ಧಾರವಾಡ | ಯೂರಿಯಾ ಗೊಬ್ಬರಕ್ಕೆ ಪರ್ಯಾಯವಾಗಿ ‘ನ್ಯಾನೊ ಯೂರಿಯಾ’ ಬಳಸಲು ಜಿಲ್ಲಾಧಿಕಾರಿ ಸೂಚನೆ

Date:

ರೈತರಿಗೆ ಶಿಫಾರಸು ಮಾಡಿದ ಪ್ರಮಾಣಕ್ಕಿಂತ ಹೆಚ್ಚಿನ ರಸಗೊಬ್ಬರವನ್ನು ಬಳಸದಂತೆ ಜಾಗೃತಿ ಮೂಡಿಸಲು ಹಾಗೂ ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿರುವ ನವೀನ ತಾಂತ್ರಿಕತೆಯಾದ ʼನ್ಯಾನೊ ಯೂರಿಯಾʼ ಬಳಕೆ ಮಾಡುವಂತೆ ರೈತರಲ್ಲಿ ಅರಿವು ಮೂಡಿಸಲು ಹೆಚ್ಚಿನ ಪ್ರಚಾರಕೈಗೊಳ್ಳಲು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅಧಿಕಾರಿಗಳಿಗೆ ಸೂಚಿಸಿದರು.

2025-26ನೇ ಸಾಲಿನ ಮುಂಗಾರು ಹಂಗಾಮಿನ ರಸಗೊಬ್ಬರ ಪೂರೈಕೆ ಕುರಿತು ಜುಲೈ 28ರಂದು ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಎನ್ ಹೆಚ್ ಕೋನರೆಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ನೇತೃತ್ವದಲ್ಲಿ ಜಿಲ್ಲೆಯ ಮುಂಗಾರು ಹಂಗಾಮಿಗೆ ಪ್ರಸ್ತುತ ಅವಶ್ಯವಿರುವ ಯೂರಿಯಾ ರಸಗೊಬ್ಬರ ಕುರಿತು ಕಂದಾಯ ಹಾಗೂ ಕೃಷಿ ಇಲಾಖೆಯ ಎಲ್ಲ ಅಧಿಕಾರಿಗಳೊಂದಿಗೆ ಜರುಗಿದ ಸಭೆಯಲ್ಲಿ ಮಾತನಾಡಿದರು.

ಶಾಸಕ ಎನ್ ಎಚ್ ಕೋನರಡ್ಡಿ ಮಾತನಾಡಿ, “ಜಿಲ್ಲೆಯಲ್ಲಿ ಮುಂದಿನ ಒಂದು ವಾರದೊಳಗೆ ರೈತರು ತಮ್ಮ ಬೆಳೆಗಳಿಗೆ ಮೇಲು ಗೊಬ್ಬರವಾಗಿ ಯೂರಿಯಾ ರಸಗೊಬ್ಬರವನ್ನು ನೀಡುವುದು ಅತ್ಯವಶ್ಯವಿರುವ ಕಾರಣ ನಿಗದಿತ ಸಮಯದಲ್ಲಿ ರೈತರಿಗೆ ಯಾವುದೇ ತೊಂದರೆಯಾಗದಂತೆ ಪೂರೈಕೆ ಮಾಡಲು ಕ್ರಮವಹಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಬಿ ಅಂತರವಳ್ಳಿ ಮಾತನಾಡಿ, “ಪ್ರಸಕ್ತ ಸಾಲಿನ ಜುಲೈವರೆಗೆ ಜಿಲ್ಲೆಯ ಯೂರಿಯಾ ರಸಗೊಬ್ಬರದ ಒಟ್ಟು 17,223 ಮೆ.ಟನ್‍ಗಳ ಬೇಡಿಕೆ ಇದ್ದು, ಈವರೆಗೆ 23,108 ಮೆ.ಟನ್‍ಗಳಷ್ಟು ಸರಬರಾಜು ಆಗಿದ್ದು, 22,253 ಮೆ.ಟನ್‍ಗಳಷ್ಟು ವಿತರಣೆಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಭೂಗೋಳಶಾಸ್ತ್ರ ವಿಷಯದತ್ತ ಎಲ್ಲರ ಚಿತ್ತ ಹೊರಳಬೇಕು: ಡಾ. ಐ ಎ ಮುಲ್ಲಾ

“ಕಳೆದ ಮುಂಗಾರು ಹಂಗಾಮಿಗೆ ಹೋಲಿಸಿದರೆ ಮೆಕ್ಕೆಜೋಳ ಬೆಳೆಯು ಸರಿಸುಮಾರು 13,000 ಹೆಕ್ಟೇರ್‌ಗಳಷ್ಟು, ಹತ್ತಿ 4,100 ಹೆಕ್ಟೇರ್‌, ಕಬ್ಬು 2,100 ಹೆಕ್ಟೇರ್‌ ಅಧಿಕವಾಗಿ ಬಿತ್ತನೆಯಾಗಿರುತ್ತದೆ. ಜೂನ್ ಎರಡನೇ ವಾರದಲ್ಲಿ ಆದ ಹೆಚ್ಚಿನ ಮಳೆಯಿಂದಾಗಿ ಮುಂಚಿತವಾಗಿ ಬಿತ್ತನೆಯಾದ ಕ್ಷೇತ್ರದಲ್ಲಿ ಹಾನಿಯಾದ ಕಾರಣ ಅಂದಾಜು 13,000 ಹೆಕ್ಟೇರ್ ಕ್ಷೇತ್ರದಲ್ಲಿ ಮರುಬಿತ್ತನೆಯಾಗಿದ್ದು, ರೈತರು ಪರ್ಯಾಯವಾಗಿ ಮುಸುಕಿನ ಜೋಳ ಮತ್ತು ಹತ್ತಿ ಬಿತ್ತನೆ ಮಾಡಿದ್ದಾರೆ. ಈ ಕಾರಣಕ್ಕಾಗಿ ಮತ್ತು ರೈತರು ವಿವಿಧ ಬೆಳೆಗಳಿಗೆ ಶಿಫಾರಸಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ರಸಗೊಬ್ಬರವನ್ನು ಬಳಸುತ್ತಿರುವುದರಿಂದ ಯೂರಿಯಾ ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಉಂಟಾಗಿರುತ್ತದೆ” ಎಂದರು.

ಸಭೆಯಲ್ಲಿ ಜಿಲ್ಲೆಯ ಜಂಟಿ ಕೃಷಿ ಇಲಾಖಾ ಉಪವಿಭಾಗಾಧಿಕಾರಿ ಶಾಲಂ ಹುಸೇನ, ಉಪಕೃಷಿ ನಿರ್ದೇಶಕ ಸಂದೀಪ ಹಾಗೂ ಜಯಶ್ರೀ ಹಿರೇಮಠ ಸೇರಿದಂತೆ ಎಲ್ಲ ತಾಲೂಕಿನ ತಹಶೀಲ್ದಾರರು ಹಾಗೂ ಸಹಾಯಕ ಕೃಷಿ ನಿರ್ದೇಶಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...