ಧಾರವಾಡ | ಎಲ್‌ಇಡಿ ಬೀದಿದೀಪ ಯೋಜನೆಗೆ ಎಚ್‌ಡಿಎಂಸಿ ಅನುಮೋದನೆ

Date:

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಹುನಿರೀಕ್ಷಿತ ಎಲ್‌ಇಡಿ ಬೀದಿದೀಪಗಳ ಯೋಜನೆಗೆ ಕೊನೆಗೂ ಅಧಿಕೃತ ಚಾಲನೆ ದೊರೆತಿದ್ದು, ನಗರಾಭಿವೃದ್ಧಿಯ ಕಡೆಗೆ ಒಂದು ಹೆಜ್ಚೆಯನ್ನಿಟ್ಟಿರುವ ಈ ಯೋಜನೆಯು ಆಗಸ್ಟ್‌ 18ರಂದು ಅನುಮೋದನೆಗೊಂಡಿದೆ.

ಬಹುನಿರೀಕ್ಷಿತ ಈ ಯೋಜನೆಯಡಿಯಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಈಗಾಗಲೇ ಅಸ್ಥಿತ್ವದಲ್ಲಿದ್ದ ಸಾಂಪ್ರದಾಯಿಕ ಬೀದಿದೀಪಗಳ ಬದಲಿಗೆ ಎಲ್‌ಇಡಿ ದೀಪಗಳನ್ನು ಅಳವಡಿಸಲಾಗುತ್ತದೆ. ಹೆಚ್ಚುವರಿಯಾಗಿ ಈ ಯೋಜನೆಯು ಬೀದಿದೀಪಗಳ ನಿರ್ವಹಣೆ ಮತ್ತು ದಕ್ಷತೆಗೆ ಕೇಂದ್ರೀಕೃತ ನಿರ್ವಹಣೆ ಹಾಗೂ ಮೇಲ್ವಿಚಾರಣಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕ­-ಖಾಸಗಿ ಸಹಭಾಗಿತ್ವದ ಮಾದರಿಯೊಂದಿಗೆ ಏಳು ವರ್ಷಗಳ ರಿಯಾಯಿತಿ ಅವಧಿಯಲ್ಲಿ ಮಾದರಿ ರೂಪಿಸಲು ಯೋಜನೆ ತಯಾರಿಸಲಾಗಿದೆ. ಈ ಯೋಜನೆಗೆ ಒಟ್ಟು 93.6 ಕೋಟಿ ರೂಪಾಯಿ ಮಂಜೂರಾಗಿದೆ.

ಎಚ್‌ಡಿಎಂಸಿ ಆಯುಕ್ತರ ನೇತೃತ್ವದಲ್ಲಿ ನಡೆದ ವ್ಯಾಪಕ ಚರ್ಚೆ ಮತ್ತು ಸಮಾಲೋಚನೆಯ ಬಳಿಕ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಪುರಸಭೆ ಆಡಳಿತ ನಿರ್ದೇಶನಾಲಯದ ವತಿಯಿಂದ ಯೋಜನೆಗೆ ವ್ಯಾಪಕ ಬೆಂಬಲ ದೊರೆತಿದೆ. ಹಣಕಾಸಿನ ಸಂಪೂರ್ಣ ಮೌಲ್ಯಮಾಪನದ ಬಳಿಕ ತುಮಕೂರಿನ ಶ್ರೀ ಮಂಜು ಎಲೆಕ್ಟ್ರಿಕಲ್ಸ್‌ಗೆ ಗುತ್ತಿಗೆ ನೀಡಲಾಯಿತು. ಅನ್ವಯವಾಗುವ ಎಲ್ಲ ತೆರಿಗೆಗಳನ್ನು ಒಳಗೊಂಡಂತೆ 1.1 ಕೋಟಿ ರೂಪಾಯಿ ಮಾಸಿಕ ಕಂತನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಯೋಜನೆಯ ಮೂಲಕ ಬೀದಿದೀಪಗಳ ಇಂಧನಾ ವೆಚ್ಚ ಮತ್ತು ನಿರ್ವಹಣಾ ವೆಚ್ಚವನ್ನು ಗಣನೀಯವಾಗಿ ಕಡಿಮೆ ಮಾಡುವ ಮೂಲಕ ನಗರದ ಮೂಲ ಸೌಕರ್ಯಗಳಲ್ಲಿ ಮಹತ್ತರ ಬದಲಾವಣೆ ತರುವ ನಿರೀಕ್ಷೆಯಿದೆ. ಆಧುನಿಕ ತಂತ್ರಜ್ಞಾನದ ಎಲ್‌ಇಡಿ ಬೀದಿದೀಪಗಳು ಉತ್ತಮ ಗುಣಮಟ್ಟದೊಂದಿಗೆ ನಿವಾಸಿಗಳು ಮತ್ತು ಪ್ರಯಾಣಿಕರಿಗೆ ಸುರಕ್ಷಿತವಾಗಿರುತ್ತವೆ.

ಎಲ್‌ಇಡಿ ಅಳವಡಿಕೆ ಯೋಜನೆಯು ವಾಸ್ತವವಾಗಿ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್‌ ಸಿಟಿ ಅಡಿಯಲ್ಲಿ ಬರುವ ಯೋಜನೆಯಾಗಿದ್ದು, 58 ಸಾವಿರ ಬೀದಿದೀಪಗಳನ್ನು ಎಲ್‌ಇಡಿ ದೀಪಗಳನ್ನಾಗಿ ಪರಿವರ್ತಿಸುವ ಯೋಜನೆಯನ್ನು ರೂಪಿಸಿತ್ತು. 2018ರಿಂದ 2022ರವರೆಗೆ ಎಚ್‌ಡಿಎಸ್‌ಸಿಎಲ್‌ 7 ಬಾರಿ ಗುತ್ತಿಗೆ ಕರೆದಿತ್ತು. ಆದರೆ ಪಾಲುದಾರರು ಇಲ್ಲದಿರುವ ಕಾರಣಕ್ಕಾಗಿ ಈ ಯೋಜನೆಯನ್ನು ಎಚ್‌ಡಿಎಂಸಿಗೆ ವಹಿಸಲಾಗಿದೆ. ಮಹಾನಗರ ಪಾಲಿಕೆಯು 75 ಸಾವಿರ ಬೀದಿ ದೀಪಗಳನ್ನು ಪರಿವರ್ತಿಸುವ ಯೋಜನೆ ಹಾಕಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಗ್ರಾಮೀಣ ಆರ್ಥಿಕತೆಯ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು: ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸರ್ಕಾರ ಸ್ಪಂದಿಸುವುದೇ?

“ಈ ಯೋಜನೆಯನ್ನು ಇನ್ನೆರಡು ವಾರಗಳಲ್ಲೇ ಜಾರಿಗೊಳಿಸಲಿದ್ದು, ಗುತ್ತಿಗೆದಾರರೊಂದಿಗೆ ಎಲ್ಲ ಔಪಚಾರಿಕಗಳು ಶ್ರೀಘ್ರದಲ್ಲೇ ಪೂರ್ಣಗೊಳ್ಳಲಿವೆ. ಈಗಾಗಲೇ ಎಚ್‌ಡಿಎಂಸಿಯು ತಿಂಗಳಿಗೆ 2 ಕೋಟಿ ರೂಪಾಯಿ ಇದ್ದ ಮಾಸಿಕ ಕಂತನ್ನು 1 ಕೋಟಿ ರೂಪಾಯಿಗಳಿಗೆ ಇಳಿಸಿದೆ. ಇದರ ಜತೆಗೆ ಬೀದಿ ದೀಪಗಳ ತಿಂಗಳ ನಿರ್ವಹಣಾ ವೆಚ್ಚವೂ ಕೂಡಾ ಉಳಿತಾಯವಾಗಲಿದೆ. ಈ ಯೋಜನೆಯು ಇಂಧನ ದಕ್ಷತೆ ಮತ್ತು ಸುಸ್ಥಿರತೆಯ ಬಹುದೊಡ್ಡ ಗುರಿಯನ್ನು ಹೊಂದಿದೆ” ಎಂದು ಎಚ್‌ಡಿಎಂಸಿ ಎಲೆಕ್ಟ್ರಿಕಲ್‌ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್‌ ಎಂ ಗಣಾಚಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...