ಧಾರವಾಡ | ನಾಲ್ಕೈದು ಮಂದಿ ಬಂದು ನನ್ನಿಂದ ಒತ್ತಾಯವಾಗಿ ಸಹಿ ಹಾಕಿಸಿಕೊಂಡರು: ಮಲ್ಲಿಕಾರ್ಜುನ ಸ್ವಾಮೀಜಿ

Date:

“ಕಳೆದ ಮಾರ್ಚ್ 27ರಂದು ದಿಂಗಾಲೇಶ್ವರ ಸ್ವಾಮೀಜಿ ಪತ್ರಿಕಾಗೋಷ್ಟಿ ಮಾಡಿದ ಮರುದಿನ ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಶ್ರೀಗಳು ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಗೂ ನಮಗೂ ಸಂಬಂಧವಿಲ್ಲ ಎಂದಿದ್ದರು. ಈಗ ಮಾರ್ಚ್ 29ರಂದು, “ನಾನು(ಮಲ್ಲಿಕಾರ್ಜುನ ಸ್ವಾಮೀಜಿ) 28ರಂದು ಹೇಳಿದ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ” ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಸ್ವಾಮಿಗಳು ಪತ್ರಿಕಾ ಪ್ರಕಟಣೆಗೆ ಕಳುಹಿಸಿದ ವಿಡಿಯೋವೊಂದರಲ್ಲಿ ಮಾತನಾಡಿ, “ನಿನ್ನೆ ನಾಲ್ಕೈದು ಮಂದಿ ನಮ್ಮ ಮಠಕ್ಕೆ ಬಂದು, ತಾವೇ ಒಂದು ಪತ್ರಿಕಾ ಪ್ರಕಟಣೆಯ ಪತ್ರವನ್ನು ಟೈಪ್ ಮಾಡಿಸಿಕೊಂಡು ನನ್ನ ಕೈಗೆ ಕೊಟ್ಟು ಒತ್ತಾಯವಾಗಿ ನನ್ನಿಂದ ಸಹಿ ಹಾಕಿಸಿಕೊಂಡಿದ್ದಾರೆ. ಅವರು ಟೈಪ್ ಮಾಡಿಸಿ ತಂದಿದ್ದ ಪತ್ರವನ್ನು ಓದುವ ಸಂದರ್ಭದಲ್ಲಿ ವಿಡಿಯೋವನ್ನು ಮಾಡಿ ತಾವೇ ಪತ್ರಿಕೆ ಪ್ರಕಟಣೆಗೆ ನೀಡಿ, ಮುರುಘಾಮಠಕ್ಕೂ ದಿಂಗಾಲೇಶ್ವರ ಸ್ವಾಮಿಗಳ ಹೇಳಿಕೆಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ಪ್ರಕಟಿಸಿ, ಪ್ರಚಾರ ಮಾಡಿದ್ದಾರೆ ಮತ್ತು ಒತ್ತಾಯಪೂರ್ವಕವಾಗಿ ನೀಡಿದ ಹೇಳಿಕೆಯನ್ನು ಸಮಾಜದ ಹಿತದೃಷ್ಟಿಯಿಂದ ಹಿಂಪಡೆಯುತ್ತೇನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಯಾವುದೇ ಧರ್ಮವು ಮನುಷ್ಯನಲ್ಲಿ ಪ್ರೀತಿಯ ಗುಣ ಬೆಳೆಸುತ್ತದೆ: ರಿಯಾಝ್ ಅಹ್ಮದ್ ರೋಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು‌ ವಿಚಾರವಾಗಿ ಪ್ರಲ್ಹಾದ್ ಜೋಶಿ ಬಲಗೈ ಶಕ್ತಿಯಾಗಿರುವ ಈರೇಶ ಅಂಚಟಗೇರಿ ಅವರು ತಾವೇ ಪತ್ರಿಕಾ ಪ್ರಕಟಣೆಯ ಪತ್ರಿಕೆಯನ್ನು‌ ಟೈಪ್ ಮಾಡಿಸಿ, ಮಲ್ಲಿಕಾರ್ಜುನ‌ ಸ್ವಾಮಿಗಳಿಂದ ಒತ್ತಾಯಪೂರ್ವಕವಾಗಿ ಓದಿಸಿ, ವಿಡಿಯೋ ಮಾಡಿ,‌ ಸಾಮಾಜಿಕ‌ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಮತ್ತು ಪತ್ರಿಕೆಗಳಲ್ಲಿ‌ ಬರುವಂತೆ ವ್ಯವಸ್ಥಿತವಾಗಿ ಪ್ಲ್ಯಾನ್ ಮಾಡಿದ್ದಾರೆಂದು ಮುರುಘಾಮಠದ ಭಕ್ತರು ಮಾತನಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...