ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗೆ
ನವೆಂಬರ್ 5 ರಿಂದ ಜನೆವರಿ 3, 2026 ರವರೆಗೆ ಧಾರವಾಡ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ರ ಕಲಂ 163 (1), (2) ಮತ್ತು (3) ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮಹಾರಾಷ್ಟ್ರ ಬೀಳೂರು ಗ್ರಾಮದ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಧಾರವಾಡ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗೃತಾ ಕ್ರಮವಾಗಿ ನವೆಂಬರ್ 05, 2025 ರಿಂದ ಜನೆವರಿ 03, 2026 ರವರೆಗೆ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸಿ, ನವೆಂಬರ್ 4 ರಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.




