ಧಾರವಾಡ | ಬಗೆಹರಿಯದ ಒಳಚರಂಡಿ ಸಮಸ್ಯೆ: ಪಾಲಿಕೆ, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ

Date:

ಒಳಚರಂಡಿ ಸಮಸ್ಯೆ ಬಗೆಹರಿಸಲು ಇನ್ನೂ ಕ್ರಮ ಕೈಗೊಂಡಿಲ್ಲ‌ ಎಂದು ಧಾರವಾಡ ನಗರದ ಬಿಡನಾಳ್ ಕ್ರಾಸ್‌ನ ಶಕ್ತಿ ನಗರದ ನಿವಾಸಿಗಳು ಮಹಾನಗರ ಪಾಲಿಕೆ ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯ ವಾರ್ಡ್ ನಂ. 80 ರ ಬಿಡನಾಳ್ ಕ್ರಾಸ್‌ನ ಪಿ.ಬಿ.ರಸ್ತೆಯ ಸಮೀಪವಿರುವ ಶಕ್ತಿನಗರದ ನಿವಾಸಿಗಳು ಪ್ರಮುಖ ಯುಜಿಡಿ ಸಂಪರ್ಕ ಸಮಸ್ಯೆಯನ್ನು ಎದುರಿಸುತ್ತಿದ್ದು ಈ ಸಮಸ್ಯೆ ಬಗೆಹರಿಸಲು ಒತ್ತಾಯಿಸುತ್ತಿದ್ದಾರೆ.

ಈ ಹಿಂದೆ ಈ ಕಾಲೋನಿಯು ಪುಣೆ ಬೆಂಗಳೂರು ಹೆದ್ದಾರಿ ಸಂಖ್ಯೆ 4ರಲ್ಲಿ ಹಾದುಹೋಗುವ ಒಳಚರಂಡಿ ಪೈಪ್‌ಲೈನ್‌ನೊಂದಿಗೆ ಯುಜಿಡಿ ಸಂಪರ್ಕವನ್ನು ಹೊಂದಿದ್ದು, ಹೆದ್ದಾರಿಯ ಅಗಲೀಕರಣ ಮತ್ತು ವಿಸ್ತರಣೆಯ ಸಮಯದಲ್ಲಿ ಒಳಚರಂಡಿ ಸಂಪರ್ಕವು ಮುಖ್ಯ ಒಳಚರಂಡಿ ಪೈಪ್‌ಲೈನ್‌ಗೆ ಹಾನಿಗೊಳಗಾಗಿರುವುದು ಮತ್ತು ಸಂಪರ್ಕ ಕಡಿತಗೊಂಡಿರುವುದು ತುಂಬಾ ದುರದೃಷ್ಟಕರ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 1 2

ರಸ್ತೆ ಬದಿಯಲ್ಲಿದ್ದ ಚೇಂಬರ್‌ಗಳು ಹಾಳಾಗಿವೆ. ಹೀಗಾಗಿ ನಾವು ಯುಜಿಡಿ ಸಂಪರ್ಕದಿಂದ ವಂಚಿತರಾಗಿದ್ದೇವೆ ಮತ್ತು ಕೊಳಚೆ ತ್ಯಾಜ್ಯಗಳನ್ನು ಖಾಲಿ ಇರುವ ಅಕ್ಕಪಕ್ಕದ ಪ್ಲಾಟ್‌ಗಳು ಮತ್ತು ಪಕ್ಕದ ರಸ್ತೆಗಳಲ್ಲಿ ಹೋಗುತ್ತಿದ್ದು, ಇದರಿಂದ ಗಂಭೀರ ನೈರ್ಮಲ್ಯ ಮತ್ತು ಆರೋಗ್ಯ ಸಮಸ್ಯೆಗಳು ಮತ್ತು ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎಂದು ನಿವಾಸಿಗಳು ದೂರಿದ್ದಾರೆ.

ರಸ್ತೆಗಳ ಅಗಲೀಕರಣದ ವೇಳೆ ಬೇಜವಾಬ್ದಾರಿಯಿಂದ ಕೊಳಚೆ ನೀರಿನ ಸಮಸ್ಯೆ ಉಂಟಾಗುತ್ತಿರುವುದನ್ನು ಎಚ್‌ಡಿಎಂಸಿ ಅಧಿಕಾರಿಗಳು ಹಾಗೂ ಚುನಾಯಿತ ರಾಜಕೀಯ ಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಹಾಳಾದ ಯುಜಿಡಿ ಸಂಪರ್ಕವನ್ನು ಸರಿಪಡಿಸುವಂತೆ ಪಾಲಿಕೆಗೆ ಹಲವು ಬಾರಿ ಮನವಿ ಮಾಡಿದ್ದರೂ ಸರಿಪಡಿಸಲು ಕ್ರಮ ಕೈಗೊಂಡಿಲ್ಲ ಎಂದು ಪಾಲಿಕೆ ವಿರುದ್ಧ ಸ್ಥಳಿಯರು ಆಕ್ರೋಶಗೊಂಡರು.

ಇದನ್ನು ಓದಿದ್ದೀರಾ? ಬಳ್ಳಾರಿ | ಪ್ರೊ. ಮೇತ್ರಿ ನೇಮಕಾತಿ ರದ್ದು ಹಿನ್ನೆಲೆ: ವಿಜಯನಗರ ಕೃಷ್ಣದೇವರಾಯ ವಿವಿ ಕುಲಪತಿಯಾಗಿ ಡಾ ಎಂ ಮುನಿರಾಜು

ಯುಜಿಡಿ ಚೇಂಬರ್‌ಗಳು ಸದಾ ತುಂಬಿ ತುಳುಕುತ್ತಿರುತ್ತವೆ. ವಾಸನೆ ಅಸಹನೀಯವಾಗಿದೆ. ಡೆಂಘೀ, ಮಲೇರಿಯಾ ಹೀಗೆ ನಾನಾ ರೋಗಗಳಿಂದ ನಾಗರಿಕರು ನರಳುತ್ತಿದ್ದಾರೆ. ಬಡಾವಣೆಯ ರಸ್ತೆಗಳು ಹದಗೆಟ್ಟಿದ್ದು, ವಾಸಕ್ಕೆ ಅಯೋಗ್ಯ ವಾತಾವರಣ ನಿರ್ಮಾಣವಾಗಿದೆ. ಅನೇಕ ಬಾರಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯ ಕುರಿತು ಚರ್ಚಿಸಿ 5 ವರ್ಷ ಕಳೆದರೂ ಏನೂ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳೇ ಬಂದು ಸಮಸ್ಯೆಗೆ ಗಮನ ಹರಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಮೂಲ ಸೌಕರ್ಯಗಳ ಉಲ್ಲಂಘನೆಯಾಗಿದೆ ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...