ಧಾರವಾಡ | ʼಎನ್‌ಡಿಎ ಮೈತ್ರಿಕೂಟವನ್ನು ಸೋಲಿಸದಿದ್ದರೆ ಮತ್ತಷ್ಟು ಸಂಕಟ ಅನುಭವಿಸಬೇಕಾಗುತ್ತದೆʼ

Date:

ದೇಶವನ್ನು ದಿವಾಳಿತನಕ್ಕೆ ತಳ್ಳಿದ ಎನ್‌ಡಿಎ ಮತ್ತು ಇಂಡಿಯಾ  ಮೈತ್ರಿಕೂಟಗಳ ಅಭ್ಯರ್ಥಿಗಳನ್ನು ಈ ಲೋಕಸಭೆ ಚುನಾವಣೆಯಲ್ಲಿ ಸೋಲಿಸಲು ಜನ ಸಂಘಟಿತರಾಗದೇ ಹೋದರೆ, ಮುಂಬರುವ ದಿನಗಳಲ್ಲಿ ಮತ್ತಷ್ಟು ಸಂಕಟ ಎದುರಿಸಬೇಕಾಗುತ್ತದೆ ಎಂದು ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷದ ಪಾಲಿಟ್ ಬ್ಯೂರೊ ಸದಸ್ಯ ಕಾಮ್ರೆಡ್ ಕೆ. ರಾಧಾಕೃಷ್ಣ ಎಚ್ಚರಿಸಿದರು.

ಧಾರವಾಡ ಜಿಲ್ಲೆಯ ಸಿಂಗನಹಳ್ಳಿ ಗ್ರಾಮದಲ್ಲಿ ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷದ ಅಭ್ಯರ್ಥಿ ಶರಣಬಸವ ಗೋನವಾರ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮೊದಲು ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ದೇಶದಲ್ಲಿ ಬಂಡವಾಳಶಾಹಿ ಪರ ನೀತಿಗಳನ್ನು ಆರಂಭಿಸಿತು. ಜಾಗತೀಕರಣ, ಉದಾರೀಕರಣ, ಖಾಸಗೀಕರಣಕ್ಕೆ ಭಾರತದ ಬಾಗಿಲನ್ನು ತೆರೆಯಿತು. ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಈ ನೀತಿಗಳನ್ನು ಅತ್ಯಂತ ವೇಗವಾಗಿ ಜಾರಿಗೊಳಿಸುತ್ತಿದೆ ಎಂದರು.

ಒಂದು ಕಲ್ಯಾಣ ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಎಲ್ಲರಿಗೂ ಉಚಿತವಾಗಿ ದೊರೆಯುವಂತಿರಬೇಕು. ಆದರೆ, ಅವು ಇಂದು ಖಾಸಗಿ ಬಂಡವಾಳಗಾರರ ಕೈಗೆ ಸಿಕ್ಕು ವ್ಯಾಪಾರೀಕರಣಗೊಂಡಿವೆ. ತನ್ಮೂಲಕ ಕಲ್ಯಾಣ ರಾಜ್ಯದ ಆಶಯವೇ ಬುಡಮೇಲಾಗಿ ಹೋಗಿದೆ. ಈ ಪಕ್ಷಗಳ ಚುನಾವಣಾ ರಾಜಕೀಯದಿಂದ ಯಾವುದೇ ಬದಲಾವಣೆ ಸಾಧ್ಯವಿಲ್ಲ. ಹೋರಾಟಗಳಿಂದಲೇ ಸಮಾಜದಲ್ಲಿ ಬದಲಾವಣೆ ಬರುತ್ತದೆ ಎಂದು ನಂಬಿರುವ ನಾವು ಚುನಾವಣೆಯನ್ನು ನಮ್ಮ ಚಳವಳಿಯ ಭಾಗವಾಗಿಯೇ ನೋಡುತ್ತೇವೆ ಎಂದು ಪ್ರತಿಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ಗಿಂತ ಭಿನ್ನ ಎಂಬ ಭರವಸೆ ಮೂಡಿಸಿ ಅಧಿಕಾರ ಹಿಡಿದ ಬಿಜೆಪಿಯ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರ ಬದುಕನ್ನು ಸಂಕಷ್ಟಕ್ಕೆ ತಳ್ಳಿತು. ಮೂರು ಕರಾಳ ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ರೈತರು ಈ ಕಾಯ್ದೆಗಳ ವಿರುದ್ಧ ಸಂಘಟಿತರಾಗಿ ಹೋರಾಡಿ ಸುಮಾರು 750 ಜನ ರೈತರು ಹುತಾತ್ಮರಾದರು ಮತ್ತು ಈ ಕಾಯ್ದೆಗಳನ್ನು ವಾಪಸು ತೆಗೆದುಕೊಳ್ಳುವಂತೆ ಮಾಡಿದರು. ಕಾಂಗ್ರೆಸ್‌ನವರು ಮಾಡಿದ ಭ್ರಷ್ಟಾಚಾರದಿಂದಲೇ ಜನ ಬೇಸತ್ತು ಬಿಜೆಪಿಗೆ ಅಧಿಕಾರ ಕೊಟ್ಟರು. ಆದರೆ, ಬಿಜೆಪಿಯು ಅತ್ಯಂತ ಜನವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ದೂರಿದರು.

ಬಿಜೆಪಿಯವರು ‘ಬೇಟಿ ಬಚಾವೋ, ಬೇಟಿ ಪಡಾವೋ’ ಎಂದು ದೊಡ್ಡದಾಗಿ ಘೋಷಣೆ ಮಾಡುತ್ತಾರೆ. ಆದರೆ, ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ ಬ್ರಿಜ್ ಭೂಷಣ ಸಿಂಗ್‌ರಂತಹ ಸಂಸದರು ಅವರ ಪಕ್ಷದಲ್ಲೇ ಇದ್ದಾರೆ. ಹಾಸನ ಕ್ಷೇತ್ರದಲ್ಲಿ ಎಚ್‌.ಡಿ. ದೇವೇಗೌಡರ ಕುಟುಂಬದ ದಬ್ಬಾಳಿಕೆ ಈಗ ಹೊರಗೆ ಬಂದಿದೆ. ಸಾವಿರಾರು ಮಹಿಳೆಯರು ಆ ಕುಟುಂಬದ ದೌರ್ಜನಕ್ಕೆ ಒಳಗಾಗಿರುವುದು ಬೆಳಕಿಗೆ ಬರುತ್ತಿದೆ. ಅಪ್ಪ ರೇವಣ್ಣ, ಮಗ ಪ್ರಜ್ವಲ್ ರೇವಣ್ಣನ ಕರ್ಮಕಾಂಡಗಳು ಬಯಲಿಗೆ ಬಂದರೂ ಅವರ ಜೊತೆ ಮೈತ್ರಿ ಮಾಡಿಕೊಂಡ ಮೋದಿ, ಶಾ ಹಾಗೂ ರಾಜ್ಯದ ಬಿಜೆಪಿ ಮುಖಂಡರು ಮಾತೇ ಆಡುತ್ತಿಲ್ಲ ಎಂದು ಟೀಕಿಸಿದರು.

ನಮ್ಮ ಪಕ್ಷ ದೇಶದ 151ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದು ರಾಜ್ಯದಲ್ಲಿ 19 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದೇವೆ. ಜನವಿರೋಧಿಯಾಗಿರುವ ಎನ್‌ಡಿಎ ಹಾಗೂ ಇಂಡಿಯಾ ಮೈತ್ರಿಕೂಟಗಳನ್ನು ತಿರಸ್ಕರಿಸಿ ಈ ಬಾರಿ ಜನಪರ ಹೋರಾಟಗಳಿಂದ ಹೊರಹೊಮ್ಮಿದ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಶರಣು ಗೋನವಾರ ಅವರನ್ನು ಬೆಂಬಲಿಸಲು ಧಾರವಾಡ ಕ್ಷೇತ್ರದ ಜನತೆ ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.

ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ರಾಜ್ಯ ಸಮಿತಿ ಸದಸ್ಯ ಕಾಮ್ರೆಡ್ ರಾಮಾಂಜನಪ್ಪ ಆಲ್ದಳ್ಳಿ ಅವರು ಮಾತನಾಡಿ, ನಮ್ಮ ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷವು ಧಾರವಾಡ ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಜನರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಹೋರಾಟಗಳನ್ನು ಸಂಘಟಿಸುತ್ತಿದೆ. ಕಾಂಗ್ರೆಸ್, ಬಿಜೆಪಿಯಂತಹ ಬಂಡವಾಳಶಾಹಿ ಪರ ಪಕ್ಷಗಳಿಗೆ ಪರ್ಯಾಯವಾಗಿ ಹೋರಾಟದ ರಾಜಕೀಯವನ್ನು ಮಾಡುತ್ತಿರುವ ನಮ್ಮ ಪಕ್ಷವನ್ನು ಬೆಂಬಲಿಸಿ ಹೋರಾಟಗಳನ್ನು ಬಲಪಡಿಸಬೇಕು ಎಂದು ಅವರು ಹೇಳಿದರು.

ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷದ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗಣ್ಣವರ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಮುಖಂಡರಾದ ವಿ.ನಾಗಮ್ಮಾಳ್, ಧಾರವಾಡ ಕ್ಷೇತ್ರದ ಅಭ್ಯರ್ಥಿ ಶರಣಬಸವ ಗೋನವಾರ, ಹಾವೇರಿ ಕ್ಷೇತ್ರದ ಅಭ್ಯರ್ಥಿ ಗಂಗಾಧರ ಬಡಿಗೇರ, ಉತ್ತರ ಕನ್ನಡ ಕ್ಷೇತ್ರದ ಅಭ್ಯರ್ಥಿ ಗಣಪತಿ ಹೆಗಡೆ, ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ವಿ.ದೀಪಾ, ಪಕ್ಷದ ಸದಸ್ಯರಾದ ಗೋವಿಂದ ಕೃಷ್ಣಪ್ಪನವರ, ಬಾಳೇಶ, ಖಂಡೋಜಿ, ರಾಣಪ್ಪ, ಮಡಿವಾಳಪ್ಪ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...