ಧಾರವಾಡ | ಆರೋಗ್ಯ ರಕ್ಷಣೆ ಎಲ್ಲರ ಜವಾಬ್ದಾರಿ: ಸಿಇಓ ಭುವನೇಶ ಪಾಟೀಲ

Date:

ಸಾರ್ವಜನಿಕರ ಆರೋಗ್ಯ ರಕ್ಷಣೆಯು ಸರ್ಕಾರದ ಜವಾಬ್ದಾರಿ ಮಾತ್ರ ಅಲ್ಲ, ಎಲ್ಲ ನಾಗರಿಕರ ಜವಾಬ್ದಾರಿಯೂ ಆಗಿದೆ. ವೈರಲ್ ಹೆಪಟೈಟಿಸ್ ಕುರಿತು ಜಾಗೃತಿ ಮೂಡಿಸುವುದು ಮತ್ತು ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಪೂರೈಸುವುದರ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾಗಳ ಸಂಯುಕ್ತ ಆಶ್ರಯದಲ್ಲಿ ಸೆ. 9ರಂದು ಏರ್ಪಡಿಸಿದ್ದ ರಾಷ್ಟ್ರೀಯ ವೈರಲ್ ಹೆಪಟೈಟಿಸ್ ದಿನಾಚರಣೆ ಮತ್ತು ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡುತ್ತಾ, ಗ್ರಾಮೀಣ ಜನರಿಗೆ ಹಾಗೂ ಕೊಳಚೆ ಪ್ರದೇಶಗಳಲ್ಲಿನ ಜನರಿಗೆ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಅರಿವು ಮೂಡಿಸಬೇಕು. ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಸಹ ಮಾಡಬೇಕು. ಈ ಕಾಯಿಲೆ ಬಂದಿದೆ ಎಂದು ಯಾರೂ ಭಯಪಡುವ ಅವಶ್ಯಕತೆ ಇರುವುದಿಲ್ಲ. ಅದಕ್ಕಾಗಿ ಸರಕಾರದವರು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅದರ ಸದುಪಯೋಗವನ್ನು ಎಲ್ಲರೂ ಪಡೆಯಬೇಕು ಎಂದು ಹೇಳಿದರು.

ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಮ್.ಹೊನಕೇರಿ ಮಾತನಾಡಿ, ಇದು ಬೇಗನೆ ಎಲ್ಲರಿಗೂ ಹರಡುವ ರೋಗ. ಸಮಯಕ್ಕೆ ತಕ್ಕ ಚಿಕಿತ್ಸೆ, ಲಸಿಕೆ ಹಾಗೂ ಆರೋಗ್ಯಕರ ಜೀವನಶೈಲಿ ಅನುಸರಿಸುವ ಮೂಲಕ ತಡೆಗಟ್ಟಬಹುದು. ಆರೋಗ್ಯ ಇಲಾಖೆ ನಡೆಸುತ್ತಿರುವ ಜಾಗೃತಿ ಕಾರ್ಯಕ್ರಮಗಳಿಗೆ ಜನ ಸಹಕಾರ ನೀಡಿದರೆ, ಭವಿಷ್ಯದಲ್ಲಿ ಹೆಪಟೈಟಿಸ್ ಹಾಗೂ ಕ್ಷಯರೋಗ ನಿರ್ಮೂಲನೆ ಸಾಧ್ಯವಾಗುತ್ತದೆ. ಕ್ಷಯರೋಗಿಗಳಿಗಾಗಿ ನೀಡಲಾಗುತ್ತಿರುವ ಪೌಷ್ಠಿಕ ಆಹಾರವು ಅವರ ದೇಹದ ಶಕ್ತಿ ಹೆಚ್ಚಿಸಲು ನೆರವಾಗುತ್ತದೆ. ಹೆಪಟೈಟಿಸ್ ದಿನಾಚರಣೆಯ ಅಂಗವಾಗಿ ಜನರಲ್ಲಿ ರೋಗದ ಕಾರಣಗಳು, ತಡೆಗಟ್ಟುವ ಕ್ರಮಗಳು ಮತ್ತು ಚಿಕಿತ್ಸೆಯ ಕುರಿತು ಅರಿವು ಮೂಡಿಸುವುದು ನಮ್ಮ ಉದ್ದೇಶ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ರವೀಂದ್ರ ಬೊವೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್.ಪಾತ್ರೋಟ ಸ್ವಾಗತಿಸಿದರು. ಎನ್. ಎಂ. ಅಗಡಿ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಬೆಳಗಾವಿ ವಿಭಾಗದ ವಿಶ್ವ ಆರೋಗ್ಯ ಸಂಸ್ಥೆ ಸಲಹೆಗಾರ ಡಾ.ಸತೀಶ್ ಘಾಟಕೆ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಚಿತ್ತರಗಿ, ಎನ್.ವಿ.ಹೆಚ್.ಸಿ.ಪಿಯ ಫಿಜಿಶನ್ ನೋಡಲ್ ಅಧಿಕಾರಿ ಡಾ. ಕಿರಣ ಕುಲಕರ್ಣಿ ವೇದಿಕೆಯ ಮೇಲಿದ್ದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ರಾಷ್ಟ್ರೀಯ ಲೋಕ ಅದಾಲತ್; 203 ಪ್ರಕರಣಗಳ ಇತ್ಯರ್ಥ

ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಹಾಗೂ ರೋಗಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...