ಧಾರವಾಡ | ಡಾ. ಪಂಚಾಕ್ಷರಿ ಹಿರೇಮಠ ಮಾನವೀಯತೆ ಧ್ವನಿಯಾಗಿದ್ದರು: ಡಾ. ಎಸ್. ಪಿ. ಪದ್ಮಪ್ರಸಾದ

Date:

ವಿದ್ಯಾವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ ಬಹುಭಾಷಾ ವಿಶಾರದರು ಮಾತ್ರವಲ್ಲದೆ, ಅಂತರಾಷ್ಟ್ರೀಯ ಮಟ್ಟದ ವಿದ್ವಾಂಸರು. ಅವರು ಮಾನವೀಯತೆ ಹಾಗೂ ಪ್ರಾಮಾಣಿಕತೆಯ ಧ್ವನಿಯಾಗಿದ್ದರು ಎಂದು ತುಮಕೂರಿನ ಸಾಹಿತಿ ಡಾ. ಎಸ್. ಪಿ. ಪದ್ಮಪ್ರಸಾದ ಹೇಳಿದರು.

ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ, ಡಾ. ಪಂಚಾಕ್ಷರಿ ಹಿರೇಮಠ ಅವರ 93ನೇ ಜನ್ಮದಿನದ ಪ್ರಯುಕ್ತ ಡಾ. ಪಂಚಾಕ್ಷರಿ ಹಿರೇಮಠ ಅವರ “ಆತ್ಮಸಖಿ ತುಂಬು ಹೃದಯ ಬಟ್ಟಲನ” ಹಾಗೂ “ಕಾಶ್ಮೀರದ ಮಹಾಯೋಗಿನಿ ಲಲ್ಲೇಶ್ವರಿ” ಎರಡು ಕೃತಿ ಲೋಕಾರ್ಪಣೆ ಮಾಡಿ ಗ್ರಂಥ ಪರಿಚಯಿಸಿ ಮಾತನಾಡಿದರು. 

ಡಾ. ಪಂಚಾಕ್ಷರಿ ಹಿರೇಮಠ ಒಬ್ಬ ಭಾವಜೀವಿ. ಸಂವೇದನಾಶೀಲರು. ಭಕ್ತಿಭಾವದಿಂದ ಬದುಕಿದವರು.  ಪ್ರಬಂಧ, ಕಥೆ, ವಿಮರ್ಶೆ ಹಾಗೂ ಅನುವಾದ ಹೀಗೆ ಸಾಹಿತ್ಯದ ವಿವಿಧ ಕ್ಷೇತ್ರದಲ್ಲಿ ಶ್ರದ್ಧೆಯಿಂದ ಸಾಹಿತ್ಯ ಕೃಷಿ ಮಾಡಿದ ಮೇರು ವಿದ್ವಾಂಸರು. ಪ್ರೀತಿಯೇ ಅವರ ಸಾಹಿತ್ಯದ ಜೀವಾಳವಾಗಿತ್ತು. ಅವರು ಶರಣ್ಯಭಾವ ಹಾಗೂ ಶರಣಭಾವದವರು. ಬರೆದಂತೆ ಬದುಕಿದವರು. ಅವರ ಬರವಣಿಗೆ ಬರೀ ಅಕ್ಷರಗಳಲ್ಲ, ಸಾರ್ಥಕ ಬದುಕಿನ ಸೂತ್ರಗಳು. ಒಂದು ನೂರಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ ಅವರು ಅನುವಾದ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅನನ್ಯ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೈದ್ರಾಬಾದ ಕರ್ನಾಟಕದ ವಿಮೋಚನೆ ಸೇರಿದಂತೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಮಹಾನ್ ದೇಶಭಕ್ತರು. ಅವರ ಬರಹಗಳಲ್ಲಿ ಪ್ರೀತಿ, ವಿನಯತೆ, ಸೌಹಾರ್ಧತೆ, ನೋವು, ಕುಟುಂಬವತ್ಸಲತೆ, ಸರಳತೆ, ಸತ್ಯನಿಷ್ಠೆಗಳಿವೆ. ಅವರು ತಮ್ಮ ನಡೆ-ನುಡಿಗಳಲ್ಲಿ ಇನ್ನೂ ಜೀವಂತವಾಗಿದ್ದಾರೆ. ಸತ್ಯ ಹಾಗೂ ನೈತಿಕತೆಗಳೇ ಅವರ ಜೀವನದ ಉಸಿರಾಗಿದ್ದವು ಎಂದು ಹೇಳಿದರು.

ಪ್ರೊ. ಮಲ್ಲಿಕಾರ್ಜುನ ಹಿರೇಮಠ ಮಾನತಾಡಿ, ಡಾ. ಪಂಚಾಕ್ಷರಿ ಹಿರೇಮಠ ಎಲ್ಲರಂತೆ ಬದುಕದೇ ಎಲ್ಲರಿಗಾಗಿ ಬದುಕಿದ ಸಾರ್ಥಕ ಬದುಕಿನ ಪುಣ್ಯಪುರುಷರು. ಹೃದಯ ವೈಶಾಲ್ಯತೆಯ ಅವರು ಎಲ್ಲರ ಹೃದಯ ಹೃದಯಗಳನ್ನು ಕೂಡಿಸುವ ಕೆಲಸ ಮಾಡಿದರು. ಅವರದು ಸೌಹಾರ್ದತೆಯ ಸಾರ್ಥಕ ಬದುಕು ಎಂದರು.

ದತ್ತಿದಾನಿ ಮೃತ್ಯುಂಜಯ ಹಿರೇಮಠ ಮಾತನಾಡಿದರು. ಇದೇ ಸಂದರ್ಭದಲ್ಲಿ ಗಣ್ಯರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕ.ವಿ.ವ. ಸಂಘದ ಅಧ್ಯಕ್ಷರಾದ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಶಂಕರ ಕುಂಬಿ ಉಪಸ್ಥಿತರಿದ್ದರು. ಲಿಂಗಯ್ಯ ಹಿರೇಮಠ ಪ್ರಾರ್ಥಿಸಿದರು. ಡಾ. ಜಿನದತ್ತ ಹಡಗಲಿ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ, ಮಾತನಾಡಿದರು. ಶಿವಾನಂದ ಭಾವಿಕಟ್ಟಿ ನಿರೂಪಿಸಿದರು. ಸತೀಶ ತುರಮರಿ ವಂದಿಸಿದರು.

ಶ್ರೀನಿವಾಸ ವಾಡಪ್ಪಿ, ವೀರಣ್ಣ ಒಡ್ಡೀನ, ಡಾ. ಧನವಂತ ಹಾಜವಗೋಳ, ಶಾಂತಾದೇವಿ ಹಿರೇಮಠ, ಜಯದೇವ ಹಿರೇಮಠ, ವಿಜಯಶ್ರೀ ಹಿರೇಮಠ, ಸರೋಜಾ ಹಿರೇಮಠ, ಬಿ.ಎಸ್. ಶಿರೋಳ, ವಿಜಯಕಮಾರ ಡಂಬಳ, ಮಾರ್ಕಂಡೇಯ ದೊಡಮನಿ, ಅನ್ನದಾನಿ ಹಿರೇಮಠ ಸೇರಿದಂತೆ ಹಿರೇಮಠ ಪರಿವಾರದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...