ಧಾರವಾಡ | ಸರ್ಕಾರದ ಯೋಜನೆಗಳು ನಿರ್ದಿಷ್ಠ ಸಮಯದಲ್ಲಿ ಅರ್ಹ ಪಲಾನುಭವಿಗಳಿಗೆ ತಲುಪಬೇಕು: ದಿವ್ಯಪ್ರಭು

Date:

ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಲ್ಲಿ ಬಿಡುಗಡೆಯಾಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗ ಮಾಡಿಕೊಂಡು ಶೇ.100 ರಷ್ಟು ಗುರಿ ಸಾಧಿಸಬೇಕು. ಬಿಡುಗಡೆಯಾಗಿರುವ ಅನುದಾನವು ಲ್ಯಾಪ್ಸ್ ಆಗದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಯೋಜನೆಗಳನ್ನು ನಿರ್ದಿಷ್ಠ ಸಮಯದಲ್ಲಿ ಅರ್ಹ ಪಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ 2025-26 ನೇ ಸಾಲಿನ ಅಗಸ್ಟ್ ಮಾಹೆಯ ಅಂತ್ಯದವರೆಗಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಕೃಷಿ ಇಲಾಖೆಯಲ್ಲಿ ಸರಕಾರದ ಯೋಜನೆಗಳನ್ನು ಒಂದು ಬಾರಿ ಯೋಜನೆಯನ್ನು ಸದುಪಯೋಗ ಪಡೆದುಕೊಂಡ ಫಲಾನುಭವಿಗಳು ಪುನಃ ಆ ಯೋಜನೆಯ ಸೌಲಭ್ಯವನ್ನು ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಅಂತಹ ಅರ್ಜಿಗಳನ್ನು ಪರಿಶೀಲಿಸಿ, ಕ್ರಮಕೈಗೊಳ್ಳಬೇಕು. ತೋಟಗಾರಿಕೆ ಮಾಡುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ರೈತರನ್ನು ಗುರುತಿಸಿ, ಸರ್ಕಾರದ ಯೋಜನೆಗಳ ಬಗ್ಗೆ ರೈತರು ಉಪಯೋಗ ಪಡೆದುಕೊಳ್ಳುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಸೂಚಿಸಿದರು.

ರಸ್ತೆ ಕಾಮಗಾರಿ ಹಾಗೂ ವಿವಿಧ ಕಾಮಗಾರಿಗಳನ್ನು ಮಾಡುವಾಗ ಸರಿಯಾದ ರೂಪರೇಷೆಗಳನ್ನು ಸಿದ್ಧಪಡಿಸಿಕೊಂಡು ಹಣ ವ್ಯಯ ಮಾಡದೆ, ಸರಿಯಾಗಿ ಯೋಜನೆಯನ್ನು ರೂಪಿಸಿಕೊಂಡು ಅನುದಾನ ಉಪಯೋಗಿಸಿ. ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರಗಳನ್ನು ಸರಿಯಾಗಿ ವಿತರಣೆ ಮಾಡಿ ಮತ್ತು ಸರ್ಕಾರ ಪೌಷ್ಟಿಕ ಆಹಾರ ವಿತರಣೆ ಮಾಡುವ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು. ಸರ್ಕಾರದ ನಿರ್ದೇಶನದಂತೆ ಮಕ್ಕಳಿಗೆ 14 ವರ್ಷ ಕಡ್ಡಾಯ ಶಿಕ್ಷಣ ಇದರಲ್ಲಿ ಎಷ್ಟು ವಿದ್ಯಾರ್ಥಿಗಳು ಶಾಲೆಯಿಂದ ಹಿಂದುಳಿದ್ದಾರೆ ಅವರನ್ನು ಗುರುತಿಸಿ, ಪಟ್ಟಿ ಸಿದ್ಧಪಡಿಸಿ. ಅಂತಹ ಮಕ್ಕಳನ್ನು ಸಹ ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಯಾವ ಮಕ್ಕಳು ಸಹ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮದರಸಗಳನ್ನು ಭೇಟಿ ಮಾಡಿ ಅವರ ಸಹಾಯವನ್ನು ಸಹ ತೆಗೆದುಕೊಂಡು ಡ್ರಾಪೌಟ್ ಆದ ಮಕ್ಕಳನ್ನು ಗುರುತಿಸಿ ಹಾಗೂ ಕ್ರಿಶ್ಚಿಯನ್ ಶಾಲೆಗಳಿಗೂ ಸಹ ಭೇಟಿ ನೀಡಬೇಕು. ಹೆಸ್ಕಾಂ ಇಲಾಖೆಯವರು ಮಳೆಗಾಲದಲ್ಲಿ ಬಿದ್ದಿರುವ ಹಾಗೂ ಬಾಗಿರುವ ಕಂಬಗಳನ್ನು ಆದಷ್ಟು ಬೇಗ ಸರಿಪಡಿಸಿ ಮತ್ತು ಯಾವ ಅರ್ಜಿಗಳು ಬಂದಿರುತ್ತವೆಯೋ ಅವುಗಳನ್ನು ಸರಿಯಾದ ಸಮಯದಲ್ಲಿ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ 2025 ನೇ ಸಾಲಿನ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಮೂರನೇ ತ್ರೈಮಾಸಿಕ ಸಭೆ ಮತ್ತು ಸಫಾಯಿ ಕರ್ಮಚಾರಿಗಳ ಜಿಲ್ಲಾ ಸಮಿತಿ ಸಭೆ ಜರುಗಿತು. ಜಿಲ್ಲಾ ಪಂಚಾಯತ್ ಮುಖ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪಪೊಲೀಸ್ ಆಯುಕ್ತ ಮಹಾನಿಂಗ ನಂದಗಾವಿ ವೇದಿಕೆಯಲ್ಲಿ ಇದ್ದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಹುದ್ದೆಗಳ ಭರ್ತಿಗೆ ಆಗ್ರಹಿಸಿ ಜುಬಲಿ ವೃತ್ತದಲ್ಲಿ ಪ್ರತಿಭಟನೆ

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಶುಭ. ಪಿ. ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು, ಸಫಾಯಿ ಕರ್ಮಚಾರಿಗಳ ಜಿಲ್ಲಾ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸರ್ಕಾರಿ ವಕೀಲರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...