ಧಾರವಾಡ | ಅನಕ್ಷರತೆಯಿಂದ ಹೊರಬಂದು ಶಿಕ್ಷಣ ಕಲಿಯಿರಿ : ಗಿರೀಶಗೌಡ ಪಾಟೀಲ್‌

Date:

ಕುಂದಗೋಳ ಕ್ಷೇತ್ರದ ಅನಕ್ಷರಸ್ಥ ಜನರು ಶಿಕ್ಷಣ ಕಲಿಕೆಗೆ ಮುಂದೆ ಬಂದು ಸಮಾಜದಲ್ಲಿ ಸಂವಿಧಾನಾತ್ಮಕವಾದ ಶಿಕ್ಷಣದ ಹಕ್ಕನ್ನು ಪಡೆಯುವ ಮನೋಭಾವ ಹೊಂದಬೇಕು ಮತ್ತು ಅನಕ್ಷರತೆಯಿಂದ ಹೊರಬಂದು ಶಿಕ್ಷಣ ಕಲಿಯಬೇಕಿದೆ ಎಂದು ತಾಲೂಕಿನ ಸಂಶಿ ಗ್ರಾಪಂ ಸಭಾಭವನದಲ್ಲಿ ನಡೆದ “ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ, ಸಾಕ್ಷರತಾ ಸಪ್ತಾಹ” ನಿಮಿತ್ತ ಆಯೋಜಿಸಿದ್ದ ಬೀದಿ ಕರಪತ್ರಗಳ ಬಿಡುಗಡೆ ಮಾಡಿ ಮಾತನಾಡಿದರು.

ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ 5 ವರ್ಷಗಳ ಅವಧಿಯ 15 ವರ್ಷ ಮೇಲ್ಪಟ್ಟ ವಯಸ್ಕರಿಗೆ ರಾಜ್ಯ ಸರ್ಕಾರವು ಶಿಕ್ಷಣ ಕಲಿಕೆಗೆ ದಿಟ್ಟ ಹೆಜ್ಜೆ ಇಟ್ಟು ಸಾಕ್ಷರತೆಗೊಳಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಗ್ರಾಪಂ ಸದಸ್ಯ ಹನಮಂತ ಎಸ್. ಲಕ್ಷ್ಮೇಶ್ವರ ಮಾತನಾಡಿ, ಕುಂದಗೋಳ ತಾಲೂಕು ಕ್ಷೇತ್ರದ ಸಂಶಿ, ಶಿರೂರ, ಮಳಲಿ ಮುಂತಾದ ಗ್ರಾ.ಪಂ. ವ್ಯಾಪ್ತಿಯಲ್ಲಿ ಜಿಲ್ಲಾ ಶಿಕ್ಷಣ ಇಲಾಖೆಯು ಸ್ಥಳೀಯ ಎನ್.ಜಿ.ಒ. ಮೂಲಕ ಸಾಮಾಜಿಕವಾಗಿ ಹಿಂದುಳಿದವರಿಗೆ ಸಾಕ್ಷರತಾ ಶಿಕ್ಷಣ, ಬೀದಿ ನಾಟಕ ಹಾಗೂ ಜಾನಪದ ಕರಪತ್ರಗಳ ಮೂಲಕ ಅರಿವು ಕಾರ್ಯಕ್ರಮ ಮಾಡುತ್ತಿರುವುದು ಸಂತಸದ ವಿಷಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧಾರವಾಡ ಜಿಲ್ಲಾ ಸಾಕ್ಷರತಾ ಮತ್ತು ವಯಸ್ಕರ ಶಿಕ್ಷಣಾಧಿಕಾರಿ ಜಯಶ್ರೀ ಮಾತನಾಡಿ, ಸ್ಪರ್ಧಾತ್ಮಕ ಡಿಜಿಟಲ್‌ ಯುಗದಲ್ಲಿ ಅನಕ್ಷರಸ್ಥರನ್ನು ಸಾಕ್ಷರತೆ ಶಿಕ್ಷಣಕ್ಕೆ ಉತ್ತೇಜನ ನೀಡುವುದು ಪ್ರಮುಖ ಗುರಿಯಾಗಿದ್ದು, ಸಂಶಿಯ ಎನ್.ಜಿ.ಒ. ಸಂಸ್ಥೆಯ ಕಲಾ ತಂಡದಿಂದ ಆಯ್ಕೆಯಾದ ಗ್ರಾಮಗಳಲ್ಲಿ ಅಪೂರ್ಣ ಅಥವಾ ಶಿಕ್ಷಣ ಅಕ್ಷರ ಕಲಿಕೆ ಇಲ್ಲದ ಜನರನ್ನು ಗುರುತಿಸಿ, ಸಂಪೂರ್ಣ ಸಾಕ್ಷರತಾ ಶಿಕ್ಷಣ ನೀಡುವುದಕ್ಕೆ ಇಲಾಖೆಯು ಪ್ರಥಮ ಆದ್ಯತೆ ನೀಡಿದೆ. ಸಾಕ್ಷರತಾ ಇಲಾಖೆಯಿಂದ ಪ್ರತಿಯೊಬ್ಬ ಅನಕ್ಷರಸ್ಥರಿಗೂ ಓದು, ಬರಹ ಮತ್ತು ಲೆಕ್ಕಾಚಾರ ಬೋಧನೆ ಮತ್ತು ಮೌಲ್ಯಮಾಪನ ನಡೆಸಿ, ಆ ಜನರನ್ನು ಸಮಾಜ ಮುಖಿಯಾಗಿ ಶಿಕ್ಷಣ ಕಲಿಕೆಗೆ ಪ್ರೋತ್ಸಾಹಿಸಲು ರಾಜ್ಯ ಸರ್ಕಾರವು ಇಲಾಖೆಯಿಂದ ನೆರವು ನೀಡುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷೆ ಲೀಲಾವತಿ ಸೂಲದ, ಸದಸ್ಯ ಫಕ್ಕೀರೇಶ ಪಶುಪತಿಹಾಳ, ಎನ್.ಜಿ.ಒ. ಮುಖ್ಯಸ್ಥ ಎಚ್.ಎಸ್. ಹಿರೇಗೌಡ್ರ, ಮುತ್ತು ಸೊರಟಿ, ಜಗದೀಶ ದ್ಯಾವನೂರ, ಶಿವು ಕುರಟ್ಟಿ, ಮಂಜುನಾಥ ಪಡತೇರ, ಸಂತೋಷ ನಾಯ್ಕರ, ಪಕ್ಕೀರೇಶ ಮುಡ್ಸಿಬಣ, ಹರೀಶ ಸಾಳುಂಕೆ, ಮಲ್ಲಿಕಾರ್ಜುನ ಹಡಪದ ಇನ್ನಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...