ಧಾರವಾಡ | ಎಸ್‍ಟಿ ‍ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹ

Date:

ಸಪ್ತಾಪುರದಲ್ಲಿರು ಎಸ್‍ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ ಇಂದು (ಸೆ.8) ಜಿಲ್ಲಾಧಿಕಾರಿ ಕಚೇರಿ ಎದರಿಗೆ ಎಐಡಿಎಸಓ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಮಾತನಾಡಿ, ವಿದ್ಯಾಕಾಶಿ ಎಂದು ಹೆಸರು ಪಡೆದ ಧಾರವಾಡದಲ್ಲಿ ಪ್ರತಿ ವರ್ಷದಿಂದ ವರ್ಷಕ್ಕೆ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯಲು ಇಲ್ಲಿಗೆ ಬರುವ ಸಂಖ್ಯೆ ಹೆಚ್ಚಾಗುತ್ತಿದೆ. ಕಾಲೇಜಿನಲ್ಲಿ ಪ್ರವೇಶ ಪಡೆದರೂ ವಸತಿ ಸೌಲಭ್ಯಕ್ಕೆ ಹಾಸ್ಟೆಲ್ ಸಿಗದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಹಾಸ್ಟೆಲ್ ದೊರೆತರೂ ಅಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳು ಖಾತ್ರಿಯಾಗದೆ ಇರುವುದು ವಿಷಾದನೀಯ. ಇದಕ್ಕೆ ಧಾರವಾಡದ ಸಪ್ತಾಪುರದ ಎಸ್ ಟಿ ಬಾಲಕರ ಹಾಸ್ಟೆಲ್ ಹೊರತಾಗಿಲ್ಲ. ಹಾಸ್ಟೆಲ್ ನಲ್ಲಿ ಗುಣಮಟ್ಟದ ಆಹಾರ ವ್ಯವಸ್ಥೆ, ಸ್ವಚ್ಛತೆ ಇಲ್ಲದೆ ಇರುವುದು ಹಾಗೂ ಮೂಲಭೂತ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಡ ವಿದ್ಯಾರ್ಥಿಗಳ ಪರ ನಿಲುವನ್ನು ತೆಗೆದುಕೊಳ್ಳಬೇಕಾದ ಸರ್ಕಾರವು, ಶಿಕ್ಷಣವನ್ನು ಖಾತ್ರಿ ಪಡಿಸುವ ಬದಲಾಗಿ ವಿದ್ಯಾರ್ಥಿಗಳನ್ನು ಅತಂತ್ರಕ್ಕೆ ತಳ್ಳುತ್ತಿದೆ, ಸರ್ಕಾರದ ಈ ಧೋರಣೆಯು ಖಂಡನೀಯ ಎಂದರು.

ಹಾಸ್ಟೆಲ್‌ನಲ್ಲಿ ಗುಣಮಟ್ಟದ ಆಹಾರವನ್ನು ಖಾತ್ರಿಪಡಿಸಬೇಕು. ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಅವಶ್ಯಕತೆಗೆ ತಕ್ಕಂತೆ ಬಾತ್ ರೂಮ್ ಮತ್ತು ಶೌಚಾಲಯಗಳನ್ನು ನಿರ್ಮಿಸಬೇಕು. ಹಾಸ್ಟೆಲಲ್ಲಿ ಗ್ರಂಥಾಲಯವನ್ನು ನಿರ್ಮಿಸಬೇಕು. ಮಳೆಯಿಂದ ಸೋರುತ್ತಿರುವ ಕಟ್ಟಡವನ್ನು ದುರಸ್ತಿಗೊಳಿಸಬೇಕು. ಕುಡಿಯುವ ನೀರಿನ ಘಟಕ ನಿರ್ಮಿಸಬೇಕು ಎಂದು ವಿವಿಧ ಬೇಡಿಕೆಗಳನ್ನಿತ್ತು ವಿದ್ಯಾರ್ಥಿಗಳು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಲಸಿಕೆಯಿಂದ ಆರಂಭದಲ್ಲೆ ಸೋಂಕು ತಡೆಗಟ್ಟುಬಹುದು: ಡಾ.‌ರತ್ನಮಾಲಾ

ಮನವಿ ಪತ್ರವನ್ನು ಸ್ವೀಕರಿಸಲು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆಯ ತಾಲೂಕ ಅಧಿಕಾರಿ ಮಧು ಸಣ್ಣೇರಿ ಮಾತನಾಡಿ, ಈ ಕೂಡಲೇ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕಛೇರಿ ಕಾರ್ಯದರ್ಶಿ ಸ್ಫೂರ್ತಿ ಚಿಕ್ಕಮಠ, ಕಾರ್ಯಕರ್ತ ಸಿದ್ದು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...