ಧಾರವಾಡ | ಮಾನವೀಯ ಮೌಲ್ಯಗಳ ಕುಸಿತವೇ ಅತ್ಯಾಚಾರ, ಕೊಲೆಗೆ ಕಾರಣ: ನಿವೃತ್ತ ನ್ಯಾ. ಸಂತೋಷ್ ಹೆಗಡೆ

Date:

ಮಾನವೀಯ ಮೌಲ್ಯಗಳ ಕುಸಿತ ಕಾರಣದಿಂದಾಗಿ ಅತ್ಯಾಚಾರ, ಕೊಲೆಗಳು ಇಂದು ಹೆಚ್ಚಾಗುತ್ತಿದೆ ಎಂದು ಕರ್ನಾಟಕದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗಡೆ ಹೇಳಿದರು.

ಧಾರವಾಡ ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂತ್ ಆರ್ಗನೈಸೇಷನ್(ಎಐಡಿವೈಒ) ವತಿಯಿಂದ ಮಹಿಳೆಯರ ಘನತೆ ಮತ್ತು ಮಾನವ ಮೌಲ್ಯ ಉಳಿಸೋಣ ವಲಯ ಮಟ್ಟದ ಯುವಜನರ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಈ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ನಡೆದ ನಿರ್ಭಯಾ ಘಟನೆಯ ಸಂದರ್ಭದಲ್ಲಿ ಇಡೀ ದೇಶವೇ ಎಚ್ಚೆತ್ತುಕೊಂಡು ಪ್ರತಿಭಟನೆ ನಡೆಸಿತ್ತು. ಅದೇ ರೀತಿ ಈಗಲೂ ಆಗಬೇಕಾಗಿದೆ. ಮಾದಕ ವಸ್ತುಗಳ ಹಾವಳಿ ಸಮಾಜದಲ್ಲಿ ಹೆಚ್ಚಾಗುತ್ತಿದ್ದು, ಅದರ ವಿರುದ್ಧ ಧ್ವನಿ ಎತ್ತಬೇಕಾಗಿದೆ. ಹಿಂದೆ ತಪ್ಪು ಮಾಡಿ ಶಿಕ್ಷೆ ಜೈಲು ಶಿಕ್ಷೆ ಅನುಭವಿಸಿ ಬಂದವರನ್ನು ಸಮಾಜ ಬಹಿಷ್ಕಾರ ಮಾಡುತ್ತಿತ್ತು. ಅವರಿಗೆ ಸಾಮಾಜಿಕ ಶಿಕ್ಷೆ ಆಗುತ್ತಿತ್ತು. ಆದರೆ ಅವರನ್ನು ಇಂದು ಸನ್ಮಾನ ಮಾಡುವ ಸ್ಥಿತಿಗೆ ನಮ್ಮ ಸಮಾಜ ತಲುಪಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀಮಂತಿಕೆಯನ್ನು ಒಂದು ಪೂಜಿಸುವ ಹಂತಕ್ಕೆ ಸಮಾಜ ಬಂದು ನಿಂತಿದೆ. ಪ್ರಾಮಾಣಿಕರನ್ನು ಹುಚ್ಚನೆಂದು ಕರೆಯಲಾಗುತ್ತಿದೆ. ತಪ್ಪು ಯಾರೇ ಮಾಡಿದರೂ ಅವರಿಗೆ ಶಿಕ್ಷೆ ಆಗಬೇಕು. ನ್ಯಾಯಾಲಯದಲ್ಲಿ ತೀರ್ಪು ಹೊರಬರುವಷ್ಟರಲ್ಲಿ ಆರೋಪಿಯೇ ಸತ್ತು ಹೋಗಿರುತ್ತಾನೆ. ಇದರಿಂದ ಅಪರಾಧ ಮಾಡುವವರಿಗೆ ಭಯವಿಲ್ಲವಾಗಿದೆ. ಹಿರಿಯರು ಕಟ್ಟಿ ಬೆಳೆಸಿದ ಮಾನವ ಮೌಲ್ಯಗಳನ್ನು ಅಳವಡಿಸಿಕೊಂಡು ಅಪರಾಧಗಳೇ ಇಲ್ಲದ ಸಮಾಜದ ನಿರ್ಮಾಣಕ್ಕೆ ಯುವಕರು ಮುಂದಾಗಬೇಕು ಎಂದರು.

IMG 20240920 113712

ಎಐಡಿವೈಓ ಅಖಿಲ ಭಾರತ ಉಪಾಧ್ಯಕ್ಷ ಡಾ. ಜಿ. ಶಶಿಕುಮಾರ್ ಮಾತನಾಡಿ, ಹುಬ್ಬಳ್ಳಿಯ ನೇಹ, ಅಂಜಲಿ, ಉತ್ತರ ಪ್ರದೇಶ ಮಹಾರಾಷ್ಟ್ರ, ಕೊಲ್ಕತ್ತದ ವೈದ್ಯ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ, ಕೊಲೆ ಘಟನೆಗಳು ಸೇರಿದಂತೆ ಹಲವಾರು ಗುಂಪು ಅತ್ಯಾಚಾರದ ಘಟನೆಗಳು ಸಮಾಜದಲ್ಲಿ ಆಘಾತ ಹಾಗೂ ಆಕ್ರೋಶವನ್ನು ಉಂಟುಮಾಡಿವೆ. ಆ ಘಟನೆಗಳಿಗೆ ಒಂದು ಪ್ರಮುಖ ಕಾರಣವೆಂದರೆ ನಿರುದ್ಯೋಗ ಸಮಸ್ಯೆ, ಬದುಕಿನ ಬಗ್ಗೆ ಇರುವ ಅಭದ್ರತೆಯೇ ಕಾರಣವಾಗಿದೆ ಎಂದರು.

ಯುವಕರಲ್ಲಿ ಮಾನಸಿಕ ಸ್ಥೈರ್ಯ ಹಾಗೂ ವೈಚಾರಿಕತೆಯನ್ನು ಬೆಳೆಸಲು ಈ ರೀತಿಯ ಸಮಾವೇಶವನ್ನು ಸಂಘಟಿಸಬೇಕಾಗಿದೆ. ನಿರ್ಭಯಾ ಘಟನೆ ನಂತರವೂ ಪ್ರತಿನಿತ್ಯ ಅಂತಹ ಘಟನೆಗಳು ನಡೆಯುತ್ತಿವೆ. ಇವುಗಳನ್ನು ತಡೆಯಲು ಯುವಕರು ವೈಯಕ್ತಿಕ ಮಟ್ಟದಲ್ಲಿ ಹಾಗೂ ಸಾಮಾಜಿಕವಾಗಿ ಪ್ರತಿಭಟಿಸಬೇಕಾದ ಅವಶ್ಯಕತೆ ಇದೆ. ಮಾದಕ ವಸ್ತುಗಳು, ಅಶ್ಲೀಲ ಸಿನಿಮಾ, ಪೋರ್ನೋಗ್ರಫಿ ವಿರುದ್ಧ ಧ್ವನಿ ಎತ್ತಬೇಕು ಎಂದರು.

ರಾಜ್ಯ ಅಧ್ಯಕ್ಷ ಶರಣಪ್ಪ ಉದ್ಬಾಳ್ ಮಾತನಾಡಿ, ನಿರುದ್ಯೋಗ ಸಮಸ್ಯೆ ವಿರುದ್ಧ ಹೋರಾಟಗಳನ್ನು ಕಟ್ಟುತ್ತಲೇ ಉನ್ನತ ಮೌಲ್ಯನೀತಿ ಸಂಸ್ಕೃತಿಯನ್ನು ಬೆಳೆಸಲು ಜಾಗೃತ ಕಾರ್ಯಕ್ರಮಗಳ ಹಮ್ಮಿಕೊಳ್ಳಬೇಕು ಎಂದು ಅಭಿಪ್ರಾಯಿಸಿದರು.

ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಕಾರ್ಯಕ್ರಮದ ಆಶಯ ಕುರಿತು ಮಾತನಾಡಿ, ಕೇವಲ ಪ್ರತಿಭಟಿಸಿದರೆ ಸಾಲದು. ಸಮಸ್ಯೆಗಳ ಮೂಲ ಕಾರಣಗಳ ಕುರಿತು ಚರ್ಚೆ ನಡೆಯಬೇಕಾಗಿದೆ ಎಂದರು.

ಇದನ್ನು ಓದಿದ್ದೀರಾ? ಬೆಳಗಾವಿ | ಖಾಸಗಿ ಕೃಷಿ ಮಾರುಕಟ್ಟೆಯ ಕಮಿಷನ್ ವಿರುದ್ಧ ರೈತ ಸಂಘಟನೆಯ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ

ವೇದಿಕೆಯಲ್ಲಿ ಹಿರಿಯ ಮನೋಚಿಕಿತ್ಸಕ ನಡಹಳ್ಳಿ ವಸಂತ್, ಮನೋವೈದ್ಯರಾದ ಡಾ. ಸುಜ್ಞಾನಿ ದೇವಿ ಪಾಟೀಲ್, ಧಾರವಾಡ ಜನಜಾಗೃತಿ ಅಭಿಯಾನದ ಸಲಹೆಗಾರ ರಾಮಾಂಜನಪ್ಪ ಅಲ್ದಳ್ಳಿ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...