ಧಾರವಾಡ | ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ಪ್ರಸ್ತಾವನೆ ರದ್ದಿಗೆ ಆಗ್ರಹ

Date:

ಒಂದು ಸಾವಿರಕ್ಕೂ ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ಪ್ರಸ್ತಾವನೆಯನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್‌) ಮತ್ತು ಆಲ್ ಇಂಡಿಯಾ ಡೆಮೋಕ್ರಟಿಕ್ ಯೂಥ್ ಆರ್ಗನೈಸೇಷನ್(ಎಐಡಿವೈಒ) ನೇತೃತ್ವದಲ್ಲಿ ಧಾರವಾಡ ನಗರದ ವಿವೇಕಾನಂದ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಸರ್ಕಾರದ ಈ ಜನವಿರೋಧಿ ನೀತಿಯ ವಿರುದ್ಧ ಘೋಷಣೆಯನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಗಳ ಪ್ರತಿನಿಧಿಗಳ ನಿಯೋಗ ತೆರಳಿ ಜಿಲ್ಲಾಧಿಕಾರಿ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಎಐಎಂಎಸ್‌ಎಸ್‌ನ ಜಿಲ್ಲಾಧ್ಯಕ್ಷ ಮಧುಲತಾ ಗೌಡರ್ ಮಾತನಾಡಿ, “ರಾಜ್ಯದಲ್ಲಿ ಹೊಸದಾಗಿ 1000ಕ್ಕೂ ಹೆಚ್ಚು ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಅಬಕಾರಿ ಇಲಾಖೆಯ ನಿರ್ಧಾರವು ಸಮಾಜಘಾತುಕವಾದುದು. ಈಗಾಗಲೇ ಮದ್ಯಪಾನದ ದುಶ್ಚಟದಿಂದಾಗಿ ಲಕ್ಷಾಂತರ ಕುಟುಂಬಗಳು ಬೀದಿಪಾಲಾಗಿವೆ. ಒಂದೆಡೆ ಬೆಲೆ ಏರಿಕೆ, ಬಡತನ, ನಿರುದ್ಯೋಗದಿಂದ ಜೀವನ ತತ್ತರಿಸುತ್ತಿದ್ದರೆ ಇನ್ನೊಂದೆಡೆ ನೈತಿಕ ಮೌಲ್ಯ ಕುಸಿಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮದ್ಯದಂಗಡಿ

“ಹೆಣ್ಣು ಮಕ್ಕಳ ಮೇಲಿನ ಅಪರಾಧಗಳ ಹೆಚ್ಚಳಕ್ಕೆ ಮದ್ಯಪಾನವೂ ಒಂದು ಮುಖ್ಯ ಕಾರಣವೆಂದು ವರದಿಗಳು ಸಾಬೀತುಪಡಿಸುತ್ತಲೇ ಇವೆ. ಕೌಟುಂಬಿಕ ದೌರ್ಜನ್ಯಗಳಂತೂ ಇನ್ನೂ ಕ್ರೂರರೂಪ ಪಡೆದುಕೊಳ್ಳುತ್ತಿವೆ. ಹೆಣ್ಣು ಮಕ್ಕಳು ಬೆವರು ಸುರಿಸಿ ದುಡಿದ ಹಣವನ್ನು ಗಂಡಂದಿರು ಕುಡಿತಕ್ಕಾಗಿ ಹೊಡೆದು ಬಡಿದು ಕಸಿದುಕೊಳ್ಳುವುದು ಈಗಲೂ ಮನೆ ಮನೆಯ ಕಥೆಯಾಗಿದೆ. ಇದರಿಂದಾಗಿ ಎಷ್ಟೋ ಹೆಣ್ಣುಮಕ್ಕಳು ಹಾಗೂ ಅವರ ಮಕ್ಕಳು ಹೊಟ್ಟೆಗೆ ಬಟ್ಟೆ ಕಟ್ಟಿಕೊಂಡು ಉಪವಾಸ ಮಲಗುವಂತಾಗಿದೆ” ಎಂದರು.

“ಮಹಿಳೆಯರ ಸಬಲೀಕರಣ ಮಾಡುತ್ತೇವೆಂದು ಘಂಟಾಘೋಷವಾಗಿ ಹೇಳುತ್ತಿರುವ ರಾಜ್ಯ ಸರ್ಕಾರ ಈಗ ಅದೇ ಮಹಿಳೆಯರ ಮೇಲಿನ ಕ್ರೂರ ಅಪರಾಧಗಳಿಗೆ ಕಾರಣವಾಗುತ್ತಿದೆ. ಸಂಪೂರ್ಣ ಮದ್ಯ ನಿಷೇಧಕ್ಕಾಗಿ ಮಹಿಳಾ ಸಮುದಾಯ ಕೇಳಿಕೊಳ್ಳುತ್ತಿದ್ದರೆ ಸರ್ಕಾರ ಮಾತ್ರ ಇನ್ನೂ ಹೆಚ್ಚು ಮದ್ಯದಂಗಡಿಗಳಿಗೆ ಪರವಾನಗಿ ಕೊಡುತ್ತಿದೆ. ಎಲ್ಲ ಸರ್ಕಾರಗಳ ಈ ಜನವಿರೋಧಿ ಧೋರಣೆಯನ್ನು ಮಹಿಳಾ ಸಮುದಾಯ ಅರ್ಥ ಮಾಡಿಕೊಂಡು ಒಕ್ಕೊರಲಿನಿಂದ ಇದರ ವಿರುದ್ಧ ಬೀದಿಗಿಳಿಯಬೇಕು” ಎಂದು ಕರೆ ನೀಡಿದರು.

ಮದ್ಯದಂಗಡಿ 1

ಎಐಡಿವೈಒ ಜಿಲ್ಲಾಧ್ಯಕ್ಷ ಭವಾನಿಶಂಕರಗೌಡ ಮಾತನಾಡಿ, “ಇಂದು ಹಲವಾರು ಸಮಾಜಘಾತುಕ ಕೃತ್ಯಗಳಿಗೆ ಮದ್ಯಪಾನ ಎಡೆ ಮಾಡಿಕೊಡುತ್ತಿದೆ. ಉದ್ಯೋಗದ ಗ್ಯಾರಂಟಿ ಬದಲಿಗೆ ಮದ್ಯದ ಗ್ಯಾರಂಟಿ ಕೊಡುತ್ತಿರುವ ಸರ್ಕಾರದ ನೀತಿ ದುರದೃಷ್ಟಕರ. ಕುಡಿತದಿಂದ ಎಷ್ಟೋ ಎಳೆಯ ಜೀವಗಳು ರಸ್ತೆ ಅಪಘಾತಗಳಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಮೌಲ್ಯಯುತ ಜೀವನ ನಡೆಸಬೇಕಾದ ಯುವಜನರು ಕುಡಿತದ ಚಟಕ್ಕೆ ಬಲಿಯಾಗಿ ಹಾದಿ ತಪ್ಪಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಸಣ್ಣ ಮಕ್ಕಳೂ ಕೂಡ ಕುಡಿಯುವುದನ್ನು ಕಲಿಯುತ್ತಿದ್ದಾರೆ. ಇವೆಲ್ಲವನ್ನು ನಾವು ತೀವ್ರ ಆತಂಕದಿಂದ ಗಮನಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಸಮಾಜದ ನೈತಿಕ ಸ್ವಾಸ್ಥ್ಯವನ್ನು ಉಳಿಸಿ-ಬೆಳೆಸುವುದನ್ನು ಬಿಟ್ಟು, ಜನಸಾಮಾನ್ಯರ ನೈತಿಕ ಬೆನ್ನೆಲುಬನ್ನು ಮುರಿಯಲು ಕಾರಣವಾಗುವ ಮದ್ಯಪಾನವನ್ನು ಸರ್ಕಾರ ಪ್ರೋತ್ಸಾಹಿಸುತ್ತಿರುವುದು ಅತ್ಯಂತ ಖೇದಕರ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ನಿರ್ಗತಿಕ ಕುಟುಂಬಗಳಿಗೆ ವಸತಿ ಹಕ್ಕು ಕಲ್ಪಿಸುವಂತೆ ಗ್ರಾಕೂಸ್ ಆಗ್ರಹ

“ಸರ್ಕಾರದ ಈ ಜೀವವಿರೋಧಿ ನಿಲುವಿನ ವಿರುದ್ಧ ವಿದ್ಯಾರ್ಥಿ-ಯುವಜನರು ಉನ್ನತ ನೀತಿ, ನೈತಿಕತೆ, ಮೌಲ್ಯಪ್ರಜ್ಞೆಯೊಂದಿಗೆ ಸಂಘಟಿತ ಹೋರಾಟಕ್ಕೆ ಮುಂದಾಗಬೇಕು” ಎಂದರು.‌

ಎಐಎಂಎಸ್‌ಎಸ್ ಜಿಲ್ಲಾ ಕಾರ್ಯದರ್ಶಿ ಗಂಗೂಬಾಯಿ ಕೊಕರೆ, ಸಂಘಟನೆಗಳ ಪದಾಧಿಕಾರಿಗಳಾದ ರಣಜಿತ್ ದೂಪದ್, ದೇವಮ್ಮ ದೇವತ್ಕಲ್, ಪ್ರೀತಿ ಸಿಂಗಾಡಿ, ಮುರುಗಮ್ಮ ಗರಗದ್, ಶೋಭಾ, ಹಲೀಮಾ ಶೇಖ್, ಈರಣ್ಣ ಸಂಗೊಳ್ಳಿ, ಕಿರಣ ಕಳ್ಳಿಮನಿ ಸೇರಿದಂತೆ ವಿದ್ಯಾರ್ಥಿ-ಯುವಜನರು, ವಿವಿಧ ಹಳ್ಳಿಗಳ, ಬಡಾವಣೆಗಳ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...