ಧಾರವಾಡ | ಟಿಬಿ (ಕ್ಷಯ) ಮುಕ್ತ ಗ್ರಾಮ ಮಾಡಲು ಸಂಶಿ ಗ್ರಾಮದಲ್ಲಿ ಮಾನವ ಸರಪಳಿ ಕಾರ್ಯಕ್ರಮ

Date:

ಟಿಬಿ (ಕ್ಷಯ) ಮುಕ್ತ ಭಾರತವನ್ನು ಮಾಡುವ ಕನಸಿನೊಂದಿಗೆ ಟಿಬಿ ಸೋಂಕಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಆಶಾ ಕಾರ್ಯಕರ್ತೆಯರು, ನರ್ಸ್ ಮತ್ತು ಸಿಸ್ಟರ್ಸ್ ಸಹಯೋಗದಲ್ಲಿ ಜನೆವರಿ 4 ರಂದು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಈ ಕುರಿತು ವೈದ್ಯೆ ಡಾ. ಸುಧಾ ಕೋಟೆಗೌಡರ ಮಾತನಾಡಿ, ಟಿಬಿ ಮುಕ್ತ ಗ್ರಾಮ ಮಾಡುವ ಸಲುವಾಗಿ ಗ್ರಾಮದಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದೇವೆ. ಆಸ್ಪತ್ರೆಯ ಸಿಬ್ಬಂದಿಗಳು ಮನೆ ಮನೆಗೆ ಭೆಟ್ಟಿ ನೀಡಿ ಕ್ಷಯರೋಗಿಗಳನ್ನು ಗುರುತಿಸಿ ಅವರಿಗೆ ಚಿಕಿತ್ಸೆ ಕೊಡುವ ಕೆಲಸವಾಗುತ್ತಿದೆ. ಟಿಬಿ ಎಂಬುದು ಶ್ವಾಸಕೋಶದ ಮೂಲಕ ಬರುವ ರೋಗವಾಗಿದೆ. ಒಂದು ವಾರದ ಮೇಲೆ ಜ್ವರವಿದ್ದರೆ, ವಿಪರೀತ ಕೆಮ್ಮು ಕಫವಿದ್ದರೆ, ಹಸಿವಾಗದಿರುವುದು, ತೂಕ ಕಡಿಮೆ ಆಗುವುದು ಈ ಎಲ್ಲ ಲಕ್ಷಣಗಳಿಂದ ಟಿಬಿ’ಯನ್ನು ಗುರುತಿಸಬಹುದು. ಈ ರೀತಿಯ ಲಕ್ಷಣಗಳು ಕಂಡುಬಂದಲಗಲಿ ತಕ್ಷಣವೆ ರೋಗಿಗಳು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಥವಾ ವೈದ್ಯರನ್ನು ಭೆಟ್ಟಿಯಾಗಬೇಕು. ಮತ್ತು ಜನರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಪೌಷ್ಟಿಕ ಆಹಾರವನ್ನು ಸೇವಿಸಬೇಕು, ದುಶ್ಟಗಳಿಂದ ದೂರವಾಗಬೇಕು ಎಂದು ತಿಳಿಸಿದರು.

IMG 20250105 083738 783 1

ಈ ಕುರಿತು ಗ್ರಾಮ ಪಂಚಾಯತಿ ಅಧ್ಯಕ್ಷ ರಾಜು ಪುಟ್ಟಣ್ಣನವರ ಮಾತನಾಡಿ, ಈಗಾಗಲೇ ಗ್ರಾಮದ ಆರೋಗ್ಯದ ಕೇಂದ್ರ, ಆಶಾ ಕಾರ್ಯಕರ್ತೆಯರು, ಶಾಲಾ ಮಕ್ಕಳ ಸಹಯೋಗದಲ್ಲಿ ಕ್ಷಯ ನಿರ್ಮೂಲನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. 2025ಕ್ಕೆ ಟಿಬಿ ಮುಕ್ತ ಜಿಲ್ಲೆ, ಟಿಬಿ (ಕ್ಷಯ) ಸೋಲಿಸಿ ದೇಶ ಗೆಲ್ಲಿಸಿ ಇತ್ಯಾದಿ ಘೋಷಣೆಗಳ ಕಾರ್ಯಕ್ರಮ ಯಶಸ್ವಿಯಾಗಿದೆ. ಈ ಮೂಲಕ ಸರ್ಕಾರದ ಆದೇಶಗಳನ್ನು ಪಾಲಿಸುತ್ತ ಎಲ್ಲರೂ ರೋಗಗಳನ್ನು ತಡೆಗಟ್ಟಲು ಕೈಜೋಡಿಸಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ಸುರೇಶ್ ಕಳಸಣ್ಣವರ ಮಾತನಾಡಿ, ಇತ್ತೀಚಿನ ಯುವಕರು ಬಹುತೇಕವಾಗಿ ಗುಟ್ಕಾ ಇತ್ಯಾದಿ ದುರಾಭ್ಯಾಸಕ್ಕೆ ಬಲಿಯಾಗಿದ್ದಾರೆ. ಅಂತಹ ದುಶ್ಚಟಗಳನ್ನು ಬಿಟ್ಟರೆ ಕ್ಷಯದಂತಹ ರೋಗವನ್ನು ಶೀಘ್ರ ಗುಣಪಡಿಸಬಹುದು. ಈಗಾಗಲೇ ಇಂತಹ ರೋಗಗಳನ್ನು ತಡೆಗಟ್ಟಲು ಆಶಾ ಕಾರ್ಯಕರ್ತೆಯರು, ಸಿಸ್ಟರ್ಸ್ ಸಹಿತ ಮನೆ ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.

ಈ ವರದಿ ಓದಿದ್ದೀರಾ? ಬೆಳಗಾವಿ | ಎತ್ತಿನ ಗಾಡಿಯ ಚಕ್ರದಲ್ಲಿ ಸಿಲುಕಿ ಮಹಿಳೆ ಸಾವು

ಟಿಬಿ (ಕ್ಷಯ) ರೋಗ ತಡೆಗಟ್ಟುವಿಕೆಯ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ, ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಶ್ರೀ ಫಕೀರೇಶ್ವರ ಶಾಲಾ ಮಕ್ಕಳು, ಶಿಕ್ಷಕರು, ಪಂಚಾಯತಿ ಸಿಬ್ಬಂದಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...