ಶಿಕ್ಷಣವು ಕೇವಲ ಪುಸ್ತಕದ ಜ್ಞಾನವಲ್ಲ, ಅದು ಮನುಷ್ಯ ಜೀವನದ ಬಾಳು ಬೆಳೆಗುವ ಪ್ರಕಾಶಮಾನ ಜ್ಯೋತಿ. ಹೀಗಾಗಿ ಶ್ರದ್ಧೆಯಿಂದ ಕಲಿಯಬೇಕು ಎಂದು ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಜನ್ಮದಿನದ ಅಂಗವಾಗಿ ನಗರದ ಅಂಜುಮನೆ ಇಸ್ಲಾಂ ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾರ್ಪೋರೇಟ್ ಟ್ರೇನರ್ ಮಹೇಶ ಮಾಶಾಳ ಹೇಳಿದರು.
ಶಿಕ್ಷಣ ವ್ಯಕ್ತಿಯ ಹಾಗೂ ದೇಶದ ಪ್ರಗತಿಯ ಮೂಲ ಸಂಕೇತ. ಸನ್ನಡತೆ, ಸಂಸ್ಕೃತಿ, ಸಂಸ್ಕಾರ, ಉತ್ತಮ ಹಾಗೂ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಸದ್ಗುಣಗಳ ಗಣಿಯಾಗಿ ತಯಾರಾಗಬೇಕ ಎಂದರು.
ಅಧ್ಯಕ್ಷತೆ ವಹಿಸಿದ್ದ ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷ ಬಶೀರ್ ಅಹ್ಮದ್ ಜಾಗೀರದಾರ್, ಶಿಕ್ಷಣವು ವ್ಯಕ್ತಿತ್ವ ನಿರ್ಮಾಣದ ಪ್ರಮುಖ ಅಂಶ, ಶಿಸ್ತು ಮತ್ತು ಪ್ರಾಮಾಣಿಕತೆ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಲು ವಿದ್ಯಾರ್ಥಿಗಳಿಗೆ ಹೇಳಿದರು.
ಪ್ರಾಚಾರ್ಯ ಅಬ್ದುಲ್ ಮತಿನ ಬಿಡಿವಾಲೆ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಜೀವನ ಹಾಗೂ ಸಾಧನೆ ಕುರಿತು ಉಪನ್ಯಾಸ ನೀಡಿದರು. ಈ ವೇಳೆ ವಿದ್ಯಾರ್ಥಿಗಳು ಶಿಕ್ಷಣದ ಮಹತ್ವದ ಕುರಿತು ಭಾಷಣ ಹಾಗೂ ಕವನ ವಾಚನ ಮಾಡಿದರು.
ಇದನ್ನೂ ಓದಿ ಧಾರವಾಡ | ಪತ್ನಿ ತೀರಿಕೊಂಡ ಹಿನ್ನೆಲೆ; ಮನನೊಂದ ವೃದ್ಧ ನೇಣು ಬಿಗಿದು ಆತ್ಮಹತ್ಯೆ
ಕಾರ್ಯಕ್ರಮದಲ್ಲಿ ಪ್ರಬಂಧ, ಭಾಷಣ ಹಾಗೂ ಕವನ ವಾಚನ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆ ಕಾರ್ಯದರ್ಶಿ ಸೈಯದ್ ಖದೀರ್ ಸರ್ಗಿರೋ, ರಿಯಾಜ್ ನನ್ನೆಸಾಬ್ ನವರ, ಖೈರುದ್ಧಿನ್ ಶೇಖ್, ಪ್ರಾಚಾರ್ಯರು, ಪ್ರಾಧ್ಯಾಪಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರೊ. ಅಯಾಜ್ ಕಿತ್ತೂರು ನಿರೂಪಿಸಿದರು. ರೂಹಿದ್ ನದಾಫ್ ವಂದಿಸಿದರು. ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ನಡೆಯಿತು.





