ಧಾರವಾಡ | ಪ್ರವಾದಿ ಪೈಗಂಬರರ ಜನ್ಮ‌ದಿನದ ಅಂಗವಾಗಿ ಉಚಿತ ರಕ್ತದಾನ ಶಿಬಿರ

Date:

ಧಾರವಾಡ ನಗರದ ಅಂಜುಮನ್-ಎ-ಇಸ್ಲಾಂ ಸಂಸ್ಥೆಯಲ್ಲಿ ಪ್ರವಾದಿ ಹಜರತ್ ಮೊಹಮ್ಮದ್ ಪೈಗಂಬರರ 1500ನೇ ಜನ್ಮ ದಿನಾಚರಣೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆಯನ್ನು ಏರ್ಪಡಿಸಲಾಗಿತ್ತು.

ಶಿಬಿರವನ್ನು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಉದ್ಘಾಟಿಸಿ ಮಾತನಾಡಿ, “ಅಂಜುಮನ್ ಕಾಲೇಜಿನಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆಗೆ ಎಲ್ಲ ಜಾತಿಯವರು ಮತ್ತು ಸಾರ್ವಜನಿಕರು ಬಂದು ಪಾಲ್ಗೊಂಡಿದ್ದಾರೆ. ಕಣ್ಣಿನ ತಪಾಸಣೆ ಮಾಡಲಾಗುತ್ತಿದ್ದು, ಉಚಿತವಾಗಿ ಕನ್ನಡಕ ನೀಡಲಾಗುತ್ತದೆ ಮತ್ತು ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ” ಎಂದು ಮಾಹಿತಿ ನೀಡಿದರು.

ದೀಪಕ್ ಚಿಂಚೋರೆ ಮಾತನಾಡಿ, “ರಕ್ತದಲ್ಲಿ ಎಲ್ಲರೂ ಒಂದೇ ಮತ್ತು ಎಲ್ಲರ ರಕ್ತ ಒಂದೇ ಆಗಿದೆ. ಪ್ರವಾದಿಗಳ ಸಂದೇಶವೂ ಅದೇ ಆಗಿತ್ತು. ನಾನೂ ಕೂಡಾ ರಕ್ತದಾನದಲ್ಲಿ ಪಾಲ್ಗೊಂಡಿದ್ದೇನೆ. ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತವನಪ್ಪ ಅಷ್ಟಗಿ ಮಾತನಾಡಿ, “ಇಂದು ರಕ್ತದಾನ ಶಿಬಿರವು ಇತಿಹಾಸ ನಿರ್ಮಿಸುವ ಕಾರ್ಯಕ್ರಮವಾಗಿದ್ದು, ಸುಮಾರು 1500 ಜನ ಈ ಶಿಬಿರದಲ್ಲಿ ಭಾಗವಹಿಸಿದ್ದಾರೆ.‌ ಈ ಶಿಬಿರದಿಂದ ಧಾರವಾಡಕ್ಕೂ ಹೆಸರು ಬರುತ್ತದೆ. ಮತ್ತು ಮತ್ತೊಂದು ಜೀವ ಉಳಿಸುವ ಇಂತಹ ಕಾರ್ಯಕ್ರಮಗಳು ನಿರಂತರ ನಡೆಯಲಿ” ಎಂದು ಹೇಳಿದರು.

ಇದನ್ನೂ ಓದಿ: ಧಾರವಾಡ | ಕಳ್ಳರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು; ವಿಡಿಯೋ ವೈರಲ್!

ಈ ರಕ್ತದಾನ ಶಿಬಿರದಲ್ಲಿ ಎಲ್ಲ ಸಮುದಾಯದವರೂ ಪಾಲ್ಗೊಂಡಿದ್ದರು. ಎಸ್ ಡಿ ಎಮ್ ಆಸ್ಪತ್ರೆ 208 ಯುನಿಟ್ಸ್, ಕ್ಯಾನ್ಸರ್ ಆಸ್ಪತ್ರೆ 110 ಯುನಿಟ್ಸ್, ಜಿಲ್ಲಾಸ್ಪತ್ರೆ 217 ಯುನಿಟ್ಸ್, ರೋಟರಿ ಬ್ಲಡ್ ಕೇಂದ್ರ 415 ಯುನಿಟ್ಸ್, ಬ್ಲಡ್ ಬ್ಯಾಂಕ್ 320 ಯುನಿಟ್ಸ್ ಹಾಗೂ ಕಿಮ್ಸ್ ಆಸ್ಪತ್ರೆ 342 ಯುನಿಟ್ಸ್ ರಕ್ತ ಶೇಖರಿಸಿವೆ. ಉಚಿತ ಆರೋಗ್ಯ ತಪಾಸಣಾ ಶಿಭಿರದಲ್ಲಿ 1700 ಹೆಚ್ಚಿನ ಜನರು ಪಾಲ್ಗೊಂಡು ಉಚಿತ ಔಷದೋಪಚಾರವನ್ನು ಪಡೆದುಕೊಂಡರು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಅಂಜುಮನ್ ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲ ಸದಸ್ಯರು, ಈದ್ ಮಿಲಾದ್ ಕಮಿಟಿಯ ಸದಸ್ಯರು, ಮೊಹಲ್ಲಾ ಮುತವಲ್ಲಿಗಳು ಅಂಜುಮನ್ ಸಂಸ್ಥೆಯ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...