ಧಾರವಾಡ | ಸಿಗರೇಟ್’ನ ಕಿಡಿ ತಗುಲಿ ಸುಟ್ಟು ಕರಕಲಾದ ರೈತನ ಬಣಿವೆ

Date:

ದನ ಕರುಗಳಿಗಾಗಿ ಶೇಖರಿಸಿ ಇಡಲಾಗಿದ್ದ, ಕಡ್ಲಿ, ಗೋಂಜಾಳ ಹೊಟ್ಟಿನ
ಬಣಿವೆ ಕಿಡಿಗೇಡಿಗಳ ಸಿಗರೇಟ್’ನ ಕಿಡಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಂದಾಜು 50.000 ಸಾವಿರ ಬೆಲೆಬಾಳುವ ಹೊಟ್ಟು(ಮೇವು) ನಾಶವಾಗಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಜ. 5ರಂದು ನಡೆದಿದೆ.

ಅನಾಹುತ ಸಂಭವಿಸಿದ ತಕ್ಷಣ ಹತ್ತಿರದಲ್ಲೇ ಇದ್ದ ಬಣಿವೆಯ ಮಾಲೀಕರಾದ ಬಸಪ್ಪ ಮಳಲಿ ಮತ್ತು ಮಲ್ಲೇಶಪ್ಪ ಮಳಲಿ ಅವರು ಕೂಡಲೇ ಗ್ರಾಪಂ ಅನ್ನು ಸಂಪರ್ಕಿಸಿದ್ದಾರೆ. ತಕ್ಷಣ ಕುಂದಗೋಳ ಅಗ್ನಿ ಶಾಮಕ ದಳವು ಧಾವಿಸಿ ಬಂದು ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ಶಮನಗೊಳಿಸಿದ್ದಾರೆ. ಪಕ್ಕದಲ್ಲಿಯ ರೈಲ್ವೆ ನಿಲ್ದಾಣದ ಬಳಿಯಿರುವ MSIL ಕೇಂದ್ರದಿಂದ ಕುಡಿಯುವವರು ಬಣಿವೆಗಳ ಹತ್ತಿರದಲ್ಲಿ ಬಂದು ಕುಳಿತುಕೊಳ್ಳುವುದೇ ಇಂತಹ ಅನಾಹುತಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಈ ಬಗ್ಗೆ ಹಲವಾರು ಬಾರಿ ಗ್ರಾಪಂ’ಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವನ್ನು ತೆಗೆದುಕೊಂಡಿಲ್ಲ. ಗ್ರಾಮ ಲೆಕ್ಕಾಧಿಕಾರಿಗಳ ಗಮನಕ್ಕೆ ತಂದರು ಉಪಯೋಗವಾಗಿಲ್ಲ. ಸತತವಾಗಿ 4 ವರ್ಷಗಳಿಂದ ಇಂತಹ ಬೆಂಕಿ ಅವಘಢ ಸಂಭವಿಸುತ್ತಿದೆ. ಹತ್ತಿರದಲ್ಲಿರುವ MSIL ಕೇಂದ್ರವನ್ನು ಬೇರೆಕಡೆಗೆ ಸ್ಥಳಾಂತರ ಮಾಡುವುದೇ ಇದಕ್ಕೆಲ್ಲ ಸೂಕ್ತ ಪರಿಹಾರ ಎಂದು ಸ್ಥಳೀಯರು ಅಗ್ರಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಈದಿನ.ಕಾಮ್ ಜತೆಗೆ ಗ್ರಾಪಂ ಅಧ್ಯಕ್ಷ ಗಿರೀಶಗೌಡ ಪಾಟೀಲ ಮಾತನಾಡಿ, ಆಕಸ್ಮಿಕವಾಗಿ ತಗುಲಿದ ಬೆಂಕಿಗೆ ಬಸಪ್ಪ ಮಳಲಿ ಅವರ 50.000 ಬೆಲೆಬಾಳುವ ಹೊಟ್ಟು ಸೊಪ್ಪು ಸಂಪೂರ್ಣ ಸುಟ್ಟಿದೆ. ಬೆಂಕಿ ಜ್ವಾಲೆ ಹೆಚ್ಚಾಗಿದ್ದ ಕಾರಣ ಕುಂದಗೋಳದ ಅಗ್ನಿ ಶಾಮಕ ದಳಕ್ಕೆ ಸಂಪರ್ಕಿಸಿದ್ದೇವು. ಬೆಂಕಿ ಶಮನವಾಗಿದೆ ಎಂದರು.

ಮಾಲೀಕರಾದ ಬಸಪ್ಪ ಮಳಲಿ ಮಾತನಾಡಿ, ದನ ಕರುಗಳಿಗೆಂದು ಶೇಖರಿಸಿ ಇಟ್ಟಿದ್ದ ಹೊಟ್ಟು ಸುತ್ತಿದೆ. ಬೆಂಕಿ ಹೊತ್ತಿಕೊಂಡಾಗ ನಾನು ಹತ್ತಿರದಲ್ಲೇ ಇದ್ದೆ. ನೋಡುವಷ್ಟರಲ್ಲಿ ಬಹಳಷ್ಟು ಬೆಂಕಿ ಆವರಿಸಿತು. ಸಾರಾಯಿ ಕುಡಿಯುತ್ತ ಕುಳಿತಿದ್ದ ನಾಲ್ವರು ಓಡಿ ಹೋದರು. ಇದೀಗ ದನಗಳಿಗೆ ಸೊಪ್ಪು ಎಲ್ಲಿಂದ ತರಬೇಕು ಎಂದು ತಮ್ಮ ನೋವನ್ನು ತೋಡಿಕೊಂಡರು.

ಇದನ್ನೂ ಓದಿ ಧಾರವಾಡ | ಬೈಕ್ ನಿಯಂತ್ರಣ ತಪ್ಪಿ ಇಬ್ಬರ ಸಾವು

ರೈಲ್ವೆ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿ, ಸುಂಕದವರ ಶಾಲೆಯ ಹಿಂಭಾಗದಲ್ಲಿ ಅಂದರೆ; ಹರಕುಣಿರೈಲ್ವೆ ಸೇತುವೆ ಹತ್ತಿರ ಈ ಘಟನೆ ನಡೆದಿದೆ. ಕುಡುಕರು, ಸಿಗರೇಟು ಸೇದುವವರಿಂದ ಇಂತಹ ಅನಾಹುತಕ್ಕೆ ಕಡಿವಾಣ ಹಾಕಬೇಕು. ಸಂತ್ರಸ್ತ ರೈತರಿಗೆ ಪರಿಹಾರ ದೊರಕಿಸಿ ಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...