ಧಾರವಾಡ | ಸಂವಿಧಾನದ ಜಾಗೃತಿ ಅಭಿಯಾನ ಅನುಷ್ಠಾನದಲ್ಲಿ ಅಗ್ರಸ್ಥಾನ

Date:

ಸಂವಿಧಾನದ ಜಾಗೃತಿ ಅಭಿಯಾನವನ್ನು ಅನುಷ್ಠಾನಗೊಳಿಸುವಲ್ಲಿ ಧಾರವಾಡ ಜಿಲ್ಲೆ ಅಗ್ರಸ್ಥಾನದಲ್ಲಿದೆ. ಭಾರತದ ಸಂವಿಧಾನವನ್ನು ಅಂಗೀಕರಿಸಿ 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ಜಾಥಾವನ್ನು ಗಣರಾಜ್ಯೋತ್ಸವ ದಿನದಂದು ಇಡೀ ರಾಜ್ಯದಲ್ಲಿ ಆರಂಭಿಸಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಲಾಗಿತ್ತು. ಈ ಜಾಥಾವು ಜಿಲ್ಲೆಯ 72 ಗ್ರಾಮ ಪಂಚಾಯಿತಿಗಳು ಮತ್ತು 16 ವಾರ್ಡ್‌ಗಳಲ್ಲಿ ಸಂಚರಿಸಿದೆ.

ರಾಜ್ಯದ 31 ಜಿಲ್ಲೆಗಳ ಪೈಕಿ ಧಾರವಾಡ 700ಕ್ಕೆ 600 ಅಂಕ ಪಡೆದು ಮೊದಲ ಸ್ಥಾನದಲ್ಲಿದ್ದರೆ, ಕೋಲಾರ 210 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಬಾಗಲಕೋಟೆ 200, ಬೆಳಗಾವಿ 180 ಹಾಗೂ ಕಲಬುರಗಿ 180 ಅಂಕ ಪಡೆದಿವೆ. ಮಂಡ್ಯ, ಯಾದಗಿರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಶೂನ್ಯ ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿ. ಆರ್. ಅಂಬೇಡ್ಕರ್ ಅವರ 15 ಅಡಿ ಎತ್ತರದ ಭಾವಚಿತ್ರ ಹಾಗೂ ದೊಡ್ಡ ಎಲ್‌ಇಡಿ ಪರದೆ ಹೊತ್ತ ವಾಹನ ಜಿಲ್ಲೆಯಲ್ಲಿ ಸಂಚರಿಸುತ್ತಿದೆ. ಸಂವಿಧಾನದ ಮುನ್ನುಡಿ ಮತ್ತು ಮುಖ್ಯ ಲಕ್ಷಣಗಳನ್ನು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪರದೆಯ ಮೇಲೆ ಪ್ರದರ್ಶಿಸಲಾಗುತ್ತಿದೆ.

ಜಾಥಾದಲ್ಲಿ ತಜ್ಞರಿಂದ ಉಪನ್ಯಾಸ, ಕ್ಯಾಂಡಲ್ ಮತ್ತು ಟಾರ್ಚ್ ಲೈಟ್ ಮೆರವಣಿಗೆ, ಸಾಂಸ್ಕೃತಿಕ ತಂಡಗಳಿಂದ ಸಂಗೀತ ಮತ್ತು ನೃತ್ಯದ ಜೊತೆಗೆ ಶಾಲಾ- ಕಾಲೇಜುಗಳಲ್ಲಿ ಸಂವಿಧಾನದ ಕುರಿತು ಸ್ಪರ್ಧೆಗಳು ಮತ್ತು ಸಂವಿಧಾನದ ಮುಖ್ಯಾಂಶಗಳ ಕುರಿತು ಪವರ್ ಪಾಯಿಂಟ್ ಮೂಲಕ ವಿವರಣೆ ನೀಡಲಾಗುವುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...