ಧಾರವಾಡ | ಪಡಿತರದಲ್ಲಿ ಸ್ಥಳೀಯ ಆಹಾರ ಧಾನ್ಯ ವಿತರಿಸುವಂತೆ ಗ್ರಾಕೂಸ ಆಗ್ರಹ

Date:

ಪಡಿತರದಲ್ಲಿ ಸ್ಥಳೀಯ ಆಹಾರ ಧಾನ್ಯ, ಅಡುಗೆ ಎಣ್ಣೆ ಮತ್ತು ಬೇಳೆ ನೀಡುವುದು ಹಾಗೂ ಮನರೇಗಾ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಕಾರ್ಮಿಕ ಚೀಟಿ ನೀಡುವಂತೆ ಕಲಘಟಗಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಲಘಟಗಿ ಗ್ರಾಕೂಸ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು.

ಗ್ರಾಕೂಸ ಸಂಚಾಲಕಿ ನಿಂಗಮ್ಮ ಸವಣೂರ ಮಾತನಾಡಿ, “ರೈತರ ಮತ್ತು ಕಾರ್ಮಿಕರ ಹಿತ ದೃಷ್ಟಿಯಿಂದ, ಪೌಷ್ಠಿಕಾಂಶದ ಕೊರತೆ ನೀಗುವುದಕ್ಕಾಗಿ ಆಯಾಯ ಪ್ರದೇಶಕ್ಕನುಗುಣವಾಗಿ ಅಕ್ಕಿಯೊಂದಿಗೆ ಪ್ರತಿ ವ್ಯಕ್ತಿಗೆ ಜೋಳ ಅಥವಾ ಸ್ಥಳೀಯ ಆಹಾರ ಧಾನ್ಯ, 1 ಕೆಜಿ ತೊಗರಿಬೇಳೆ, 1 ಕೆಜಿ ಅಡುಗೆ ಎಣ್ಣೆ ಅನುಕೂಲಕರ ದರದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಕಲ್ಪಿಸುವಂತಾಗಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ಥಳೀಯ ಆಹಾರ ಧಾನ್ಯಗಳನ್ನು ವಿತರಣೆ ಮಾಡುವುದರಿಂದ ರೈತರ ಬೆಳೆಗೂ ಸ್ಥಳೀಯವಾಗಿ ಸೂಕ್ತ ಮಾರುಕಟ್ಟೆಯ ಲಭ್ಯತೆ, ಗ್ರಾಮೀಣ ಭಾಗದಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಪ್ರೋತ್ಸಾಹ, ಕಾರ್ಮಿಕರಿಗೆ ವಿಶೇಷವಾಗಿ ಅಪೌಷ್ಟಿಕತೆ ಹೆಚ್ಚುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಅಪೌಷ್ಠಿಕತೆ ನೀಗಿಸುವ ಪೌಷ್ಟಿಕ ಆಹಾರವೂ ಸಿಕ್ಕಂತಾಗುತ್ತದೆ. ಆಗ ಮಾತ್ರ ಆಹಾರ ಭದ್ರತೆಗೆ ಸರಿಯಾದ ಅರ್ಥ ಬರುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

“ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ 90 ದಿನಗಳಿಗೂ ಹೆಚ್ಚಿನ ಮಾನವ ದಿನಗಳನ್ನು ಮುಗಿಸಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗಾಗಿ ಬಿಒಸಿಡಬ್ಲ್ಯೂ ಅಡಿಯಲ್ಲಿ ಕಾರ್ಮಿಕ ಚೀಟಿಗಳನ್ನು ನೀಡಬೇಕು. ಉದ್ಯೋಗ ಖಾತ್ರಿಯಲ್ಲಿ ಹೆಚ್ಚುವರಿ 100 ದಿನ ಮಾನವ ದಿನಗಳ ಕೆಲಸ ನೀಡಬೇಕು. ಇವೆರಡೂ ಅಪೌಷ್ಠಿಕತೆ ನೀಗಿಸುವ ಆಹಾರ ಭದ್ರತೆ, ಆರೋಗ್ಯ, ಶಿಕ್ಷಣದಂಥ ಸಾಮಾಜಿಕ ಭದ್ರತೆ ನೀಡುವ ಯೋಜನೆಗಳಾಗಿದ್ದು, ರೈತರ ಮತ್ತು ಕಾರ್ಮಿಕರಿಗೆ ಏಕಕಾಲಕ್ಕೆ ಪ್ರಯೋಜನ ದೊರಕಲಿರುವ ಜನಪರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...