ಧಾರವಾಡ | ಹುಬ್ಬಳ್ಳಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ಹೆಚ್ಚಿನ ಪೋಲಿಸ್ ನಿಯೋಜನೆಗೆ ಒತ್ತಾಯ

Date:

ಹುಬ್ಬಳ್ಳಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಳ್ಳತನಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಹೊತ್ತಿನಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು ಎಂದು ಒತ್ತಾಯಿಸಿ ವ್ಯಾಪಾರಸ್ಥರ ಸಂಘದ ವತಿಯಿಂದ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಅವರಿಗೆ ಎಪಿಎಂಸಿ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

ಈ ಕುರಿತು ಸಂಘದ ಅಧ್ಯಕ್ಷ ರಾಜಕಿರಣ ಬಿ.ಮೆಣಸಿನಕಾಯಿ ಮಾತನಾಡಿ, ಮಾರುಕಟ್ಟೆಯ ಮುಖ್ಯ ದ್ವಾರದಲ್ಲಿ ಸಂಚಾರಿ ಪೊಲೀಸರನ್ನು ನಿಯೋಜಿಸಬೇಕು. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಲಾರಿ, ಇನ್ನಿತರ ವಾಹನಗಳಲ್ಲಿ ತುಂಬಿಕೊಂಡು ರಾತ್ರಿ ಹೊತ್ತು ವಿವಿಧ ಜಿಲ್ಲೆಗಳಿಂದ ಬರುವ ವಾಹನಗಳನ್ನು ಪೊಲೀಸ್ ಅಧಿಕಾರಿಗಳು ಅನವಶ್ಯಕವಾಗಿ ತಡೆಯುವುದನ್ನು ತಪ್ಪಿಸಲು ಸೂಕ್ತಕ್ರಮ ವಹಿಸುವುದು ಮತ್ತು ರಾತ್ರಿ ಹೊತ್ತಿನಲ್ಲಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕಾರ್ಯದಲ್ಲಿ ನಿರತರಾಗಿರುವ ಹಮಾಲರಿಗೆ ರಕ್ಷಣೆ ಬೇಕಿದೆ ಎಂದು ಮನವಿಯಲ್ಲಿ‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...