ಧಾರವಾಡ | ಗ್ರಾಮೀಣ ಕಲಾವಿದರ ಪ್ರೋತ್ಸಾಹಿಸುವ ಸರ್ಕಾರದ ಯೋಜನೆ ಔಚಿತ್ಯಪೂರ್ಣ: ಚಂದ್ರಕಾಂತ ಬೆಲ್ಲದ

Date:

ಗ್ರಾಮೀಣ ಭಾಗದ ತಳಸಮುದಾಯದ ಪರಿಶಿಷ್ಟ ಜಾತಿಯ ಕಲಾವಿದರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ಈ ಒಂದು ಯೋಜನೆಯನ್ನು ಜಾರಿಗೆ ತಂದಿರುವುದು ಔಚಿತ್ಯಪೂರ್ಣವಾದದ್ದು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಹೇಳಿದರು.

ಡಾ.ದ.ರಾ.ಬೇಂದ್ರೆ ಭವನದಲ್ಲಿ ಕನ್ನಡ ಮತ್ತು ಸಂಸ್ಕಂತಿ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಏರ್ಪಡಿಸಲಾಗಿದ್ದ ‘ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮ’ವನ್ನು ಉದ್ಘಾಟಿಸಿ, ಮಾತನಾಡುತ್ತಾ ಇಂತಹ ವಿಶಿಷ್ಠ ಯೋಜನೆಗಳಿಂದ ತಳ ಸಮುದಾಯದ ಮತ್ತು ಗ್ರಾಮೀಣ ಪ್ರದೇಶದ ಜಾನಪದ ಕಲಾವಿದರುಗಳಿಗೆ ಹೆಚ್ಚೆಚ್ಚು ವೇದಿಕೆಗಳು ಲಭಿಸುತ್ತವೆ ಎಂದರು. 

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿನಿರ್ದೇಶಕ ಕೆ.ಎಚ್.ಚನ್ನೂರ ಮಾತನಾಡಿ, ಜಾನಪದ ಕಲಾವಿದರು ನಮ್ಮ ನಾಡಿನ ಧ್ವನಿಯಾಗಿದ್ದಾರೆ. ನಮ್ಮ ಹಳ್ಳಿಯ ಜನಪದ ಸಂಸ್ಕಂತಿಯನ್ನು ಬಿಂಬಿಸುವ ಸಾಂಪ್ರದಾಯಿಕ ಹಾಡುಗಳು, ನಮ್ಮ ಇತಿಹಾಸದ ಹೋರಾಟಗಾರರ ಶೌರ್ಯ, ಬಲಿದಾನದ ಮಹಿಮೆಯನ್ನು ಕಣ್ಣಿಗೆ ಕಟ್ಟುವಂತೆ ಸಾರುವ ಲಾವಣಿಗಳು ಮುಂದುವರೆಸಿಕೊಂಡು ಬಂದಿರುವ ಪರಂಪೆರೆಯನ್ನು ಉಳಿಸಿ ಬೆಳೆಸುವ ಮೂಲ ಆಶಯವೇ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮದ್ದಾಗಿದೆ. ಕಲಾವಿದರ ಕಲೆಯನ್ನು ಆಸ್ವಾಧಿಸುವ ಕಿವಿಯಾಗೋಣ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಅಧ್ಯಕ್ಷ ಡಾ.ಸರಜೂ ಕಾಟ್ಕರ್ ಮಾತನಾಡಿ, ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಪ್ರದೇಶದಲ್ಲಿಯ ಜಾನಪದ ಕಲೆಯಾದ ಸೋಲಿಗರ ಹಾಡುಗಳು ಅದ್ಭುತವಾದವು. ನೆರೆಯ ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದ ಸಾಂಪ್ರದಾಯಿಕ ಕಲೆಗಳ ಮಿಶ್ರಣವಾಗಿರುವ ಅಪರೂಪದ ಕಲೆಯಾಗಿದೆ. ಅವರ ಹಾಡಿನ ಸಾಲುಗಳಿಂದ ಹಾಡಿರೇ ರಾಗಗಳ-ತೂಗಿರೇ ದೀಪಗಳ ಶೀರ್ಷಿಕೆ ಆಯ್ದುಕೊಂಡು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕವಿಗಳು ಕವಿತೆಗಳನ್ನು ರಾಗಗಳಿಗೆ ಲಯಬದ್ಧವಾಗಿ ಪೋಣಿಸಿದಾಗ ಮಾತ್ರ ಅವುಗಳು ಜನರ ಹೃದಯ ಗೆಲ್ಲುವ ಹಾಡುಗಳಾಗಲು ಸಾಧ್ಯವಾಗುತ್ತವೆ.  ಜನಪದ ಕಲಾವಿದರು ತಮ್ಮ ಲೋಕಾನುಭವದಿಂದ ಸಾಹಿತ್ಯ ನಿರ್ಮಾಣ ಮಾಡಿರುವಂತಹವುಗಳಾಗಿದ್ದವು, ಯಾರೂ ತಮ್ಮ ಗೀತೆಗಳ ಕೆಳಗೆ ತಮ್ಮ ಹೆಸರನ್ನು ಬರೆಯಲಿಲ್ಲ, ಅವುಗಳು ಜನರಿಂದ ಜನರಿಗೆ ಬಂದಂಥವುಗಳಾಗಿದ್ದವು. ಅವು ಜನಪದ ಸಾಹಿತ್ಯವಾಗಿ ಇಂದಿಗೂ ಪ್ರಸ್ತುತ ಎಂದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸದಸ್ಯ ಇಮಾಮಸಾಬ ವಲ್ಲೆಪ್ಪನವರ, ಪ್ರಭು ಕುಂದರಗಿ ಹಾಗೂ ಹಿರಿಯ ಜಾನಪದ ಕಲಾವಿದೆ ಸಾವಿತ್ರಿ ಪೂಜಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಪ್ರಾಸ್ತಾವಿಕ ಮಾತನಾಡಿದರು. ಆರತಿ ದೇವಶಿಖಾಮನಿ ನಿರೂಪಿಸಿದರು. ಹಿರಿಯ ಪತ್ರಕರ್ತ ಗಣೇಶ ಕದಂ, ಸಮುದಾಯದ ಹಿರಿಯ ಕಲಾವಿದ ಬಿ.ಐ.ಈಳಗೇರ ಹಾಜರಿದ್ದರು.

ಇದನ್ನೂ ಓದಿ ಧಾರವಾಡ | ಮಕ್ಕಳ ದೂರುಗಳು ಗ್ರಾಮದ ಅಭಿವೃದ್ಧಿಗೆ ಪೂರಕ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಸಾಂಸ್ಕಂತಿಕ ಕಾರ್ಯಕ್ರಮದಲ್ಲಿ ಸಾವಿತ್ರಿಬಾಯಿ ಪೂಜಾರ ಮತ್ತು ವೃಂದದಿಂದ ಗೀಗೀ ಪದಗಳು, ಶರೀಫ್ ದೊಡ್ಡಮನಿ ಮತ್ತು ವೃಂದ ಹಾಗೂ ಯಕ್ಕೇರೆಪ್ಪ ನಡುವಿನಮನಿ ಮತ್ತು ವೃಂದದಿಂದ ತತ್ವಪದಗಳು, ಶ್ರೀಧರ ಭಜಂತ್ರಿ ಮತ್ತು ವೃಂದದಿಂದ ಶಹನಾಯಿ ವಾದನ, ಮಡಿವಾಳಪ್ಪ ಭಜಂತ್ರಿ ಮತ್ತು ವೃಂದದಿಂದ ವಚನ ಗಾಯನ, ಕೀರ್ತನಾ ನಾಯಕ ಮತ್ತು ವೃಂದದಿಂದ ಸುಗಮ ಸಂಗೀತ, ಅಶ್ವಿನಿ ಉಳ್ಳಿಕಾಶಿ ಮತ್ತು ವೃಂದದಿಂದ ಭಾವಗೀತಗಳ ಗಾಯನ, ಸ್ಟಿಫನ್ ಲುಂಜಳ ಮತ್ತು ವೃಂದದಿಂದ ವಾದ್ಯ ಸಂಗೀತ, ಚನ್ನಮ್ಮ ಹುಲಮನಿ ಮತ್ತು ವೃಂದದಿಂದ ಸೋಬಾನ ಹಾಡುಗಳು ಹಾಗೂ ಮಹಾಂತೇಶ ದೊಡಮನಿ ಮತ್ತು ವೃಂದದಿಂದ ಹೋರಾಟದ ಹಾಡುಗಳ ಗಾಯನ ಕಾರ್ಯಕ್ರಮ ಜರುಗಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...