ಧಾರವಾಡ | ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಉತ್ತಮ ಸ್ಪಂದನೆ: ಸಚಿವ ಸಂತೋಷ್ ಲಾಡ್

Date:

ರಾಜ್ಯಸರ್ಕಾರ ಜನಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ನೂತನ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಯುವನಿಧಿ ಯೋಜನೆ ಜಾರಿಗೆ ಸಿದ್ಧತೆ ನಡೆಯುತ್ತಿದೆ. ಧಾಡವಾಡ ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಆಗಸ್ಟ್ 15ರಂದು ಧಾರವಾಡ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. “ರಾಜ್ಯ ಸರಕಾರವು ನುಡಿದಂತೆ ನಡೆದಿದ್ದು, ಜನಪರ ಗ್ಯಾರೆಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ಯುವನಿಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ” ಎಂದರು.

ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದ್ದು, ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಿದೆ. ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಜುಲೈ ಅಂತ್ಯದವರೆಗೆ 1.51 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಒಟ್ಟು 3,82,523 ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಉಪಯೋಗವನ್ನು ಪಡೆದುಕೊಳುತ್ತಿದ್ದಾರೆ. ಗೃಹಜ್ಯೋತಿ ಯೋಜನೆ ಅಡಿ ಜಿಲ್ಲೆಯಲ್ಲಿ 4,18,250 ಗ್ರಾಹಕರು ಈಗಾಗಲೇ ಪ್ರಯೋಜನ ಪಡೆದುಕೊಂಡಿರುತ್ತಾರೆ. ಯುವನಿಧಿ ಯೋಜನೆಯನ್ನು ಸದ್ಯದಲ್ಲಿಯೇ ಜಾರಿಗೊಳಿಸಲಾಗುವುದು. ಅನ್ನಭಾಗ್ಯ ಯೋಜನೆಯಡಿ ಯಾರೂ ಸಹ ಹಸಿವಿನಿಂದ ಬಳಲದಂತೆ ಕಾರ್ಯಕ್ರಮವನ್ನು ರೂಪಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬೇಡಿಕೆಯಲ್ಲಿರುವ 18 ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 2.57 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಇದ್ದು, ಈ ವರೆಗೆ 1.57 ಲಕ್ಷ ಹೆಕ್ಟೇರ್‍ಗಳಷ್ಟು ಬಿತ್ತನೆಯಾಗಿದೆ. 1.1.2023 ರಿಂದ 2.8.2023 ರವರೆಗೆ 415 ಮಿ.ಮೀ. ವಾಡಿಕೆ ಮಳೆಗೆ 391 ಮಿ.ಮೀ. ಮಳೆಯಾಗಿರುತ್ತದೆ. ಮುಂಗಾರು ಹಂಗಾಮಿನಲ್ಲಿ ಒಟ್ಟು 11,300 ಕ್ವಿಂಟಾಲ್ ವಿವಿಧ ಬಿತ್ತನೆ ಬೀಜಗಳನ್ನು ವಿತರಿಸಲಾಗಿದೆ. ಹಾಗೂ 35,807 ಮೆ.ಟನ್‍ಗಳಷ್ಟು ವಿವಿಧ ರಸಗೊಬ್ಬರಗಳನ್ನು ಪೂರೈಸಲಾಗಿದೆ” ಎಂದು ಹೇಳಿದರು.

“ನಮ್ಮ ದೇಶದ ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರಲಾಂಛನಗಳು ರಾಷ್ಟ್ರದ ಅಸ್ತಿತ್ವ, ಸಾರ್ವಭೌಮತ್ವವನ್ನು ಸಾರುತ್ತಿವೆ ಹಾಗೂ ರಾಷ್ಟ್ರದ ಹಿನ್ನಲೆ, ಕಲ್ಪನೆ ಮತ್ತು ಸಂಸ್ಕøತಿಯನ್ನು ಪ್ರತಿಪಾದಿಸುತ್ತವೆ. ಈ ಹಿನ್ನೆಲೆಯಲ್ಲಿ ಇವುಗಳಿಗೆ ಗೌರವ ತೋರುವುದು, ಗೌರವ ದೊರಕಿಸಿಕೊಡುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ. ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ರವರು ರಚಿಸಿದ ಭಾರತದ ಸಂವಿಧಾನವು ರಾಷ್ಟ್ರದ ಆಡಳಿತ ಮತ್ತು ಅಭಿವೃದ್ಧಿಯ ಬುನಾದಿಯಾಗಿದೆ” ಎಂದು ಹೇಳಿದರು.

“ಸ್ವಾತಂತ್ರ್ಯ ಹೋರಾಟದಲ್ಲಿ ಧಾರವಾಡ ಜಿಲ್ಲೆಯಿಂದ ಪ್ರಕಟವಾಗುತ್ತಿದ್ದ ರಾಜಹಂಸ ಪತ್ರಿಕೆ, ಕನ್ನಡ ಕೇಸರಿ ಹಾಗೂ ಇತರೆ ಪತ್ರಿಕೆಗಳ ಪಾತ್ರವು ಬಹಳ ಮುಖ್ಯವಾಗಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...