ಧಾರವಾಡ | ಕಳೆದುಕೊಂಡಿದ್ದ 175 ಮೊಬೈಲ್‍ಗಳನ್ನು ಗ್ರಾಹಕರಿಗೆ ಹಿಂದುರುಗಿಸಿದ ಜಿಲ್ಲಾ ಪೊಲೀಸ್ ಇಲಾಖೆ

Date:

ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿ 2023 ರಿಂದ ಇಲ್ಲಿಯವರೆಗೆ ಒಟ್ಟು 620 ಮೊಬೈಲ್ ಫೋನ್‍ಗಳನ್ನು ಸಾರ್ವಜನಿಕರು ಕಳೆದುಕೊಂಡಿದ್ದು, ದೂರು ನೀಡಿದ್ದ ಹಿನ್ನೆಲೆಯಲ್ಲಿ, ಅವುಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಮಾಡಿ ಇದೇ 2025 ನೇ ವಾರ್ಷಿಕ ಜುಲೈ ತಿಂಗಳವರೆಗೂ 175 ಮೊಬೈಲ್‍ಗಳನ್ನು ಕಳೆದುಕೊಂಡವರಿಗೆ ಜಿಲ್ಲಾ ಪೊಲೀಸ್ ಇಲಾಖೆ ಹಿಂದಿರುಗಿಸಿದೆ.

ಅದರಂತೆ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, 2025ರೇ ಆಗಸ್ಟ್ 01 ರಿಂದ ಇಲ್ಲಿಯವರೆಗೂ ಸಿ.ಇ.ಐ.ಆರ್. ಪೋರ್ಟಲ್ ಮೂಲಕ ಪತ್ತೆ ಮಾಡಿದ ಅಂದಾಜು ರೂ. 7,94,400 ಗಳ ಮೌಲ್ಯದ ಒಟ್ಟು 50 ಮೊಬೈಲ್ ಫೋನ್‍ಗಳನ್ನು ಪತ್ತೆ ಮಾಡಿದ್ದು, ಅವುಗಳನ್ನು ನ.6ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ನೇತೃತ್ವದಲ್ಲಿ, ಮೊಬೈಲ್ ಫೋನ್‍ಗಳನ್ನು ಕಳೆದುಕೊಂಡವರಿಗೆ ಹಿಂದಿರುಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಮೊಬೈಲ್ ಫೋನ್‍ಗಳನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಾನಂದ ಕಟಗಿ ಮಾರ್ಗದರ್ಶನದಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಮಾಡುವಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್‍ಗಳಾದ ಶರಣೇಶ ಜಾಲಿಹಾಳ, ಅಭಿಜಿತ.ಎ., ಎಎಸ್‍ಐ ಉಲ್ಲಾಸ್ ದುದಾಳಕರ ಹಾಗೂ ಸಿಬ್ಬಂದಿಗಳಾದ ಎಸ್.ಐ.ಜವಳಿ, ಬಸವರಾಜ ಬನ್ನಟ್ಟಿ,  ಶಶೀಧರ ಕೊಚ್ಚರಗಿ, ಬಸವರಾಜ ಶಿರಕೋಳ, ಎನ್.ಬಿ. ಕಂಬೋಗಿ, ಎಮ್.ಜಿ.ಕರ್ಲವಾಡ, ಸಂಗೀತಾ.ಎಮ್.ಸೋಗಿ, ಎಂ.ಟಿ.ಗುಡ್ಡಪ್ಪನವರ, ಪರಮೇಶ್ವರ ಬಾಗಲಕೋಟಿ, ಯಲ್ಲಾನಾಯಕ ಪಾಟೀಲ, ಎನ್.ಬಿ.ಕರಜಗಿ, ರಮೇಶ ಕಟ್ಟಿ., ಕೃಷ್ಣಾ, ಸುಜಾತಾ ಕುರಿ ತನಿಖಾ ತಂಡದಲ್ಲಿದ್ದು ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...