ಧಾರವಾಡ | ‘ಶಿವಲಿಂಗಪ್ಪ ಗುರುಸಿದ್ಧಪ್ಪ ಅಗಡಿ ಮಾರ್ಗ’ ನಾಮಫಲಕ ಮರುಸ್ಥಾಪಿಸಲು ಒತ್ತಾಯ

Date:

ರಸ್ತೆ ಅಗಲೀಕರಣದ ಸಮಯದಲ್ಲಿ ತೆಗೆದುಹಾಕಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಿವಲಿಂಗಪ್ಪ ಗುರುಸಿದ್ಧಪ್ಪ ಅಗಡಿ ಅವರ ನಾಮಫಲಕಗಳನ್ನು ಮರುಸ್ಥಾಪನೆ ಮಾಡಲು ಒತ್ತಾಯಿಸಿ ನಾಗರಿಕರು ಹಾಗೂ ಅಗಡಿ ಕುಟುಂಬದ ವತಿಯಿಂದ ಮಹಾಪೌರರು ಮತ್ತು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಈ ಕುರಿತು ಈದಿನ.ಕಾಮ್ ಜತೆಗೆ ಶಶಿಧರ ಅಗಡಿ ಮಾತನಾಡಿ, ಶಿವಲಿಂಗಪ್ಪ ಗುರುಸಿದ್ಧಪ್ಪ ಅಗಡಿ ಅವರು ಎರಡು ಅವಧಿಗಳ ಕಾಲ ಚುನಾಯಿತ ಕಾರ್ಪೊರೇಟರ್ ಆಗಿ ಸೇವೆ ಸಲ್ಲಿಸಿ, ಪ್ರಥಮ ಅವಧಿಯಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಮಹಾನಗರ ಪಾಲಿಕೆಯ ಬಜೆಟ್ ಮಂಡಿಸಿದ್ದರು. ದ್ವಿತೀಯ ಅವಧಿಯಲ್ಲಿ ಮೇಯರ್ ಆಗಿ ಸೇವೆ ಸಲ್ಲಿಸಿದ ಅವರ ಮಹತ್ವಪೂರ್ಣ ಸಾರ್ವಜನಿಕ ಸೇವೆಯನ್ನು ಗೌರವಿಸುವ ಉದ್ದೇಶದಿಂದ, ಮಹಾನಗರ ಪಾಲಿಕೆಯು ಶಿವಾಜಿ ವೃತ್ತದಿಂದ ಸವದತ್ತಿ ರಸ್ತೆಯ ಎಪಿಎಂಸಿ ವರೆಗೆ ಇರುವ ರಸ್ತೆ ಮಾರ್ಗವನ್ನು ಅಧಿಕೃತವಾಗಿ “ಶಿವಲಿಂಗಪ್ಪ ಗುರುಸಿದ್ಧಪ್ಪ ಅಗಡಿ ಮಾರ್ಗ” ಎಂದು ನಾಮಕರಣ ಮಾಡಿತ್ತು.

ನಾಮ ಫಲಕಗಳನ್ನು ಶಿವಾಜಿ ವೃತ್ತ, ಪಟೇಲ್ ಟಿಂಬರ್ ಯಾರ್ಡ್, ಕೆ.ಎಸ್.ಆರ್.ಟಿ.ಸಿ ಡಿಪೋ ವೃತ್ತ, ಸವದತ್ತಿ ರಸ್ತೆಯ ಎಪಿಎಂಸಿ ಗೇಟ್ ಹತ್ತಿರದಲ್ಲಿ ಅಳವಡಿಸಲಾಗಿತ್ತು. ಇತ್ತೀಚೆಗೆ ರಸ್ತೆ ಅಗಲೀಕರಣ, ಅಭಿವೃದ್ಧಿ ಹಾಗೂ ಪುನರ್ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡ ಸಂದರ್ಭದಲ್ಲಿ, ಈ ಎಲ್ಲಾ ರಸ್ತೆಯಲ್ಲಿನ ಹೆಸರಿನ ಫಲಕಗಳನ್ನು ತೆಗೆದುಹಾಕಲಾಗಿದದ್ದು, ಕಾಮಗಾರಿಗಳು ಪೂರ್ಣಗೊಂಡ ನಂತರವೂ ಈ ಫಲಕಗಳನ್ನು ಮರುಸ್ಥಾಪನೆ ಮಾಡಲಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ರಸ್ತೆ ಸಾರ್ವಜನಿಕವಾಗಿ “ಶಿವಲಿಂಗಪ್ಪ ಗುರುಸಿದ್ಧಪ್ಪ ಅಗಡಿ ಮಾರ್ಗ” ಎಂಬ ಹೆಸರಿನಿಂದಲೇ ವ್ಯಾಪಕವಾಗಿ ಪರಿಚಿತವಾಗಿದ್ದು, ಫಲಕಗಳ ಅನುಪಸ್ಥಿತಿಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವುದಲ್ಲದೆ, ಅವರು ಸಲ್ಲಿಸಿದ ಅಮೂಲ್ಯ ಸೇವೆಗೆ ನೀಡಿದ ಗೌರವವೂ ಕಡಿಮೆಯಾಗುತ್ತಿರುವಂತೆ ಕಾಣುತ್ತಿದೆ ಎಂದು ಮಹಾಪೌರರಿಗೆ ಮತ್ತು ಆಯುಕ್ತರಿಗೆ ಈ ವಿಷಯವನ್ನು ಪರಿಗಣಿಸಿ, ಸಂಬಂಧಿಸಿದವರಿಗೆ ನಿರ್ದೇಶನ ನೀಡಿ, ಹಿಂದೆ ಸ್ಥಾಪಿಸಲಾಗಿದ್ದ ಸ್ಥಳಗಳಲ್ಲಿಯೇ ರಸ್ತೆ ಹೆಸರಿನ ಫಲಕಗಳನ್ನು ಶೀಘ್ರವಾಗಿ ಮರುಸ್ಥಾಪಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ ಧಾರವಾಡ | ಮಕ್ಕಳ ಅಪಹರಣ ಪ್ರಕರಣ; ತನಿಖೆಗೆ ಸಮಿತಿ ನೇಮಕ; ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಈ ಸಂದರ್ಭದಲ್ಲಿ ನ್ಯಾಯವಾದಿ ಗೌರಮ್ಮ ಅಗಡಿ, ವಿಜಯಲಕ್ಷ್ಮೀ ಅಗಡಿ, ಉಮಾ ಅಗಡಿ, ಡಾ. ಬಸವರಾಜ ಅಗಡಿ, ಶಶಿಧರ ಅಗಡಿ, ಸಂಗಣ್ಣ ಹಿತ್ತಲಮನಿ, ದೀಪಕ ಅಗಡಿ, ಜಿಲೇಬಿ ಬಸಣ್ಣ ಸೇರಿದಂತೆ ವಾರ್ಡಿನ ನಾಗರಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...