ಧಾರವಾಡ | ಪರಿಸರ ಸ್ನೇಹಿ ಗಣಪತಿ ವಿಗ್ರಹ ಬಳಕೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ

Date:

ನಮ್ಮ ಶ್ರದ್ಧೆ ಪರಿಸರಕ್ಕೆ ಮಾರಕವಾಗಬಾರದು. ಇಂದು ನಾವು ಮಾಡುವ ಪೂಜೆ ಮುಂದಿನ ಪೀಳಿಗೆಗೆ ಶಾಪವಾಗಬಾರದು. ಈ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಿ. ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಪಿಒಪಿ ವಿಗ್ರಹಗಳನ್ನು ಮಾರಾಟ ಮಾಡಲು ಅವಕಾಶವಿಲ್ಲ. ಎಲ್ಲರೂ ಪರಿಸರ ಸ್ನೇಹಿ ಗಣಪತಿ ವಿಗ್ರಹ ತಂದು ಹಬ್ಬ ಆಚರಣೆ ಮಾಡಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಭವನದಲ್ಲಿ ಪಿಒಪಿ ಗಣೇಶ ವಿಗ್ರಹಗಳ ನಿಷೇಧ ಹಾಗೂ ನಿಯಂತ್ರಿಸುವ ಕುರಿತು ಜಲಮಾಲಿನ್ಯ ತಡೆ ಕಾರ್ಯಪಡೆ ಸಭೆ ಜರುಗಿಸಿ, ಮಾತನಾಡಿದ ಅವರು, “ಅಧಿಕಾರಿಗಳು ನಗರದಾದ್ಯಂತ ದಿಢೀರ್ ದಾಳಿ ನಡೆಸಿ, ಅಂತಹ ವಿಗ್ರಹಗಳು ಸಿಕ್ಕರೆ, ತಕ್ಷಣ ವಶಪಡಿಸಿಕೊಳ್ಳಬೇಕು. ಮಾರಾಟಗಾರರ ಮೇಲೆ ದಂಡ ವಿಧಿಸಬೇಕು. ಗಣಪತಿ ವಿಗ್ರಹ ಮಾರಾಟಗಾರರು ಪರಿಸರಸ್ನೇಹಿ ಮಣ್ಣಿನ ಗಣಪತಿಗಳನ್ನು ಮಾತ್ರ ಮಾರಾಟ ಮಾಡಬೇ. ಬೇರೆ ಜಿಲ್ಲೆಗಳಿಂದ ಪಿಒಪಿ ವಿಗ್ರಹಗಳು ಬರದಂತೆ ತಡೆಯಲು ಜಿಲ್ಲೆಯ ಗಡಿ ಭಾಗಗಳಲ್ಲಿ ಹಾಗೂ ಮಹಾನಗರದ ಗಡಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ, ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು. ಚೆಕ್‍ಪೋಸ್ಟ್‌ನಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು. ನಿಯಮ ಉಲ್ಲಂಘಿಸಿ ಸಾಗಾಟ ಮಾಡುವ ವಾಹನಗಳನ್ನು ಮತ್ತು ಪಿಒಪಿ ವಿಗ್ರಹಗಳನ್ನು ವಶಪಡಿಸಿಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ನಿಯಮ ಪಾಲನೆಯಲ್ಲಿ ಯಾವುದೇ ಪೊಲೀಸ್ ಅಧಿಕಾರಿ ನಿರ್ಲಕ್ಷ್ಯ ತೋರಿದ್ದು ಕಂಡುಬಂದಲ್ಲಿ, ಶಿಸ್ತು ಕ್ರಮ ಜರುಗಿಸಲಾಗುವುದು. ಪಿಒಪಿ ಗಣೇಶ ಮೂರ್ತಿಗಳ ಬಳಕೆಯನ್ನು ನಿಷೇಧಿಸುವ ಕುರಿತು ಕರ್ನಾಟಕ ಹೈಕೋರ್ಟ್ ಸ್ಪಷ್ಟ ನಿರ್ದೇಶನಗಳನ್ನು ನೀಡಿದೆ. ಪಿಒಪಿ ವಿಗ್ರಹಗಳು ನೀರಿನಲ್ಲಿ ಕರಗುವುದಿಲ್ಲ ಮತ್ತು ಅದರಲ್ಲಿರುವ ವಿಷಕಾರಿ ರಾಸಾಯನಿಕಗಳು ಕೆರೆ, ಬಾವಿ, ಹಳ್ಳ, ನದಿ ಸೇರಿ ಜಲಮೂಲಗಳನ್ನು ಕಲುಷಿತಗೊಳಿಸುತ್ತವೆ. ಇದು ಜಲಚರಗಳಿಗೆ ಮತ್ತು ಮಾನವನ ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾಗುವುದರಿಂದ ಹೈಕೋರ್ಟ್ ಈ ಕಠಿಣ ನಿಲುವನ್ನು ತೆಗೆದುಕೊಂಡಿದೆ. ಪೊಲೀಸ್, ಪರಿಸರ ಮಾಲಿನ್ಯ, ಮಹಾನಗರ ಪಾಲಿಕೆ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹೈಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕೆಂದು” ತಿಳಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಧಾರವಾಡ | ಕೆಲಸದಲ್ಲಿ ಬದ್ಧತೆ ಹೊಂದಿರುವ ಅಧಿಕಾರಿಗಳು ಇಲಾಖೆಯ ಆಸ್ತಿ: ಭುವನೇಶ್ ಪಾಟೀಲ

ಸಾರ್ವಜನಿಕರು ಪಿಒಪಿ ಸಾಗಾಣಿಕೆ, ದಾಸ್ತಾನು, ಮಾರಾಟ ಹಾಗೂ ತಯಾರಿಕೆ ಕಂಡು ಬಂದಲ್ಲಿ ಸಹಾಯವಾಣಿಗೆ ಕರೆ ಮಾಡಿ ಅಥವಾ ವಾಟ್ಸಪ್ ಮೂಲಕವು ಮಾಹಿತಿ ನೀಡಬಹುದಾಗಿದೆ. ಮಾಹಿತಿದಾರರ ಪರಿಚಯವನ್ನು ಗೌಪ್ಯವಾಗಿ ಇಡಲಾಗುವುದು. ಸಹಾಯವಾಣಿ: ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯ 0836-2445508 ಟೋಲ್ ಫ್ರೀ ನಂಬರ್:1077, ಧಾರವಾಡ ಉಪ ವಿಭಾಗಾಧಿಕಾರಿ ಕಚೇರಿ: 0836-2233860, ಧಾರವಾಡ ತಹಶೀಲ್ದಾರ ಕಚೇರಿ: 0836-2233822, ಅಳ್ಳಾವರ ತಹಶೀಲ್ದಾರ ಕಚೇರಿ: 0836-2385544, ಹುಬ್ಬಳ್ಳಿ ನಗರ: 0836-2358035, ಹುಬ್ಬಳ್ಳಿ: 0836-2233844, ಕಲಘಟಗಿ: 08370-284535, ನವಲಗುಂದ:08380-229240, ಅಣ್ಣಿಗೇರಿ:8618442759, ಕುಂದಗೋಳ:8304290239 ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 0836-2213888, 0836-2213889, 0836-2213869 ಹಾಗೂ ವಾಟ್ಸ್‍ಪ ಸಂಖ್ಯೆ: 8277803778 ಗೆ ಕರೆ ಮಾಡಿ ತಿಳಿಸಬಹುದು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...