ಧಾರವಾಡ | ಚುನಾವಣಾ ಕರ್ತವ್ಯ ಲೋಪ; ಹೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಅಮಾನತು

Date:

  • ಮಾದರಿ ನೀತಿಸಂಹಿತೆ ಜಾರಿಗೊಳಿಸಲು ಫ್ಲೈಯಿಂಗ್ ಸ್ಕ್ವಾಡ್‌ ರಚನೆ
  • ನೀತಿಸಂಹಿತೆ ನಿರ್ದೇಶನ ಪಾಲಿಸುವಲ್ಲಿ ಹೆಸ್ಕಾಂ ಅಧಿಕಾರಿ ವಿಫಲ

ಚುನಾವಣಾ ಕರ್ತವ್ಯ ಲೋಪ ಆರೋಪದ ಮೇಲೆ ಹೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಅವರನ್ನು ಅಮಾನತುಗೊಳಿಸಿ ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ.

ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮುಂಬರುವ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿಸಂಹಿತೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ರಚಿಸಲಾಗಿದ್ದು, ಹುಬ್ಬಳ್ಳಿಯ ಹೆಸ್ಕಾಂ ಕಾರ್ಪೊರೇಟ್ ಕಚೇರಿಯ ಕಾರ್ಯಪಾಲಕ ಎಂಜಿನಿಯರ್ ನಾಗರಾಜ್ ಕುಬಳ್ಳಿ ಅವರನ್ನು ನವಲಗುಂದ ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್‌ ಆಗಿ ನಿಯೋಜಿಸಲಾಗಿತ್ತು” ಎಂದು ಹೇಳಿದ್ದಾರೆ.

“ಎಂಜಿನಿಯರ್ ಆದೇಶವನ್ನು ಪಾಲಿಸಲಿಲ್ಲವೆಂದು ಆರೋಪಿಸಿದ್ದು, ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಆದರೆ, ಎಂಜಿನಿಯರ್ ಕರ್ತವ್ಯಕ್ಕೆ ಹಾಜರಾಗಲಿಲ್ಲ. ಬದಲಿಗೆ ನಿಯಮಗಳನ್ನು ಉಲ್ಲಂಘಿಸಿ ಬೇಜವಾಬ್ದಾರಿಯುತ ರೀತಿಯಲ್ಲಿ ನೋಟಿಸ್‌ಗೆ ಉತ್ತರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಹುಲಿ ಸಂರಕ್ಷಣಾ ಸಂಭ್ರಮ ದಿನ ವಿರೋಧಿಸಿ ಆದಿವಾಸಿಗಳಿಂದ ಶೋಕ ದಿನ ಆಚರಣೆ

“ಫ್ಲೈಯಿಂಗ್ ಸ್ಕ್ವಾಡ್‌ನ ಸದಸ್ಯರಿಗೆ ತಮ್ಮ ಮೊಬೈಲ್ ಫೋನ್‌ಗಳಲ್ಲಿ ಅಪ್ಲಿಕೇಶನ್ ಡೌನ್ಲೋಡ್ ಮಾಡಲು ನಿರ್ದೇಶಿಸಲಾಗಿದೆಯೆಂದು ಜಿಲ್ಲಾ ಚುನಾವಣಾ ಕಚೇರಿಯ ಪ್ರಕಟಣೆ ತಿಳಿಸಿದ್ದು, ಅಪ್ಲಿಕೇಶನ್ ಬಗ್ಗೆ ದಾಖಲಾಗುತ್ತಿರುವ ದೂರುಗಳಿಗೆ ಪ್ರತಿಕ್ರಿಯಿಸಲು ಅವರಿಗೆ ನಿರ್ದೇಶಿಸಲಾಗಿತ್ತು. ಆದರೆ, ನಾಗರಾಜ್ ನಿರ್ದೇಶನಗಳನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ” ಎಂದು ಹೇಳಿದ್ದಾರೆ.

“ಕಾರಣ ಕೇಳಿ ನೋಟಿಸ್ ಸ್ವೀಕರಿಸಿದ 24 ಗಂಟೆಗಳ ಒಳಗೆ ವೈಯಕ್ತಿಕವಾಗಿ ಉತ್ತರವನ್ನು ಸಲ್ಲಿಸುವಂತೆ ಅವರಿಗೆ ತಿಳಿಸಲಾಗಿತ್ತು. ಆದರೂ, ಅವರು ಇಮೇಲ್ ಮೂಲಕ ಉತ್ತರ ಕಳುಹಿಸಿದ್ದಾರೆ. ಅದು ಸ್ವೀಕಾರಾರ್ಹವಲ್ಲ” ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...