ಧಾರವಾಡ | ಬೆಳೆ ಹಾನಿಯಾದ ರೈತರ ಕರಡು ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಸೆ.7 ಕೊನೆಯ ದಿನ

Date:

ಕಳೆದ ಆಗಸ್ಟ್‌ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಧಾರವಾಡ ಜಿಲ್ಲೆಯಾದ್ಯಂತ ಸಾಕಷ್ಟು ಪ್ರಮಾಣದ ಬೆಳೆಹಾನಿಯಾಗಿರುವುದು ವರದಿಯಾಗಿದೆ. ಈ ವರದಿಯನ್ವಯ ಬೆಳೆ ಹಾನಿಯಾದ ರೈತರ ಕರಡು ಪಟ್ಟಿಯನ್ನು ಜಿಲ್ಲಾಡಳಿತ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್‌ 7ರೊಳಗಾಗಿ ಸಲ್ಲಿಸಲು ಕೋರಿದೆ.

2025-26ನೇ ಸಾಲಿನಲ್ಲಿ ಪ್ರವಾಹ ಹಾಗೂ ಅತೀವೃಷ್ಠಿಯಿಂದ ಆಗಸ್ಟ್ ತಿಂಗಳಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಉಂಟಾದ ಬೆಳೆಹಾನಿಗೆ ಸಂಬಂಧಿದಂತೆ, ಪರಿಹಾರವನ್ನು ಪಾವತಿಸುವ ಕುರಿತು ಜಂಟಿ ಸಮೀಕ್ಷೆಯನ್ನು ಜರುಗಿಸಲಾಗಿದೆ. ಜಂಟಿ ಸಮೀಕ್ಷೆಯ ಪರಿಶೀಲನಾ ವರದಿಯಂತೆ ಒಟ್ಟು 93,496.98 ಹೆಕ್ಟೇರ್ ಕ್ಷೇತ್ರಗಳಲ್ಲಿ ಬೆಳೆ ಹಾನಿಯಾದ ರೈತರ ಕರಡು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಧಿಕಾರಿಗಳ ಕಚೇರಿ, ಸಂಬಂಧಿಸಿದ ತಹಶೀಲ್ದಾರರ ಕಚೇರಿ, ಸಂಬಂಧಿಸಿದ ಗ್ರಾಮ ಪಂಚಾಯತ್ ಕಚೇರಿ, ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಅಂತರ್ಜಾಲ https://dharwad.nic.in/en/document-category/disaster-management/ ದಲ್ಲಿ ಈಗಾಗಲೇ ಪ್ರಕಟಿಸಲಾಗಿದೆ. ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ತಮ್ಮ ಲಿಖಿತ ಆಕ್ಷೇಪಣೆಗಳನ್ನು ಸಂಬಂಧಿಸಿದ ತಾಲೂಕಿನ ತಹಶೀಲ್ದಾರ, ಕೃಷಿ ಅಥವಾ ತೋಟಗಾರಿಕಾ ಕಚೇರಿಗಳಲ್ಲಿ ಹಾಗೂ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಸೆ.7ರ ಸಂಜೆ 5 ಗಂಟೆ ಒಳಗಾಗಿ ಸಲ್ಲಿಸಬೇಕು.

ಧಾರವಾಡ ತಾಲೂಕಿನಲ್ಲಿ 16,910.21 ಹೆಕ್ಟೇರ್ ಕೃಷಿ ಕ್ಷೇತ್ರ ಮತ್ತು 895 ಹೆಕ್ಟೇರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 17,805.21 ಹೆಕ್ಟೇರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಬ್ಬಳ್ಳಿ ತಾಲೂಕಿನಲ್ಲಿ 17,998.32 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆಗಳು ಹಾನಿಯಾಗಿವೆ. ಮತ್ತು ಹುಬ್ಬಳ್ಳಿ ನಗರ ತಾಲೂಕಿನಲ್ಲಿ 1,303.29 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆಗಳು ಹಾನಿಯಾಗಿವೆ. ನವಲಗುಂದ-23,993.98 ಹೆಕ್ಟೇರ್ ಕೃಷಿ ಕ್ಷೇತ್ರ ಮತ್ತು 2,323.37 ಹೆಕ್ಟೇರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 26,317.35 ಹೆಕ್ಟೇರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಅಣ್ಣಿಗೇರಿ ತಾಲೂಕಿನಲ್ಲಿ 15,324.87 ಹೆಕ್ಟೇರ್ ಕೃಷಿ ಕ್ಷೇತ್ರ ಮತ್ತು 1063 ಹೆಕ್ಟೇರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 16,387.87 ಹೆಕ್ಟೇರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ. ಕುಂದಗೋಳ ತಾಲೂಕಿನಲ್ಲಿ 13,440.23 ಹೆಕ್ಟೇರ್ ಕೃಷಿ ಕ್ಷೇತ್ರ ಮತ್ತು 244.71 ಹೆಕ್ಟೇರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 13,684.94 ಹೆಕ್ಟೇರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಇದನ್ನೂ ಓದಿ: ಧಾರವಾಡ | ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ, ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯಲ್ಲಿ 88,970.90 ಹೆಕ್ಟೇರ್ ಕೃಷಿ ಕ್ಷೇತ್ರದ ಬೆಳೆಗಳು ಮತ್ತು 4,526.08 ಹೆಕ್ಟೇರ್ ತೋಟಗಾರಿಕೆ ಪ್ರದೇಶದ ಬೆಳೆಗಳು ಸೇರಿದಂತೆ ಒಟ್ಟು 93,496.98 ಹೆಕ್ಟೇರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಸೆಪ್ಟೆಂಬರ್ 7ರಂದು ಸಂಜೆ 5 ಗಂಟೆವರೆಗೆ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸಿ, ಯಾದಿಯನ್ನು ಅಂತಿಮಗೊಳಿಸಲಾಗುವುದು. ನಿಗದಿಪಡಿಸಿದ ಅವಧಿಯ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...