ಧಾರವಾಡ | ಆರೋಗ್ಯವೇ ಅಮೂಲ್ಯ ರತ್ನ; ಸ್ವಚ್ಛತೆಯೇ ಅದರ ಕವಚ: ಡಾ.ಜಮೀರಾ.

Date:

ಮಹಿಳೆಯು ಆರೋಗ್ಯವಾಗಿರಬೇಕೆಂದರೆ ಸ್ವಚ್ಛತೆ ಅತಿ ಮುಖ್ಯವಾಗಿದೆ. ಮುಖ್ಯವಾಗಿ ಮಾಸಿಕ ಸ್ವಚ್ಛತೆ ಕುರಿತು ವಿಶೇಷ ಜಾಗೃತಿ ಅವಶ್ಯವಾಗಿದೆ ಎಂದು ಅಂಜುಮನ್ ಮಹಾವಿದ್ಯಾಲಯದಲ್ಲಿ ಮಹಿಳಾ ಸಬಲೀಕರಣ ಕೋಶ ಹಾಗೂ ಎನ್ಎಸ್ಎಸ್ ಘಟಕ, ಮತ್ತು ಟ್ರೂ ಲೈಫ್ ಫೌಂಡೇಶನ್ ಸಹಯೋಗದಲ್ಲಿ ಮಹಿಳಾ ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಜಾಗೃತಿ ಕಾರ್ಯಕ್ರಮಮದಲ್ಲಿ ಸ್ತ್ರೀರೋಗ ತಜ್ಞೆ ಡಾ. ಜಮೀರಾ ಮಾತನಾಡಿ ತಿಳಿಸಿದರು.

ಅಶುದ್ಧತೆಯಿಂದ ಕ್ಯಾನ್ಸರ್‌ಗಳಂತಹ ಗಂಭೀರ ರೋಗಗಳಿಗೆ ಮಹಿಳೆ ಬಲಿಯಾಗುತ್ತಿದ್ದಾಳೆ. ಈ ಕುರಿತು ಜಾಗೃತ ವಹಿಸಿ ಆರೋಗ್ಯವೇ ಅಮೂಲ್ಯ ರತ್ನ ಮತ್ತು ಸ್ವಚ್ಛತೆಯೇ ಅದರ ಕವಚವೆಂಬ ಸತ್ಯ ಅರಿಯಬೇಕಿದೆ. ಕಾಯಿಲೆ ಬಂದಾಗ ಗುಣಪಡಿಸುವ ಪ್ರಯತ್ನ ಮಾಡುವುದಕ್ಕಿಂತ ಕಾಯಿಲೆ ಬರುವ ಮೊದಲೇ ಜಾಗೃತ ವಹಿಸುವುದು ಮುಖ್ಯವೆಂದು ತಿಳಿಸಿದರು.

ಟ್ರೂ ಲೈಫ್ ಫೌಂಡೇಶನ್ ಅಧ್ಯಕ್ಷ ಡಾ. ಅಲ್ಲಾಹುದ್ದೀನ್ ಶೇಕ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿ, ಮಹಿಳೆ ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ಇರುವುದರಿಂದ ಕ್ಯಾನ್ಸರ್ ಗಳಂತಹ ವಿಭಿನ್ನ ಕಾಯಿಲೆಗಳಿಂದ ಬಳಲುತ್ತಿರುವು್ಉ ಎದ್ದುಕಾಣುತ್ತದೆ. ಅದಕ್ಕಾಗಿ ಆರೋಗ್ಯದ ಕಾಳಜಿ ಮತ್ತು ಶುಚಿತ್ವ ಅತ್ಯವಶ್ಯ ಎಂದರು. ಡಾ. ಮೆಹರ್ ಅಫರೋಜ್ ಕಾಟೇವಾಡಿ ಮಾತನಾಡಿ, ಮಹಿಳಾ ಆರೋಗ್ಯದ ಸುಚಿತ್ವ ಕುರಿತು ಮುಕ್ತ ಚರ್ಚೆಯ ಮೂಲಕ ಜ್ಞಾನ ಒದಗಿಸುವ ಅವಶ್ಯಕತೆ ಇದೆ . ಇಂಥ ಜಾಗೃತಿ ಕಾರ್ಯಕ್ರಮಗಳು ಹೆಚ್ಚು ಹೆಚ್ಚಾಗಿ ಏರ್ಪಡಿಸಬೇಕೆಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಪ್ರಾಧ್ಯಾಪಕ ಡಾ. ಅಸ್ಮನಾಸ್ ಬಳ್ಳಾರಿ ಮಾತನಾಡಿ, ಸ್ವಚ್ಛತೆಯ ಕೊರತೆಯ ಅನೇಕ ರೋಗಗಳಿಗೆ ಕಾರಣ ಅದಕ್ಕಾಗಿ ಆರೋಗ್ಯಕರ ಹವ್ಯಾಸ ಅತ್ಯವಶ್ಯ. ಪ್ರತಿ ಮಹಿಳೆಯಲ್ಲಿ ಆತ್ಮವಿಶ್ವಾಸ ಮತ್ತು ಆತ್ಮ ಗೌರವ ಬೆಳೆಸಿಕೊಳ್ಳುವುದು ಅತ್ಯವಶ್ಯ ಎಂದು ತಿಳಿಸಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ವಿಶೇಷ ಕಾರ್ಯಾಗಾರ; 5 ಸಾವಿರ ವಿದ್ಯಾರ್ಥಿಗಳು ಭಾಗಿ

ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ. ಐ ಎ ಮುಲ್ಲಾ, ಐ.ಕ್ಯೂ ಎ.ಸಿ ಸಂಯೋಜಕ ಡಾ. ಏನ್ ಬಿ ನಲತವಾಡ, ಸಿಬ್ಬಂದಿ ಕಾರ್ಯದರ್ಶಿ ಡಾ. ಬಿಬಿ ಆಯಿಷಾ ಚಕೋಲಿ ಉಪಸ್ಥಿತರಿದ್ದರು. ಮಹಿಳಾ ಸಬಲೀಕರಣ ಸಮಿತಿಯ ಅಧ್ಯಕ್ಷೆ ಶ್ರುತಿ ಯಾವಗಲಮಠ ವಂದಿಸಿದರು. ಎನ್ಎಸ್ಎಸ್ ಅಧಿಕಾರಿ ಡಾ. ಸೈಯದ್ ತಾಜುನ್ನಿಸಾ, ಸ್ವಾಗತಿಸಿದರು. ಕಾಲೇಜು ಸಾಂಸ್ಕೃತಿಕ ಚಟುವಟಿಕೆಗಳ ಅಧ್ಯಕ್ಷೆ ಡಾ. ಸೌಭಾಗ್ಯ ಕೆ ಜಾದವ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ಪ್ರಾರಂಭದಲ್ಲಿ ಕುಮಾರಿ ಸಬಿಹಾ ಕಾಜಿ ಕುರಹಾನ್ ಪಠಿಸಿದರು. ಕುಮಾರಿ ಮಾಬುನ್ನಿ ದಫೆದರ್ ಶ್ಲೋಕ ಪಠಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...