ಧಾರವಾಡ | ಗ್ರಾಪಂ ಚುನಾವಣೆ; ಗುರುಪಾದಪ್ಪ ಇಚ್ಚಂಗಿ ನೂತನ ಅಧ್ಯಕ್ಷ

Date:

ಒಟ್ಟು 11 ಸದಸ್ಯ ಬಲ ಹೊಂದಿರುವ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮಳಲಿ ಗ್ರಾಮ ಪಂಚಾಯತಿಯಲ್ಲಿ ಸೆ. 17ರಂದು ಚುನಾವಣೆ ನಡೆದಿದ್ದು, ಗುರುಪಾದಪ್ಪ ನಿಂಗಪ್ಪ ಇಚ್ಚಂಗಿ 7 ಮತಗಳನ್ನು ಪಡೆದು ಜಯಶಾಲಿಯಾದರು. ಸುಮಿತ್ರಾಬಾಯಿ ಪ್ರಕಾಶ ಕದಂ 4 ಮತಗಳನ್ನು ಪಡೆದು ಪರಾಭವಗೊಂಡರು. ಇದರಿಂದ ಗುರುಪಾದಪ್ಪ ನಿಂಗಪ್ಪ ಇಚ್ಚಂಗಿ ಅಧ್ಯಕ್ಷರಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಜಗದೀಶ್ ಕಮ್ಮಾರ ಘೋಷಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಗುರುಪಾದಪ್ಪ ಇಚ್ಚಂಗಿ ಮಾತನಾಡಿ, ಮಳಲಿ ಗ್ರಾಪಂ ವ್ಯಾಪ್ತಿಗೆ ಒಳಪಡುವ ಕುಂಕುರು, ತೀರ್ಥ ಹಾಗೂ ಮಳಲಿ ಗ್ರಾಮಗಳ ಸರ್ವ ಸದಸ್ಯರ ಸಹಕಾರದೊಂದಿಗೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡು ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಇದಕ್ಕೆ ಗ್ರಾಮದ ಹಿರಿಯರ ಸಹಕಾರ ಮುಖ್ಯ ಎಂದರು. ಇದೇ ವೇಳೆ ನೂತನ ಅಧ್ಯಕ್ಷರನ್ನು ಪಂಚಾಯತಿ ಆಡಳಿತ ಮಂಡಳಿ ಹಾಗೂ ಗುರು-ಹಿರಿಯರ ವತಿಯಿಂದ ಸನ್ಮಾನಿಸಿ, ಗೌರವಿಸಿದರು.

ಸದಸ್ಯ ಗುರುನಾಥಗೌಡ ಪಾಟೀಲ ಮಾತನಾಡಿ, ಚುನಾವಣೆಗಳು ಬರುತ್ತವೆ ಮತ್ತು ಹೋಗುತ್ತವೆ, ನಾವೆಲ್ಲ ಒಂದೇ. ಎಲ್ಲರೂ ಸೇರಿಕೊಂಡು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಲಹೆ ಪಡೆದು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸೋಣ. ಮೂರೂ ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ರೂಪಿಸಲು ಪಣತೊಡೋಣ ಎಂದು ಕರೆಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ಧಿ ಓದಿದ್ದೀರಾ? ಧಾರವಾಡ | ಪ್ರತಿ ಪೊಲೀಸ್ ಪೇದೆಯು ಜನಪರ, ಜನಸ್ನೇಹಿ ಆಗಬೇಕು: ಆಲೋಕ್ ಕುಮಾರ್

ಈ ಸಂದರ್ಭದಲ್ಲಿ ಸದಸ್ಯರಾದ ಗುರುನಾಥಗೌಡ ಬ. ಪಾಟೀಲ, ಮಂಜುನಾಥ ಗಂ. ದೊಡ್ಡಗೌಡ್ರ, ಮಾನಪ್ಪ ದ್ಯಾ. ಬಡಿಗೇರ, ಲಕ್ಷ್ಮೀ ಗು. ಕಳ್ಳಿಮನಿ, ಚನ್ನವ್ವ ಕ. ಸಂಶಿ, ಪಿಡಿಒ ನಾಗರಾಜ ಉಳ್ಳೆಸೂರ ಸೇರಿದಂತೆ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...