ಧಾರವಾಡ | ಮಾ.28ರಂದು ಹುಬ್ಬಳ್ಳಿಯಲ್ಲಿ ಹಲಗಿ ಹಬ್ಬ ಆಚರಣೆ

Date:

ಹೋಳಿ ಹುಣ್ಣಿಮೆಯ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಪ್ರತಿವರ್ಷದಂತೆ ಹಲಗಿ ಹಬ್ಬ ಆಚರಣೆಯ ಪೂರ್ವಭಾವಿಯಾಗಿ ಹುಬ್ಬಳ್ಳಿ ಮೂರುಸಾವಿರಮಠದಲ್ಲಿ ಬುಧವಾರ (ಮಾ.27) ಬೆಳಿಗ್ಗೆ ಡಾ.ಗುಈರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ನೇತೃತ್ವದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ತೆಂಗಿನಕಾಯಿ ಪತ್ರಿಕಾಗೋಷ್ಠಿನಡೆಸಿದರು.

ಹಲಗಿ ಹಬ್ಬ ಅರ್ಥಾತ್ ಜಗ್ಗಲಗಿ ಹಬ್ಬವನ್ನು ಗುರುವಾರ ಮದ್ಯಾಹ್ನ 3 ಗಂಟೆಯಿಂದ ಮೂರುಸಾವಿರ ಮಠದಿಂದ ಪ್ರಾರಂಭವಾಗಿ ದಾಜಿಬಾನಪೇಟ್, ಕೊಪ್ಪಿಕರ್ ರಸ್ತೆ ಮಾರ್ಗವಾಗಿ ಚಲಿಸಿ ಹುಬ್ಬಳ್ಳಿಯ ಮುಖ್ಯ ಬೀದಿಗಳಲ್ಲಿ ಮೆರವಣಿಗೆಯ ಮೂಲಕ ನೆರವೇರಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮೂರುಸಾವಿರ ಮಠದ ಡಾ. ಗುರುಸಿದ್ದ ರಾಜಯೋಗಿಂದ್ರ ಸ್ವಾಮಿಜಿ ಮಾತನಾಡಿ, ಹೋಳಿ ಹಬ್ಬ ಪೌರಾಣಿಕ ಇತಿಹಾಸವನ್ನು ನೆನಪಿಸುವ ವಿಶೇಷ ಹಬ್ಬವಾಗಿದೆ. ಹೋಳಿ ನಮ್ಮ ಭಾರತ ದೇಶದಲ್ಲಿ ಶ್ರೇಷ್ಠವಾದ ಹಬ್ಬವಾಗಿದೆ. ಹೋಳಿ ಹಬ್ಬವು ದೇಶದ ಭಾವೈಕ್ಯತೆಗೆ ಪೂರಕವಾಗಿದೆ. ಮತ್ತು ಹಲಗಿ ಹಬ್ಬದಲ್ಲಿ ಎಲ್ಲ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸವಾಗುತ್ತಿದೆ. ಕಳೆದ ಹದಿನೈದು ವರ್ಷಗಳಿಂದ ಈ ಜಗ್ಗಲಗಿ ಹಬ್ಬದ ಆಚರಣೆ ನಡೆದಿದೆ. ಈಗಾಗಿ ಈ ಸಲವೂ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮಾದ್ಯಮದ ಮೂಲಕ ವಿನಂತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹೇಶ್ ತೆಂಗಿನಕಾಯಿ ಮಾತನಾಡಿ, ನಶಿಸಿ ಹೋಗುತ್ತಿರುವ ಹಿಂದೂ ಸಂಸ್ಕೃತಿ ಹಬ್ಬವನ್ನು ಮುಂದಿನ‌ ಪೀಳಿಗೆಗೂ ಉಳಿಸುವ ಕೆಲಸವಾಗಬೇಕು. ಸಾಂಪ್ರಾದಯಿಕ ಮೆರಗನ್ನು ತಂದುಕೊಡುವ ಕೆಲಸ ಮತ್ತು ಜಗ್ಗಲಗಿ ಹಬ್ಬವನ್ನು ಇಡೀ ರಾಜ್ಯಕ್ಕೆ ಪ್ರಸ್ತುತಪಡಿಸುವ ಕಾರ್ಯವಾಗಬೇಕಿದೆ. ಮೂರುಸಾವಿರಮಠ ಸ್ವಾಮಿಜಿ ನೇತೃತ್ವದಲ್ಲಿ ಈ ಹಲಗಿ ಹಬ್ಬ ನೆರವೇರುತ್ತದೆ. ಈ ಆಚರಣೆಯ ಮೂಲಕ ಎಲ್ಲ ಕಲಾವಿದರನ್ನು ಗುರುತಿಸಿ ಗೌರವಿಸುವ ಕೆಲಸವಾಗುತ್ತಿದೆ. ಮೈಸೂರಿನಲ್ಲಿ ನಾಡಹಬ್ಬ ದಸರಾ ಮಾಡುವಂತೆ ಜಗ್ಗಲಗಿ ಹಬ್ಬವನ್ನೂ ಅನ್ಯ ರಾಜ್ಯದಲ್ಲೂ ಆಚರಿಸುವ ರೂಢಿಗೆ ತರಬೇಕು ಎಂದರು.

ವಿವಿಧ ಜಿಲ್ಲೆಗಳಿಂದ ಸುಮಾರು 47 ಕ್ಕೂ ಹೆಚ್ಚು ಜಗ್ಗಲಗೆ ತಂಡಗಳು ಬರಲಿದ್ದಾವೆ. ಮತ್ತು ಜಗ್ಗಲಗಿ ಮೆರವಣಿಯಲ್ಲಿ ನೀರು, ಮಜ್ಜಿಗೆ ವ್ಯವಸ್ಥೆ ಇರುತ್ತದೆ. ಪುರುಷರಿಗಷ್ಟೇ ಅಲ್ಲದೆ ಈ ಜಗ್ಗಲಗೆ ಹಬ್ಬದಲ್ಲಿ ಐದು ಮಹಿಳಾ ತಂಡಗಳು ಭಾಗವಹಿಸುತ್ತವೆ. ಒಟ್ಟಾರೆಯಾಗಿ ಹಿಂದೂ ಪರಂಪರೆಯನ್ನು ಉಳಿಸುವ ಉದ್ದೇಶವಾಗಿದೆ ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...