ಧಾರವಾಡ | ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಬಹುತ್ವವನ್ನು ಎತ್ತಿ ಹಿಡಿದ ಲೇಖಕ: ದಾಮೋದರ ಮೌಜೋ

Date:

ದನಿಯಿಲ್ಲದವರ, ಸಮಾಜದ ಅಂಚಿನಲ್ಲಿರುವ ಜನಸಾಮಾನ್ಯರ ಕುರಿತು ಬರೆದ ಸಾಹಿತ್ಯ ಬಹುಕಾಲ ನಿಲ್ಲುತ್ತದೆ. ಡಾ ಸಿದ್ಧಲಿಂಗ ಪಟ್ಟಣಶೆಟ್ಟಿ ಅವರು ಭಾರತೀಯ ಭಾಷೆಗಳ ನಡುವಿನ ಸೇತುವೆಯಾಗಿ ಬಹುತ್ವವನ್ನು ಎತ್ತಿ ಹಿಡಿದ ಲೇಖಕ ಎಂದು ಗೋವಾದ ಜ್ಞಾನಪೀಠ ಪುರಸ್ಕೃತ ಸಾಹಿತಿ ದಾಮೋದರ ಮೌಜೋ ಹೇಳಿದರು.

ಧಾರವಾಡದ ಆಲೂರು ವೆಂಕಟರಾವ್‌ ಸಭಾಭವನದಲ್ಲಿ ಪ್ರೊಗ್ರೆಸಿವ್‌ ಕಲ್ಚರಲ್‌ ಅಸೋಸಿಯೇಶನ್‌ ಆಫ್‌ ಇಂಡಿಯಾ (ಪಿಸಿಎಐ) ಸಂಘಟನೆ ಏರ್ಪಡಿಸಿದ್ದ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪುರಸ್ಕಾರಕ್ಕೆ ಭಾಜನರಾದ ಸಿದ್ಧಲಿಂಗ ಪಟ್ಟಣಶೆಟ್ಟಿ ಅವರ ಅಭಿನಂದನ ಸಮಾರಂಭ ಹಾಗೂ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ನಾವು ಈ ಸಮಾಜದ ಓರೆಕೋರೆಗಳ ಕುರಿತು ನಮ್ಮ ಭಿನ್ನಮತವನ್ನು ದಾಖಲಿಸಲು ಬರೆಯಬೇಕು. ಅಂದಾಗ ಒಂದು ಹೊಸ ಎಚ್ಚರ ಮೂಡಲು ಸಾಧ್ಯ. ದೇಶದಲ್ಲಿ ಎಲ್ಲ ಭಾಷೆಗಳು ಶ್ರೇಷ್ಠವೇ. ಯಾವ ಭಾಷೆಯನ್ನೂ ನಾವು ತಿರಸ್ಕರಿಸಬಾರದು. ಆದರೆ ಯಾವುದೇ ಭಾಷೆಯ ಹೇರಿಕೆಯಿಂದ ಸಮಸ್ಯೆಗಳು ಉದ್ಭವಿಸುತ್ತವೆ. ಯುವ ಲೇಖಕರು ತಮ್ಮ ಪರಂಪರೆಯ ಮೌಲ್ಯಗಳನ್ನು ಹೀರಿಕೊಂಡು ಹೊಸದನ್ನು ಕಟ್ಟಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಬುಕ್‌ ಬ್ರಹ್ಮ ಸಂಚಾಲಕ ದೇವು ಪತ್ತಾರ ಸಿದ್ಧಲಿಂಗ ಪಟ್ಟಣಶೆಟ್ಟಿ ಅವರ ಕಾವ್ಯದ ಕುರಿತು ಮಾತನಾಡಿ, ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿಯವರು ಆರೂವರೆ ದಶಕಗಳಿಂದ ಕಾವ್ಯ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರತಿಮೆಗಳು ಅವರ ಕಾವ್ಯದ ವಿಶೇಷ ಗುಣವಾಗಿವೆ. ಪಟ್ಟಣಶೆಟ್ಟರ ಕಾವ್ಯವೆಂದರೆ ಒಂದು ರೀತಿ ಪ್ರತಿಮೆಗಳ ಸಮೂಹ. ಅವರ ಕವಿತೆಯಿಂದ ಕವಿತೆಗೆ ಬದಲಾವಣೆ, ಬೆಳವಣಿಗೆ ಎದ್ದುಕಾಣುತ್ತದೆ. ಅಲ್ಲಿ ಕವಿತೆ ಕಟ್ಟುವ ಕಸುಬುದಾರಿಕೆ ಕಾಣುತ್ತದೆ ಎಂದರು. ಅವರು ಯಾವಾಗಲೂ ಅಧಿಕಾರ ಕ್ರೇಂದ್ರದಿಂದ ಅಂತರ ಕಾಯ್ದುಕೊಂಡು ಬಂದವರು. ಹಾಗಂತ ತಪ್ಪುಗಳು ಕಂಡಾಗ ಖಂಡಿಸದೇ ಕೂತವರಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೇಖಕಿ ಡಾ.ಪ್ರಜ್ಞಾ ಮತ್ತಿಹಳ್ಳಿ ಸಿದ್ಧಲಿಂಗ ಪಟ್ಟಣಶೆಟ್ಟಿ ಗದ್ಯದ ಬಗ್ಗೆ ಮಾತನಾಡಿ, ಕಂಡುಂಡದ್ದನ್ನು ಬಿಡುಬೀಸಾಗಿ ಬರೆದಿರುವುದು, ಅನವಶ್ಯಕ ಹೊಗಳಿಕೆ ಮಾಡದೇ ತೆಗಳಲೂ ಹೋಗದೇ ಆಪ್ತವಾಗುವ ಗುಣ ಅವರ ಗದ್ಯ ಬರವಣಿಗೆಯಲ್ಲಿ ಕಾಣ ಸಿಗುತ್ತದೆ ಎಂದರು. ಧಾರವಾಡ ಜನಜಾಗೃತಿ ಅಭಿಯಾನದ ಸಲಹೆಗಾರ ರಾಮಾಂಜನಪ್ಪ ಆಲ್ದಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಟ್ಟಣಶೆಟ್ಟಿಯವರು ಸದಾ ನಮ್ಮ ಪ್ರಗತಿಪರ ಆಶಯದ ಕಾರ್ಯಕ್ರಮಗಳಿಗೆ ಬೆಂಬಲಿಸುತ್ತ ಬಂದಿದ್ದಾರೆ. ಯುವಜನತೆ ಹಿರಿಯರ ಸ್ಪೂರ್ತಿಯ ಮಾತುಗಳ ಆಶಯದಂತೆ ಸಾಂಸ್ಕೃತಿಕ ಚಳುವಳಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅಭಿನಂದನೆ ಸ್ವೀಕರಿಸಿದ ಪಟ್ಟಣಶೆಟ್ಟಿಯವರು ಯುವಲೇಖಕರು ಸತತ ಓದು ಬರವಣಿಗೆಯಿಂದ ಸಾಹಿತ್ಯದಲ್ಲಿ ಮುಂದುವರಿಯಬೇಕು. ಸಾಮಾನ್ಯ ಜನರ ಒಡನಾಟದಲ್ಲಿ ಬದುಕಿನ ಅನುಭವಗಳನ್ನು ದಾಖಲಿಸಬೇಕು ಎಂದರು.

ಇದನ್ನೂ ಓದಿ ನಿರುದ್ಯೋಗದ ಪ್ರಶ್ನೆಗೆ ನಿಗ್ರಹವೇ ಉತ್ತರವೇ?; ಉದ್ಯೋಗಾಕಾಂಕ್ಷಿಗಳಿಗೆ ಉತ್ತರಿಸುವವರಾರು?

ರಂಗಕರ್ಮಿ, ಶಿರೀಷ್‌ ಜೋಶಿ ಪಟ್ಟಣಶೆಟ್ಟರ ರಂಗಸಾಹಿತ್ಯದ ಕುರಿತು ಮಾತನಾಡಿದರು. ಮಲ್ಲು ಹುಡೇದ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಶ್ವಿನಿ ನಿರೂಪಿಸಿದರು. ಹೇಮಾ ಪಟ್ಟಣಶೆಟ್ಟಿ, ಸುನೀತಕುಮಾರ್‌ ಶೆಟ್ಟಿ‌, ಅಲಕಾ ರಾವ್, ಕಳಕೇಶ್‌ ಎಸ್ ಇದ್ದರು. ನಂತರ ಪಟ್ಟಣಶೆಟ್ಟಿಯವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಸುನಂದಾ ಕಡಮೆ, ವಿಠ್ಠಲ ದಳವಾಯಿ ಸಂವಾದ ನಡೆಸಿ ಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...