ಧಾರವಾಡ | ಜಾನಪದ ಸಂರಕ್ಷಣೆ ಯುವಕರ ಹೊಣೆಯಾಗಿದೆ: ಡಾ. ಎಸ್ ಬಾಲಾಜಿ

Date:

ಯುವಕರು ಜನಪದದತ್ತ ಆಸಕ್ತಿ ವಹಿಸಬೇಕು, ಜನಪದ ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಬೇಕು. ಜನಪದ ಸಂರಕ್ಷಣೆ ಯುವಕರ ಹೊಣೆಯಾಗಿದೆ ಎಂದು ಕನ್ನಡ ಜಾನಪದ ಪರಿಷತ್ ಹಾಗೂ ಜಾನಪದ ಯುವ ಬ್ರಿಗೇಡ್ ರಾಜ್ಯಾಧ್ಯಕ್ಷ ಹಾಗೂ ಐಸಿಸಿಆರ್ ಸದಸ್ಯ ಡಾ. ಎಸ್ ಬಾಲಾಜಿ ಹೇಳಿದರು.

ನಗರದ ಸರಕಾರಿ ಪ್ರೌಢಶಾಲೆ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ, ಕನ್ನಡ ಜಾನಪದ ಪರಿಷತ್ ಅಂಗಸಂಸ್ಥೆ ಜಾನಪದ ಯುವ ಬ್ರಿಗೇಡ್ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮತ್ತು ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಕರು ಜನಪದದತ್ತ ಆಸಕ್ತಿ ವಹಿಸಬೇಕು, ಜನಪದ ಉಳಿಸಿ ಬೆಳೆಸುವಂತ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಜಾನಪದದ ವ್ಯಾಪ್ತಿ ಬಹು ವಿಸ್ತಾರವಾಗಿದ್ದು ಅದರ ಬಗ್ಗೆ ಅಧ್ಯಯನ ಮತ್ತು ಸಂಶೋಧನೆ ಅಗತ್ಯವಿದೆ. ಮತ್ತು ನೂತನ ಪದಪತ್ರ ಪಡೆದ ಜಿಲ್ಲಾ ಮತ್ತು ತಾಲೂಕ ಸಂಚಾಲಕ, ಸಹ ಸಂಚಾಲಕರು ಜನಪದ ಸಂರಕ್ಷಣೆ ಮತ್ತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಕೊಳ್ಳಲ್ಲಿ ಎಂದು ಹಾರೈಸಿದರು.

ಶಾಲೆಯ ಮುಖ್ಯೋಪಾಧ್ಯಾಯ ಶ್ರೀದೇವಿ ಲದ್ದಿಮಠ ಅಧ್ಯಕ್ಷತೆ ವಹಿಸಿದ್ದರು, ಪ್ರಾಸ್ತಾವಿಕವಾಗಿ ಕನ್ನಡ ಜಾನಪದ ಪರಿಷತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಸ್ ಕೌಜಲಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಧಾರವಾಡ ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ ಇದ್ದರು. ಕುಂದಗೋಳ ಸರ್ಕಾರಿ ಡಿಗ್ರಿ ಕಾಲೇಜಿನ ಪ್ರಾಂಶುಪಾಲ ಬಿ ಎಸ್ ಶಿರಿಯಪ್ಪಗೌಡರ ಮತ್ತು ಧಾರವಾಡ ಕಜಾಪ ಅಧ್ಯಕ್ಷ ಈರಪ್ಪ ಕ ಎಮ್ಮಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ಧಾರವಾಡ | ಆಕಾಶವಾಣಿ ಎದುರು ಮರಕ್ಕೆ ಡಿಕ್ಕಿ ಹೊಡೆದ ಕಾರು: ಗಾಯಾಳು ಆಸ್ಪತ್ರೆಗೆ ದಾಖಲು

ಧಾರವಾಡ ಜಿಲ್ಲಾ ಸಂಚಾಲಕರಾಗಿ ಮಹೇಶ ಎಸ್ ತಳವಾರ, ಜಿಲ್ಲಾ ಸಹ ಸಂಚಾಲಕರಾಗಿ ರಾ.ಹ‌.ಕೊಂಡಕೇರ, ಕುಂದಗೋಳ ತಾಲೂಕ ಸಂಚಾಲಕರಾಗಿ ಮಾರುತಿ ಗೊಲ್ಲರ, ಧಾರವಾಡ ತಾಲೂಕ ಸಂಚಾಲಕರಾಗಿ ದೇವರಾಜ ಅರ್ಟಗಲ್ಲ, ಸಹ ಸಂಚಾಲಕರಾಗಿ ಜಂಗಪ್ಪ ಜೋಗಿ, ನವಲಗುಂದ ಸಂಚಾಲಕರಾಗಿ ಪ್ರಶಾಂತ ನಾಯ್ಕರ ಪದಗ್ರಹಣ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...