ಧಾರವಾಡ | ಮೂಲಭೂತ ಸಮಸ್ಯೆಗಳಿಂದ ಕೊರಗುತ್ತಿದೆ ಹೊನ್ನಾಪುರ ಗ್ರಾಮ: ಕಣ್ಣು ತೆರೆಯಲಿದೆಯೇ ಸರ್ಕಾರ?

Date:

ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕು ಹೊನ್ನಾಪುರ ಗ್ರಾಮವು ಹಲವು ಮೂಲಭೂತ ಸಮಸ್ಯೆಗಳಿಂದ ಬಳಲುತ್ತಿದ್ದು, ಈ ಕುರಿತು ಗ್ರಾಮ ಪಂಚಾಯಿತಿ, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಮುಖ್ಯವಾಗಿ ಸರ್ಕಾರ ಗಮನ ಹರಿಸುತ್ತಿಲ್ಲ ಎಂಬುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಹೊನ್ನಾಪುರ ಗ್ರಾಮದಲ್ಲಿ ಒಟ್ಟು 800 ರಿಂದ 1000 ಮನೆಗಳಿದ್ದು, ಮೂರು ಖಾಸಗಿ ಆಸ್ಪತ್ರೆಗಳಿವೆ. ಆದರೆ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯೇ ಇಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ರೋಗಿಗಳು ಹತ್ತಿರದ ಮುಗದ ಅಥವಾ ಧಾರವಾಡ ಪಟ್ಟಣಕ್ಕೇ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಸಾರ್ವಜನಿಕರ ಉಪಯೋಗಕ್ಕಾಗಿ ಸಾರ್ವಜನಿಕ ಶೌಚಾಲಯಗಳೇ ಇಲ್ಲ. ಅದರಲ್ಲೂ ಮನೆಗೊಂದು ಶೌಚಾಲಯಗಳು ಇರುವುದು ಅತಿ ವಿರಳ. ಗ್ರಾಮದಲ್ಲಿ ಒಟ್ಟು ಮೂರು ಅಂಗನವಾಡಿಗಳಿದ್ದು, ಪ್ರತಿ ಮಂಗಳವಾರ ವಾರದ ಸಂತೆ ನಡೆಯುತ್ತದೆ. ಇಂತಹ ಗ್ರಾಮ ಮೂಲಭೂತ ಸಮಸ್ಯೆಗಳಿಂದ ಬಳಲುತ್ತಿದ್ದು ಈವರೆಗೂ ಸರ್ಕಾರವಾಗಲೀ, ಜನಪ್ರತಿನಿಧಿಗಳಾಗಲೀ ನಮ್ಮನ್ನು ಕಣ್ಣೆತ್ತಿ ನೋಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 11 09 at 2.55.08 PM

ಹೊನ್ನಾಪುರ ಗ್ರಾಮದಲ್ಲಿ ಲಿಂಗಾಯತ ಸಮುದಾಯ ದೊಡ್ಡ ಸಮುದಾಯವಾಗಿದ್ದು, ವಾಲ್ಮೀಕಿ, ಲಿಂಗಾಯತ, ಪರಿಶಿಷ್ಟ ಜಾತಿ ಮತ್ತು ಪಂಗಡ, ಹಣಬರ, ಮುಸ್ಲಿಂ, ಜೈನ, ಬ್ರಾಹ್ಮಣರು ಹೀಗೆ ಎಲ್ಲ ಸಮುದಾಯದವರು ವಾಸವಾಗಿದ್ದಾರೆ. ಧಾರವಾಡದಿಂದ ಅಳ್ನಾವರದ ಕಡೆಗೆ ಹೋಗುವ ರಾಜ್ಯ ಹೆದ್ದಾರಿಯಲ್ಲಿಯೇ ಈ ಗ್ರಾಮವು ಕಾಣಸಿಗುತ್ತದೆ.

ಇಲ್ಲಿ ವಾಸವಿರುವ ನಾವು ಮೂಲತಃ ಘಟಪ್ರಭಾ ಡ್ಯಾಮ್ ನಿರ್ಮಾಣದ ಸಮಯದಲ್ಲಿ ಅಂದರೆ 1975ರಲ್ಲಿ ಈ ಕಡೆಗೆ ವಲಸೆ ಬಂದೆವು. ಅಲ್ಲಿಂದ ಕಳೆದ 50 ವರ್ಷಗಳಿಂದ ನಾವಿಲ್ಲಿ ವಾಸ ಮಾಡುತ್ತಿದ್ದೇವೆ. ಗ್ರಾಮದಲ್ಲಿ ಬೆರಳೆಣಿಕೆಯಷ್ಟು ಮಾತ್ರ ಅಭಿವೃದ್ಧಿಯಾಗಿದೆ.

ಗ್ರಾಮವು ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದು, ಚರಂಡಿ ವ್ಯವಸ್ಥೆ ಮಾಡಿಸಿದ್ದರೂ ಕೂಡ ಈವರೆಗೆ ಉಪಯೋಗಕ್ಕೆ ದೊರಕಿಲ್ಲ. ಕೊಳಚೆ ನೀರೆಲ್ಲ ಮನೆಯೊಳಗೆ ಮನೆಯ ಅಂಗಳದಲ್ಲಿಯೇ ನುಗ್ಗಿ ಬರುತ್ತದೆ. ಅಲ್ಲಲ್ಲಿ ಸೊಳ್ಳೆಗಳ ಕಾಟ, ಗಬ್ಬು ವಾಸನೆ, ಕಾಂಕ್ರೀಟ್ ರಸ್ತೆ ಮಾಡಿಸಿದ್ದರೂ ಎಲ್ಲ ಕಿತ್ತು ಹೋಗಿವೆ. ಹೀಗೆ ಗ್ರಾಮದ ತುಂಬೆಲ್ಲ ರಸ್ತೆಯ ಸಮಸ್ಯೆಗಳಿಗಂತೂ ಲೆಕ್ಕವೇ ಇಲ್ಲ. ಗ್ರಾಮ ಪಂಚಾಯತಿಯನ್ನು ಪ್ರಶ್ನಿಸಿದರೆ; ‘ನಾವೇನು ಮಾಡುವುದು? ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ’ ಎಂದು ಗ್ರಾಮದ ನಿವಾಸಿ ಐ ಬಿ ಕಲಾಜ್ ಆರೋಪಿಸುತ್ತಾರೆ.

WhatsApp Image 2024 11 09 at 2.55.09 PM

ಈ ಕುರಿತು ಗ್ರಾಮ ಪಂಚಾಯತಿ ಅಧ್ಯಕ್ಷೆ ಶಾಂತವ್ವನವರ ಪತಿ ಭೀಮಪ್ಪ ಚಾಕ್ರಟೀಸ್ ಮಾತನಾಡಿ, ಈಗಾಗಲೇ ಗ್ರಾಮದ ಸ್ವಚ್ಛತೆಗೆ ಎನ್.ಆರ್.ಜಿಗೆ ಅರ್ಜಿ ಹಾಕಿದ್ದಾರೆ. ಸರ್ಕಾರದಿಂದ ಅನುದಾನ ಹೆಚ್ಚು ಬರತೊಡಗಿದರೆ; ಕಾಮಗಾರಿಗಳು ಚಾಲ್ತಿಗೆ ಬರುತ್ತವೆ. ಇನ್ನು ನಮ್ಮ ಗ್ರಾಮದಲ್ಲಿ ಪ್ರಾಥಮಿಕ ಆಸ್ಪತ್ರೆ ಇಲ್ಲ. ನಾವು ಚಿಕಿತ್ಸೆಗಾಗಿ ಧಾರವಾಡದ ಕಡೆಗೇ ಹೋಗಬೇಕು. ಗ್ರಾಮ ಪಂಚಾಯಿತಿಯಿಂದಲೂ ಆದಷ್ಟು ಕೆಲಸಗಳನ್ನು ಮಾಡುತ್ತಿದ್ದಾರೆ ಎಂದರು.

ಈ ವರದಿ ಓದಿದ್ದೀರಾ? ಧಾರವಾಡ | ಕ್ಷುಲ್ಲಕ ಕಾರಣಕ್ಕೆ ರಸ್ತೆ ಮಧ್ಯೆಯೇ ಗುಂಡಿನ ಕಾಳಗ: ಬಿಜೆಪಿ ಮುಖಂಡನ ಪುತ್ರ ಭಾಗಿ?

ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳುವುದೇ? ಅನುದಾನ ನೀಡುತ್ತಿಲ್ಲ ಎಂಬ ಆರೋಪಕ್ಕೆ ಉತ್ತರ ನೀಡುವುದೇ? ಎಂದು ಕಾದು ನೋಡಬೇಕಿದೆ.

WhatsApp Image 2024 11 09 at 2.56.14 PM
WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...