ 7:30ಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ 4 ಜನ ಮಕ್ಕಳಿದ್ದು, ಸುಮಾರು 8 ಲಕ್ಷ ಸಾಲವಾಗಿದೆ ಎನ್ನಲಾಗಿದೆ. ಈಗಾಗಲೇ ಮೃತ ರೈತನ ಶವವನ್ನು ಕುಂದಗೋಳ ಸರ್ಕಾರಿ ಆಸ್ಪತ್ರೆಗೆ ಕೊಂಡೋಯ್ಯಲಾಗಿದೆ. ಗುಡಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.





