ಧಾರವಾಡ | ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬ; ಭೋವಿ ಸಮಾಜ ಪ್ರತಿಭಟನೆ

Date:

ಭೋವಿ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ, ಗುರುವಾರ ಕುಂದಗೋಳ ತಹಶೀಲ್ದಾರ ಕಚೇರಿ ಆವರಣದಲ್ಲಿ ಭೋವಿ ಸಮಾಜದವರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರು ಸಲ್ಲಿಸಿದ ಮನವಿಯಲ್ಲಿ, ಭೋವಿ ಸಮಾಜವನ್ನು ಸರಕಾರವೇ 1950ರಲ್ಲಿಯೇ ಪರಿಶಿಷ್ಟ ಜಾತಿಗೆ ಸೇರಿಸಿ ಆದೇಶ ಹೊರಡಿಸಿದೆ. ಹಲವಾರು ಬಾರಿ ಸರ್ಕಾರಿ ಸುತ್ತೊಲೆಗಳು ಹೊರಬಿದ್ದಿದ್ದರೂ, ಪ್ರಸ್ತುತ ತಹಶೀಲ್ದಾರರು ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಅನ್ಯಾಯಕ್ಕೆ ಗುರಿಯಾಗುತ್ತಿದ್ದಾರೆ. ಹಿಂದಿನ ತಹಶೀಲ್ದಾರರು ನಾಗರಿಕ ಹಕ್ಕು ಜಾರಿ ನಿರ್ದೇಶನದ ಆಧಾರದ ಮೇಲೆ ತನಿಖೆ ನಡೆಸಿ ಪ್ರಮಾಣ ಪತ್ರ ನೀಡುತ್ತಿದ್ದರು. ಉಚ್ಚ ನ್ಯಾಯಾಲಯದ ಆದೇಶಗಳೂ ನಮ್ಮ ಪರವಾಗಿವೆ. ಆದರೂ ಉದ್ದೇಶಪೂರ್ವಕವಾಗಿ ನಿರಾಕರಣೆ ಮಾಡುತ್ತಿರುವುದರಿಂದ, ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮಕೈಗೊಳ್ಳಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಮರಣ ಉಪವಾಸಕ್ಕೆ ಮುಂದಾಗುತ್ತೇವೆ ಎಂದು ರಾಜ್ಯಾಧ್ಯಕ್ಷ ಲಕ್ಷ್ಮಣ ಭೋವಿ ಎಚ್ಚರಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ ರಾಜು ಮಾವರಕ ಮಾತನಾಡಿ, ನಾವು ಕಾನೂನಿನ ಚೌಕಟ್ಟಿನೊಳಗೆ ಕೆಲಸ ಮಾಡಬೇಕಾಗಿದೆ. ಗುರುವಿನಹಳ್ಳಿ ಗ್ರಾಮದ ಭೋವಿ ಸಮಾಜಕ್ಕೆ ಸಂಬಂಧಿಸಿದ ದಾಖಲೆ ಪರಿಶೀಲನೆಯಾಗುತ್ತಿರುವಾಗ, ಸಮಾಜದ ಮುಖಂಡರೊಬ್ಬರು ನ್ಯಾಯಾಲಯದಿಂದ ತಡೆಯಾಜ್ಞೆ (Stay Order) ತಂದಿದ್ದಾರೆ. ಆದ್ದರಿಂದ ಪ್ರಕ್ರಿಯೆ ತಾತ್ಕಾಲಿಕವಾಗಿ ನಿಂತಿದೆ. ಆದರೆ ಮನವಿಯನ್ನು ಸರ್ಕಾರಕ್ಕೆ ಕಳುಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಸಮುದಾಯದವರ ಆತಂಕ ನಿವಾರಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ಧಿ ಓದಿದ್ದೀರಾ? ಧಾರವಾಡ | ಗಾಂಧಿ ಜಯಂತಿಗೆ ಮುಕ್ತಾಯಗೊಳ್ಳುವ 15 ದಿನಗಳ ಸ್ವಚ್ಛತಾ ಅಭಿಯಾನಕ್ಕೆ‌ ಚಾಲನೆ

ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಲಕ್ಷ್ಮಣ ಭೋವಿ, ಹುಚ್ಚಪ್ಪ ಬೋವಿ, ಕಿರಣ ಬೋವಿ, ಯಲ್ಲಪ್ಪ ಬೋವಿ, ರಾಗು ಬೋವಿ, ನಾಗರಾಜ ಬೋವಿ, ಶಂಕರ ಜಾಲಿಹಾಳ, ವೇಂಕಪ್ಪ ಬೋವಿ, ಗೋವಿಂದಪ್ಪ ಬೋವಿ, ಅಜ್ಜಪ್ಪ ಬೋವಿ, ಚಂದ್ರಪ್ಪ ಪಡೆಸೂರ, ಮಂಜಪ್ಪ ಶಿರಸಂಗಿ, ಚಿದಾನಂದಪ್ಪ ಕರಿಶಣ್ಣವರ, ಶಂಕರ ಬೋವಿ, ಪಾರ್ವತಿ ಬೋವಿ, ಶಂಕ್ರವ್ವ ಬೋವಿ, ಲಕ್ಷ್ಮವ್ವ ಬೋವಿ, ರೇಣುಕಾ ಶಿರಸಂಗಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...