‌ಧಾರವಾಡ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಹರೀಶ್ ಕೆಂಚಣ್ಣವರ

Date:

ಪರಿಸರ ನಮ್ಮ ಬದುಕಿನ ಅವಿಭಾಜ್ಯ ಅಂಗ. ಅದನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ ಎಂದು ಮೇರು ಐಎಎಸ್ ಮತ್ತು ಕೆಎಎಸ್ ಸ್ಟಡಿ ಸೆಂಟರ್‌ನ ತರಬೇತುದಾರ ಹರೀಶ್‌ ಕೆಂಚಣ್ಣನವರು ಅಭಿಪ್ರಾಯಪಟ್ಟರು.

ಧಾರವಾಡದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಧಾರವಾಡದಲ್ಲಿ ವಿಶ್ವ ಪರಿಸರ ದಿನವನ್ನು ಉದ್ದೇಶಿಸಿ ಮಾತನಾಡಿದರು.

“ಮೊಟ್ಟಮೊದಲ ಬಾರಿಗೆ 1972 ಜೂನ್ 5ರಂದು ನಡೆದ ಯುನೈಟೆಡ್ ನೇಷನ್ ಕಾನ್ಫರೆನ್ಸ್ ಎನ್ವಿರಾನ್ವೆಂಟ್ ಸಭೆಯ ನಿಮಿತ್ತ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಪ್ರತಿ ವರ್ಷವೂ ಪರಿಸರ ದಿನಾಚರಣೆಯನ್ನು ಅದರ ಧ್ಯೇಯ ವಾಕ್ಯದೊಂದಿಗೆ ಆಚರಿಸುತ್ತಾ ಬರುವುದು, “Land Restoration, Desertification, and Drought Resilience.” ಪರಿಸರ ಎಂಬ ಪದವನ್ನು ಮೊಟ್ಟಮೊದಲ ಬಾರಿಗೆ ವಿಲಿಯಂ ಕಾರ್ಲೈಲ್ ಎಂಬ ವಿಜ್ಞಾನಿ ಬಳಸಿದನು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಸರ ದಿನ 1 1

“ಮನೆಗೆ ಮಗಳು ನೆರಳಾದರೆ, ಧರೆಗೆ ಮರಗಳು ನೆರಳಾಗುತ್ತವೆ ಎಂಬ ವ್ಯಾಕರಣ ಮನದಲ್ಲಿಟ್ಟುಕೊಂಡು ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. 2015ರ ಪ್ಯಾರಿಸ್ ಒಪ್ಪಂದವನ್ನು ನಾವು ಬದ್ಧವಾಗಿ ನೋಡಿಕೊಳ್ಳಬೇಕು. ಸಾಧ್ಯವಾದಷ್ಟು ಪರಿಸರದ ಜಾಗೃತಿಯ ಬಗ್ಗೆ ಯುವಜನರಲ್ಲಿ ಶಿಕ್ಷಣ ಮೂಡಿಸಬೇಕು” ಎಂದರು.

“ರಾಷ್ಟ್ರೀಯ ಪರಿಸರ ನೀತಿ, ಪರಿಸರ ಸಂರಕ್ಷಣಾ ಕಾಯ್ದೆ, ವನ್ಯಜೀವಿ ಸಂರಕ್ಷಣಾ ಕಾಯ್ದೆ, ರಾಷ್ಟ್ರೀಯ ಅರಣ್ಯ ನೀತಿ ಮುಂತಾದ ಪರಿಸರ ಸಂಬಂಧಿತ ಕಾಯಿದೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಉಪನ್ಯಾಸ ನೀಡಿದರು.

ಪರಿಸರ ದಿನಾಚರಣೆ

ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನವನ್ನು ಅಲಂಕರಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್ ಎಮ್ ಮಕಾಂದಾರ ಮಾತನಾಡಿ, “ಪ್ರತಿಯೊಬ್ಬರ ಜೀವನ ಎಷ್ಟು ಮುಖ್ಯವೋ ಪರಿಸರವೂ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಪ್ರತಿ ವರ್ಷ ಒಂದೊಂದು ಸಸಿ ನೆಟ್ಟರೆ ಬಹುಶಃ ಪರಿಸರ ದಿನಾಚರಣೆ ಆಚರಣೆ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಕಾಮುಕ ಪ್ರೇಮಿಯಿಂದ ಪ್ರೇಯಸಿ ಮೇಲೆ ನಿರಂತರ ಅತ್ಯಾಚಾರ

ಈ ಕಾರ್ಯಕ್ರಮದಲ್ಲಿ ಡಾ. ಐ ಎ ಮುಲ್ಲಾ, ಡಾ ಎನ್ ಬಿ ನಾಲತವಾಡ, ಡಾ ರಾಹುತುನಿಸಾ, ಡಾ. ಎ ಎಸ್ ಬೆಳ್ಳಾರಿ ಹಾಗೂ ಮಹಾವಿದ್ಯಾಲಯದ ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಪ್ರಾಧ್ಯಾಪಕರು ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...