ಧಾರವಾಡ | ಚುನಾವಣಾ ಅಭ್ಯರ್ಥಿಗಳಿಗೆ ‘ಛೀಮಾರಿ’ಯ ಸ್ವಾಗತ ನೀಡಿ; ರೈತ ಸಂಘದ ಕರೆ

Date:

ಬರಗಾಲದ ಬೇಗೆಯಲ್ಲಿ ಬಳಲುತ್ತಿರುವ ರೈತರು ಕುಡಿಯುವ ನೀರು ಮೇವು ಸಿಗುತ್ತಿಲ್ಲ, ಹಳ್ಳಿಗಳಲ್ಲಿ ಮತ ಕೇಳಲು ಬರುವ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಛೀಮಾರಿ ಹಾಕಿ ಸ್ವಾಗತ ನೀಡಿ ಎಂದು ರೈತರಿಗೆ ರೈತ ಸಂಘ ಕರೆ ನೀಡಿದೆ.

ರಾಜ್ಯದಲ್ಲಿ ಬರಗಾಲ ಕಾಡುತ್ತಿದೆ. ಹಳ್ಳಿಗಳಲ್ಲಿ ಕುಡಿಯುವ ನೀರು ದನಗಳಿಗೆ ಮೇವು ಸಿಗುತ್ತಿಲ್ಲ, ರಾಜಕೀಯ ಪಕ್ಷಗಳು ಅಧಿಕಾರ ಹಿಡಿಯಲು ಡೊಂಬರಾಟ ಆಡುತ್ತಿವೆ. ಅಧಿಕಾರಿಗಳು ಚುನಾವಣಾ ಗುಂಗಿನಲ್ಲಿದ್ದಾರೆ. ರೈತರು ಸೊರಗುತ್ತಿದ್ದಾರೆ ಹಳ್ಳಿಗಳಿಗೆ ಮತ ಕೇಳಲು ಬರುವ ರಾಜಕೀಯ ಪಕ್ಷಗಳಿಗೆ, ಅಭ್ಯರ್ಥಿಗಳಿಗೆ  ಛೀಮಾರಿ ಹಾಕಿ ಸ್ವಾಗತ ಮಾಡಿ ಸಮಸ್ಯೆ ಬಗ್ಗೆ ಗಮನ ಸೆಳೆಯಬೇಕು ಎಂದು ಧಾರವಾಡದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘ ಹೇಳಿದೆ.

ದೇಶದಲ್ಲಿ ಶೇ. 70ರಷ್ಟು ಇರುವ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಬೆಲೆ ನಿಗದಿ ಮಾಡಿ ಎಂದರೆ, ರೈತರ ಮೇಲೆ ಗೋಲಿಬಾರ್ ಮಾಡುತ್ತಾರೆ. ಆದರೆ, ಶೇ. 2ರಷ್ಟು ಇರುವ ಸರ್ಕಾರಿ ನೌಕರರಿಗೆ ಶೇ. 58ರಷ್ಟು ಸಂಬಳ ಏರಿಕೆ ಮಾಡಬೇಕು ಎನ್ನುತ್ತ ವರದಿ ಸಲ್ಲಿಸುತ್ತಾರೆ. ಇಂತಹ ಪುರುಷಾರ್ಥಕ್ಕೆ ರೈತರು ಎಂಪಿಗಳನ್ನ ಗೆಲ್ಲಿಸಬೇಕೆ? ದೇಶದಲ್ಲಿ ಅನ್ನ ನೀಡುವ ರೈತನನ್ನು ಅನಾಥರಾಗಿ ಮಾಡಬಾರದು. ಅನ್ನದಾತರು ದೇಶಕ್ಕೆ ಆಶ್ರಯದಾತರಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರ್ಷಾನುಗಟ್ಟಲೇ ಹೋರಾಟ ಮಾಡಿದ ರೈತರ ಒತ್ತಾಯವನ್ನು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎಂಎಸ್‌ಪಿ ಗ್ಯಾರಂಟಿ ಕಾನೂನು ಜಾರಿ ಮಾಡುತ್ತೇವೆ, ಸಾಲ ಮನ್ನಾ ಮಾಡುತ್ತೇವೆ ಎಂದು ಘೋಷಣೆ ಮಾಡಿದೆ. ಈ ಬಗ್ಗೆ ಬಿಜೆಪಿ ಪಕ್ಷ ಅಥವಾ ಪ್ರಧಾನಿ ಪ್ರತಿಕ್ರಿಯೆ ನೀಡದಿದ್ದರೆ ದೇಶದ ರೈತರು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸುತಿದ್ದೇವೆ. ಬರಗಾಲದ ಸಂಕಷ್ಟದಲ್ಲಿರುವ ಕಬ್ಬು ಸರಬರಾಜು ರೈತರಿಗೆ ಸಕ್ಕರೆ ಕಾರ್ಖಾನೆಗಳು  ಮೂರು ತಿಂಗಳಿಂದ ಕಬ್ಬುಸರಬರಾಜು ಮಾಡಿದ ರೈತರಿಗೆ ಹಣ ಕೊಟ್ಟಿಲ್ಲ ರಾಜಕೀಯ ಪಕ್ಷಗಳ ಎಂಎಲ್ಎ, ಮಂತ್ರಿಗಳೇ ಬಾಕಿ ಉಳಿಸಿಕೊಂಡಿದ್ದಾರೆ. ಇವರಿಗೆ ನಾಚಿಕೆ ಇಲ್ಲವೇ ಎಂದು ಪ್ರಶ್ನಿಸಿದ ಅವರು. ಒಂದು ವಾರದಲ್ಲಿ ಹಣ ನೀಡದಿದ್ದರೆ ಕಾರ್ಖಾನೆಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸುತಿದ್ದೇವೆ ಎಂದರು.

ರಾಜ್ಯ ಸರ್ಕಾರ ಗ್ಯಾರಂಟಿ ಗುಂಗಿನಲ್ಲಿ ತೇಲಾಡುತ್ತಿದೆ, ರೈತರು ಬಲಿ ಪಶುಗಳಾಗುತ್ತಿದ್ದಾರೆ, ಜಿಲ್ಲಾಧಿಕಾರಿಗಳು ಚುನಾವಣೆ ಗುಂಗಿನಲ್ಲಿ ನಿರತರಾದರೆ ರೈತರ ಗತಿ ಏನು? ರೈತರ ಸಂಕಷ್ಟ ರಾಜಕೀಯ ಪಕ್ಷಗಳಿಗೆ ಅರಿವಾದರೆ, ರೈತರಿಗೆ ನ್ಯಾಯ ಸಿಗಲು ಸಾಧ್ಯ ಅದಕ್ಕಾಗಿ ಹಳ್ಳಿಗಳಲ್ಲಿ ಚಿಮಾರಿ ಸ್ವಾಗತ ನೀಡಿ ಎಂದು ಕರೆ ನೀಡುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವೀರನಗೌಡ ಪಾಟೀಲ್ ರಾಜ್ಯಕಾರ್ಯಧ್ಯಕ್ಷ, ಉಪಾಧ್ಯಕ್ಷ ಎಂ.ವಿ ಗಾಡಿ, ಎನ್‌.ಎಚ್. ದೇವಕುಮಾರ್, ಹತ್ತಳ್ಳಿ ದೇವರಾಜ್, ಉಳುವಪ್ಪ ಬಳಗೇರಾ, ಪರಶುರಾಮ್ ಎತ್ತಿನಗುಡ್ಡ, ನಿಜಗುಣ ಕೆಲಗೇರಿ ಮಹೇಶ್ ಬೆಳಗಾಂಕರ್, ವಾಸು ದಾಖಪ್ಪನವರ್, ಗುರುಸಿದ್ದಪ್ಪ ಕೋಟಗಿ, ನಾಗೇಂದ್ರ ಜಿವೂಜಿ, ರವಿಕುಮಾರ್, ಎಸ್.ಬಿ. ಸಿದ್ದನಾಳ್, ಶಂಕರ್ ಕಾಜಗಾರ್, ಬರಡನಪುರ ನಾಗರಾಜ್, ಮಾಳಪ್ಪ ಹೊನ್ನಳ್ಳಿ, ಮಲ್ಲೇಶಿ, ಮುಂತಾದವರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...