ಧಾರವಾಡ | ನಶಾ ಮುಕ್ತ ಹುಬ್ಬಳ್ಳಿ ಅಭಿಯಾನ: ವಿದ್ಯಾರ್ಥಿಗಳೊಂದಿಗೆ ಶೆಟ್ಟರ್ ಫೌಂಡೇಶನ್ ಸಂವಾದ

Date:

ಮಕ್ಕಳು ಓದಿ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರಲಿ ಎಂಂ ಬಯಕೆಯಿಂದ ಹೆತ್ತವರು ಕೂಲಿ‌ ಮಾಡಿ ಮಕ್ಕಳನ್ನು ಓದಿಸುತ್ತಾರೆ. ಆದರೆ ಯುವ ಸಮುದಾಯ ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸದೆ ದುಶ್ಚಟಗಳಿಗೆ ಬಲಿ ಆಗುತ್ತಿರುವುದು ವಿಪರ್ಯಸವಾಗಿದೆ ಎಂದು ಹುಬ್ಬಳ್ಳಿಯ ಉಣಕಲ್’ನ ತರಳಬಾಳು ಶಿಕ್ಷಣ ಸಂಸ್ಥೆಯಲ್ಲಿ ನಡೆದ “ನಶಾ ಮುಕ್ತ ಹುಬ್ಬಳ್ಳಿ ಅಭಿಯಾನದ” ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ‌ ಎಸ್.ಎಸ್.ಫೌಂಡೇಶನ್’ನ ಅಧ್ಯಕ್ಷ‌ ಸಂಕಲ್ಪ ಶೆಟ್ಟರ್ ಹೇಳಿದರು.

ವಕೀಲೆ ಮಧು ಗೋಟುರೆ ಮಾತನಾಡಿ ಕಾನೂನು ಬಾಹಿರವಾಗಿ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ನಡೆದರೆ, ಅಂತಹ ಅಪರಾಧ ಕೃತ್ಯಗಳಿಗೆ ಶಿಕ್ಷೆಗಳು ತಪ್ಪುವುದಿಲ್ಲ. ತಪ್ಪು ಮಾಡುವ ಪ್ರತಿಯೊಬ್ಬರಿಗೂ ಕಾನೂನಿನ ಅರಿವಿರಬೇಕು. ಕಾನೂನಿಗೆ ಹೆದರಿಯಾದರೂ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟವನ್ನು‌ ನಿಲ್ಲಸಬೇಕು. ವಿದ್ಯಾರ್ಥಿಗಳು ದುಶ್ಚಟಗಳಿಂದ ಸದಾ ದೂರವಿರಬೇಕು ಎಂದು ತಿಳಿಸಿದರು.

ವೈದ್ಯ ಕಾಮೇಶ್ ಜಾಲಿಕಾರ್ ಮಾತನಾಡಿ, ದುಶ್ಚಟಗಳಿಂದ ಆರೋಗ್ಯದ ಮೇಲೆ ಅತ್ಯಂತ ದುಷ್ಪರಿಣಾಮಗಳು ಆಗುತ್ತಿವೆ. ಯುವಕರು ದುಶ್ಟಗಳ‌ ಕಡೆಗೆ ಹೆಚ್ಚಾಗಿ ಗಮನಹರಿಸುತ್ತಿರುವುದು ದುರಂತರ ಸಂಗತಿಯಾಗಿದೆ ಎಂದರು. ಆರಕ್ಷಕ ವಿ ಎಸ್ ರಾಯಪುರ್ ಮಾತನಾಡಿ, ಹುಬ್ಬಳ್ಳಿ ಧಾರವಾಡ ಕಮಿಷನರೇಟ್ ಮಾದಕ ವ್ಯಸನಗಳ ಸೇವನೆ ಹಾಗೂ ಮಾರಾಟ ಜಾಲಗಳ ವಿರುದ್ಧ ಸೂಕ್ತ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗಿದೆ. ಮಾದಕ ವಸ್ತುಗಳ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ಧಾರವಾಡ | ಕ್ಷುಲ್ಲಕ ಕಾರಣಕ್ಕೆ ರಸ್ತೆ ಮಧ್ಯೆಯೇ ಗುಂಡಿನ ಕಾಳಗ: ಬಿಜೆಪಿ ಮುಖಂಡನ ಪುತ್ರ ಭಾಗಿ?

ಈ ಸಂದರ್ಭದಲ್ಲಿ ಎಸ್ ಎಂ ಸೋಮನಗೌಡ್ರ, ಆರ್ ಎಸ್ ಹನ್ನಿ, ರಮೇಶ್ ಮಾದೇವಪ್ಪನವರ್, ಶಿವಾನಂದ ಹೆಬಸೂರ, ಬಸಣ್ಣ ಹೆಬ್ಬಳ್ಳಿ, ಶಿವಪ್ಪ ನಾಗೋಜಿ, ಮಲ್ಲಪ್ಪ ತಡಸದ, ಸೋಮು ಪಾಟೀಲ್, ಶಿವಣ್ಣ ಹಂಗರಕಿ, ನಿಂಗಪ್ಪ ಸವದತ್ತಿ, ಫೌಂಡೇಶನ್ ಸದಸ್ಯ ನಂದೀಶ್ ವಡ್ಡಟ್ಟಿ, ಮಹಾಂತೇಶ್ ತಾವರೆ, ವಿನೋದ್ ಬಂಕಾಪುರ್, ರುಸ್ತುಂ, ಮಹಾಂತೇಶ್ ನಾಶಿ, ಜಾವಿದ್ ಖಾನ್, ಸೋಮನಗೌಡ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...