ಧಾರವಾಡ | ಅಂಜುಮನ್ ಸಂಸ್ಥೆಯ ಹೆಸರು ಹೇಳಲು ವಿದ್ಯಾರ್ಥಿಗಳು ಮುಜುಗರಪಡುತ್ತಾರೆ: ಇಸ್ಮಾಯಿಲ್ ತಮಟಗಾರ್ ಬೇಸರ

Date:

ಅಂಜುಮನ್ ಸಂಸ್ಥೆಯಲ್ಲಿ ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಸಂತಸದ ವಿಚಾರ. ಆದರೆ, ಇಲ್ಲಿ ಕಲಿತು ಸಾಧನೆಗೈದ ಮಕ್ಕಳು ಸಂಸ್ಥೆಯ ಹೆಸರು ಹೇಳಲು ಮುಜುಗರಪಡುತ್ತಾರೆ ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ್ ಬೇಸರ ವ್ಯಕ್ತಪಡಿಸಿದರು.

ಧಾರವಾಡ ನಗರದ ಅಂಜುಮನ್ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಹಯೋಗದಲ್ಲಿ ನಗರದ ವಿದ್ಯಾವರ್ಧಕ ಸಂಘದ ನಾಡೋಜ ಡಾ.ಪಾಟೀಲ ಪುಟಪ್ಪ ಸಭಾಂಗಣದಲ್ಲಿ ನಡೆದ ಕಾಲೇಜಿನ 38ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

“ದುಶ್ಚಟಗಳಿಗೆ ಬಲಿಯಾಗಿ ವಿದ್ಯಾರ್ಥಿಗಳು ಜೀವನ ಹಾಳು ಮಾಡಿಕೊಳ್ಳದೆ, ಉಸಿರು ನಿಂತರೂ, ಹೆಸರು ಅಳಿಯದ ಸಾಧನೆ ಮಾಡುವ ಮೂಲಕ ಕಲಿತ ಸಂಸ್ಥೆ, ಕಲಿಸಿದ ಗುರು ಮತ್ತು ಪಾಲಕರಿಗೆ ಕೀರ್ತಿ ತರಬೇಕು. ವಿದ್ಯಾರ್ಥಿ ಬದುಕಿನಲ್ಲಿ ಆಗುವ ಸೋಲಿನಲ್ಲಿಯೂ ಗೆಲುವು ಸಾಧಿಸುವ ಛಲವಿರಬೇಕು. ಸತತ ಅಧ್ಯಯನ, ನಿರಂತರ ಪರಿಶ್ರಮ ಇದ್ದಾಗ ಸಾಧನೆ ಹಾದಿ ಸುಲಭವಾಗುತ್ತದೆ” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉನ್ನತ ಹುದ್ದೆ ಪಡೆದ ಯಾವುದೇ ಧರ್ಮದವರಾಗಿರಲಿ ತಾವು ಕಲಿತ ಸಂಸ್ಥೆಯನ್ನು ಮರೆಯದಿರುವುದೇ ವಿದ್ಯಾರ್ಥಿ ಲಕ್ಷಣವಾಗಬೇಕು ಮತ್ತು ಮಾನವೀಯ ಮೌಲ್ಯಗಳೊಂದಿಗೆ ಉತ್ತಮ‌ ನಾಗರಿಕರಾಗುವಂತೆ ಕರೆ ನೀಡಿದರು.

ಕರ್ನಾಟಕ ಉರ್ದು ಅಕ್ಯಾಡೆಮಿ ಅಧ್ಯಕ್ಷ ಮಹ್ಮದ್ ಅಲಿ ಖಾಜಿ ಮಾತನಾಡಿ, “ಉರ್ದು ಜಾಗತಿಕ ಭಾಷೆ. ಅಟಲ್ ಬಿಹಾರಿ ವಾಜಪೇಯಿ, ಎಲ್ ಕೆ ಅಡ್ವಾನಿಯಂಥ ನಾಯಕರು ಉರ್ದು ಭಾಷೆ ಅಧ್ಯಯನ ಮಾಡಿದ್ದಾರೆಂದು ಹೆಮ್ಮೆ ವ್ಯಕ್ತಪಡಿಸಿ, ಅಲಿಗಡ ವಿವಿಯಲ್ಲಿ ಉರ್ದು ಭಾಷೆಯಲ್ಲಿಯೇ ರಾಮಾಯಣ, ಮಹಾಭಾರತ ಬೋಧಿಸಲಾಗುತ್ತಿದೆ. ಭವಿಷ್ಯದಲ್ಲಿ ಒಳ್ಳೆಯ ದಿನ ಬರಲಿವೆ. ವಿದ್ಯಾರ್ಥಿಗಳು ಪಾಲಕರ ಪರಿಶ್ರಮ ವ್ಯರ್ಥ ಮಾಡದೆ, ಸಾರ್ಥಕ ಮಾಡಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಎನ್‌ಡಿಎ ಆಡಳಿತದಲ್ಲಿ ವ್ಯಾಪಕ ಗುಂಪು ಹತ್ಯೆ; ಎಸ್‌ಡಿಪಿಐ ಖಂಡನೆ

ಕಾರ್ಯಕ್ರಮದಲ್ಲಿ 2022-23ನೇ ಸಾಲಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಕುಮಾರಿ ಬಿಬಿ ಆಯೇಷಾ ಝಕೀರ್ ಹುಸೇನ್ ರೇಷಮವಾಲೆ, ಕುಮಾರಿ ಸೌಂದರ್ಯ ಚಾವದಲ, ಕುಮಾರಿ ಅಸ್ಮಾ, ಕುಮಾರಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕುಮಾರ ದೀಪಕ್ ದುರ್ಗಣ್ಣವರ, ಕುಮಾರ ಉಸ್ಮಾನ್ ನೈಕರ, ಹಾಗೂ ಕುಮಾರ ದದಾಖಳಂದರ ಜಮಖಂಡಿ, ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಿದರು.

ಅಂಜುಮನ್ ಪದಾಧಿಕಾರಿ ಡಾ. ಎಸ್ ಎಸ್ ಸರಗಿರೋ, ಮಹ್ಮದ್ ಶಫಿ ಕಳ್ಳಿಮನಿ, ಮಹ್ಮದ್ ರಫೀಕ್ ಶಿರಹಟ್ಟಿ, ಯಾಸೀನ್ ಹಾವೇರಿಪೇಟಿ, ಜನಾಬ ಖಲೀಲ್ ದಾಸನಕೊಪ್ಪ, ಪತ್ರಿಕೋದ್ಯಮದ ಮುಖ್ಯಸ್ಥ ಡಾ. ಎಸ್ ಎಸ್ ಅದೋನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...