ಧಾರವಾಡ | ಕಳಸಾ ಬಂಡೂರಿ ಕಾಮಗಾರಿ ಶೀಘ್ರ‌ ಪ್ರಾರಂಭಕ್ಕೆ ರೈತರ ಒತ್ತಾಯ

Date:

ಶೀಘ್ರದಲ್ಲಿ ಕಳಸಾ ಬಂಡೂರಿ ಕಾಮಗಾರಿಯನ್ನು ಟೆಂಡರ್ ಕರೆದು ಕೆಲಸ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಮಹದಾಯಿ ವೇದಿಕೆ ವತಿಯಿಂದ ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ನವಲಗುಂದ ಬಸ್ ನಿಲ್ದಾಣದಿಂದ ನೀಲಮ್ಮನ ಕೆರೆ ವೃತ್ತದ ವರೆಗೆ ಮಹದಾಯಿ ಕಳಸಾ-ಬಂಡೂರಿ ಹೋರಾಟಗಾರರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಸುಧೀರ್ ಸಾಹುಕಾರ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಶೀಘ್ರ ಮಹದಾಯಿ ಕಾಮಗಾರಿ ಆರಂಭಿಸುವಂತೆ ಮನವಿ ಸಲ್ಲಿಸಿದರು.

ಈ ವೇಳೆ ಪ್ರತಿಭಟನಾ ನಿರತ ರೈತರು ಮಾತನಾಡಿ,‌ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತಕುಲಕ್ಕೆ ಆಶ್ವಾಸನೆ ಕೊಟ್ಟು ಕೊಟ್ಟು ಬರೀ ಅನ್ಯಾಯ ಮಾಡುತ್ತಿವೆ ಹೊರತು ರೈತರ ಬೇಡಿಕೆ ಈಡೇರಿಸಿಲ್ಲ. ಸತತವಾಗಿ ಸುರಿದ ಭಾರಿ ಮಳೆಯಿಂದ ಬೆಳೆಗಳು ನಾಶವಾಗಿದ್ದು ಈವರೆಗೂ ಯಾವುದೇ ಪರಿಹಾರ ಬಂದಿಲ್ಲ ಅಧಿವೇಶನ ಮುಗಿಯುವದರೊಳಗಾಗಿ ಪರಿಹಾರ ಮತ್ತು ವಿಮೆಯನ್ನು ರೈತರ ಖಾತೆಗೆ ಹಾಕಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿ ಕಾಲುವೆಗಳ ನವೀಕರಣ ಜೊತೆಗೆ ಸಿಡಿ, ಡ್ರಾಪುಗಳು ಮತ್ತು ಸೇವಾ ರಸ್ತೆಗಳೇ ಇಲ್ಲ. ಕ್ಷೇತ್ರದ ಶಾಸಕರಿಗೆ ಹಾಗೂ ಉಸ್ತುವಾರಿ ಮಂತ್ರಿಗಳಿಗೆ ಅನೇಕ ಬಾರಿ ತಿಳಿಸಿದರೂ ಕೂಡಾ ಕ್ರಮ ಜರುಗಿಸಿಲ್ಲ. ಅಲ್ಲದೇ ನಗರ ಸೇರಿದಂತೆ ಇತರೆ ತಾಲೂಕು ಭಾಗಗಳಲ್ಲಿ ಗೋವಿನಜೋಳ, ಹತ್ತಿ ಖರೀದಿ ಕೇಂದ್ರ ತೆರೆಯಬೇಕು, ಅಗ್ನಿಶಾಮಕ ಠಾಣೆ ಸ್ಥಾಪನೆ, ಸರ್ಕಾರಿ ಪ್ರೌಢಶಾಲೆ, ಸರಕಾರಿ ಪದವಿ ಪೂರ್ವ ಕಾಲೇಜು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ಪ್ರೀತಿಗೆ ಒಪ್ಪದ ಯುವತಿ: ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

ಪ್ರತಿಭಟನೆಯಲ್ಲಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ಯಲ್ಲಪ್ಪ ದಾಡಿಬಾಯಿ, ಮಲ್ಲೇಶ ಉಪ್ಪಾರ, ಬಸನಗೌಡ ಹುಣಸಿಕಟ್ಟೆ, ಎಸ್ ಬಿ ಪಾಟೀಲ ಗಂಗಪ್ಪ ಸಂಗಟಿ, ಗೋವಿಂದರೆಡ್ಡಿ ಮೊರಬದ, ಬಾಂಬೆ ಮೇಸ್ತ್ರಿ, ಶಿವಪ್ಪ ಸಂಗಳ, ಸಿದ್ದಲಿಂಗಪ್ಪ ಹಳ್ಳದ, ಮುರಗೇಪ್ಪ ಪಲ್ಲೇದ, ರವಿ ತೋಟದ, ವಿಕ್ರಮ ಕುರಿ ಸೇರಿದಂತೆ ಅನೇಕ ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...