ಧಾರವಾಡ | ಸೈಬರ್ ವಂಚಕರ ಜಾಲಕ್ಕೆ ಗುರಿಯಾಗದಿರಿ: ಪ್ರಸನ್ನ ಕುಲಕರ್ಣಿ

Date:

ಮಾನವ ವಿಜ್ಞಾನ ತಂತ್ರಜ್ಞಾನದ ಪ್ರಗತಿಯ ಫಲವಾಗಿ ರೂಪಿತವಾದ ಸೈಬರನ್ನು ಋಣಾತ್ಮಕವಾಗಿ ಬಳಸುವುದರ ಫಲವಾಗಿ ಸೈಬರ್ ಕ್ರೈಂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೈಬರ್ ವಂಚಕರ ಜಾಲಕ್ಕೆ ಸಿಲುಕದಂತೆ ಎಚ್ಚರವಹಿಸಬೇಕು ಎಂದು ಅಂಜುಮನ್ ಕಾಲೇಜಿನಲ್ಲಿ “ಕುಂದು ಕೊರತೆ ನಿವಾರಣಾ ಕೋಶ” ವತಿಯಿಂದ “ಆನ್ಲೈನ್ ವಂಚನೆ ಮತ್ತು ಆರ್ಥಿಕ ಸಾಕ್ಷರತೆ” ಜಾಗೃತ ಕಾರ್ಯಕ್ರಮದಲ್ಲಿ ಪ್ರಸನ್ನ ಕುಲಕರ್ಣಿ ಮಾತನಾಡಿ ತಿಳಿಸಿದರು.

ಯಾರೂ ಆನ್ಲೈನ್ ನಲ್ಲಿ ಬ್ಯಾಂಕಿಂಗ್ ಖಾತೆ ಕುರಿತು ವಿವರವಾದ ಮಾಹಿತಿಯನ್ನು ಕೊಡಬೇಡಿ. ಅತಿಯಾದರೆ ಅಮೃತವು ವಿಷ ಎನ್ನುವಂತೆ ಕೃತಕ ಬುದ್ಧಿಮತ್ತೆಯನ್ನು ಹಿತವಾಗಿ ಹಾಗೂ ಮಿತವಾಗಿ ಬಳಸಬೇಕು. ಸೈಬರ್ ತ್ವರಿತ ಆನ್ಲೈನ್ ಸಾಲ, ಡಿಜಿಟಲ್ ಅರೆಸ್ಟ್ ಗಳಂತಹ ವಿವಿಧ ರೂಪಗಳನ್ನು ಹೊಂದಿದೆ. ಇದನ್ನು ಧನಾತ್ಮಕವಾಗಿ ಬಳಸಬೇಕು ಎಂದರು.

ಪ್ರಶಾಂತ್ ಮಟಗಿ ಮಾತನಾಡಿ, ಸೈಬರ್ ಕ್ರೈಂ’ನ ಪ್ರಮುಖ ಅಂಶಗಳನ್ನು ಸುಶಿಕ್ಷಿತ, ಬುದ್ಧಿವಂತ ಜನರಿಂದ ಉಂಟಾಗುವ ಅಪರಾಧಗಳ ಕುರಿತು ವಿವರಿಸಿದರು. ಕಾಲೇಜಿನ ಪ್ರಾಚಾರ್ಯ ಡಾ. ಐ. ಎ. ಮುಲ್ಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪ್ರಸ್ತುತ ಮೊಬೈಲ್ ಯುಗವು ರಕ್ತ ಬಿಜಾಸುರನಂತೆ ಕೃತಕ ಬುದ್ಧಿಮತ್ತೆ ಹಾಗೂ ಸೈಬರ್ ಕ್ರೈಂ ಗಳಾಗಿವೆ. ಇದಕ್ಕೆ ಬುದ್ದಿವಂತರು, ಸುಶಿಕ್ಷಿತರುಗಳೇ ಬಲಿಯಾಗುತ್ತಿದ್ದಾರೆ. ಹೀಗಾಗಿ ಮೊಬೈಲ್ ಅನ್ನು ಮಿತವಾಗಿ, ಹಿತವಾಗಿ ಬಳಕೆ ಮಾಡಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ಧಿ ಓದಿದ್ದೀರಾ? ಧಾರವಾಡ | ವನ ಸಂರಕ್ಷಣೆಯ ಹೊಣೆ ಪ್ರತಿಯೊಬ್ಬರ ಮೇಲಿದೆ: ಸಚಿವ ಈಶ್ವರ ಖಂಡ್ರೆ

ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಡಾ. ಆಸ್ಮಾ ನಾಸ್ ಬಳ್ಳಾರಿ, ಐಕ್ಯೂ ಎಸಿ ಸಂಯೋಜಕ ಡಾ. ಏನ್.ಬಿ ನಾಲತವಾಡ ವೇದಿಕೆಯ ಮೇಲಿದ್ದರು. ಕಾರ್ಯಕ್ರಮದಲ್ಲಿ ಸಬಿಹಾ ಖಾಜಿ ಕುರಾನ್ ಪಠಿಸಿದರು. ಕು.ಆಕಾಂಕ್ಷ ಶ್ಲೋಕ ಪಠಿಸಿದರು. ಕುಂದು ಕೊರತೆ ನಿವಾರಣಾ ಕೋಶದ ಅಧ್ಯಕ್ಷೆ ಡಾ. ಆಸ್ಮಾ ಅಂಜುಮ ನದಾಫ್ ಸ್ವಾಗತಿಸಿ, ಅತಿಥಿಗಳ ಪರಿಚಯಿಸಿ, ನಿರೂಪಿಸಿದರು. ಕಾಲೇಜಿನ ಸಾಂಸ್ಕೃತಿಕ ಚಟುವಟಿಕೆಗಳ ಅಧ್ಯಕ್ಷೆ ಡಾ. ಸೌಭಾಗ್ಯ ಜಾಧವ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...