ಧಾರವಾಡ | ನಾರಿಯರು ಶಕ್ತರಾದರೆ, ಸಮಾಜ ಶಕ್ತಿಯುತವಾಗುತ್ತದೆ: ಗಿರೀಶಗೌಡ ಪಾಟೀಲ

Date:

ಇಂದಿನ ದಿನಮಾನಗಳಲ್ಲಿ ಜನರಲ್ಲಿ ಪೌಷ್ಠಿಕತೆ ಮತ್ತು ಆರೋಗ್ಯದ ಕುರಿತು ಕಾಳಜಿ ಕಡಿಮೆಯಾಗುತ್ತಿದೆ. ಮಹಿಳೆಯರು ಮತ್ತು ಯುವತಿಯರಿಗೆ ಸರ್ಕಾರದ ವಿವಿಧ ಸೌಲಭ್ಯಗಳಿದ್ದರೂ ಆರೋಗ್ಯವಾಗಿರಲು ಸಾಧ್ಯವಾಗುತ್ತಿಲ್ಲ. ನಾರಿಯರು ಶಕ್ತರಾದರೆ ನಮ್ಮ ಪರಿವಾರ ಮತ್ತು ಸಮಾಜ ಶಕ್ತಿಯುತವಾಗುತ್ತದೆ ಎಂದು ಕುಂದಗೋಳ ತಾಲೂಕಿನ ಸಂಶಿ ಗ್ರಾಮ ಪಂಚಾಯತಿ ಅಧ್ಯಕ್ಷ ಗಿರೀಶಗೌಡ ಪಾಟೀಲ ಅಭಿಪ್ರಾಯಪಟ್ಟರು.

ತಾಲೂಕಿನ ಸಂಶಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ‘ಸ್ವಸ್ಥ ನಾರಿ ಶಕ್ತ ಪರಿವಾರ’ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, “ಸರ್ಕಾರದ ಮೂಲಭೂತ ಸೌಲಭ್ಯಗಳನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಮಹಿಳೆ ಕೇವಲ ಕುಟುಂಬದ ಆಧಾರಸ್ತಂಭವಲ್ಲ, ಆಕೆಯು ಸಮಾಜದ ಪ್ರಗತಿಯ ಪ್ರತೀಕ. ನಾವು ನಮ್ಮ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳ ಆರೋಗ್ಯ ಮತ್ತು ಸಬಲೀಕರಣಕ್ಕೆ ಬೆಂಬಲ ನೀಡಿದಾಗ ಮಾತ್ರ ಒಂದು ಬಲಿಷ್ಠ ಮತ್ತು ಸಮೃದ್ಧ ಸಮಾಜವನ್ನು ನಿರ್ಮಿಸಲು ಸಾಧ್ಯ” ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಹರೀಶ ಲಕ್ಷ್ಮೇಶ್ವರ ಮಾತನಾಡಿ, “ಒಬ್ಬ ಮಹಿಳೆ ವಿದ್ಯಾವಂತಳಾದರೆ ಇಡೀ ಕುಟುಂಬ ವಿದ್ಯಾವಂತವಾಗುತ್ತದೆ’ ಎಂಬ ನಮ್ಮ ಹಿರಿಯರ ಮಾತಿನಂತೆ, ಒಬ್ಬ ಮಹಿಳೆ ಆರೋಗ್ಯವಂತಳಾದರೆ ಇಡೀ ಕುಟುಂಬ ಮತ್ತು ಸಮಾಜವೇ ಆರೋಗ್ಯವಂತವಾಗಿರುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಆರೋಗ್ಯವು ಅನೇಕ ಬಾರಿ ನಿರ್ಲಕ್ಷ್ಯಕ್ಕೆ ಒಳಗಾಗುತ್ತದೆ. ಪೌಷ್ಟಿಕಾಂಶದ ಕೊರತೆ, ಸೂಕ್ತ ವೈದ್ಯಕೀಯ ಸೇವೆಗಳ ಕೊರತೆ ಮತ್ತು ಅನಾರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳು ಮಹಿಳೆಯರ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ.
ಈ ಪರಿಸ್ಥಿತಿಯನ್ನು ಬದಲಾಯಿಸುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ನಮ್ಮ ಗ್ರಾಮ ಪಂಚಾಯತಿ ಕೂಡ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆರೋಗ್ಯ ಕೇಂದ್ರಗಳಲ್ಲಿ ನಿಯಮಿತ ತಪಾಸಣಾ ಶಿಬಿರಗಳನ್ನು ಆಯೋಜಿಸುವುದು, ಪೌಷ್ಟಿಕ ಆಹಾರದ ಮಹತ್ವದ ಕುರಿತು ಜಾಗೃತಿ ಮೂಡಿಸುವುದು ಮತ್ತು ಸರ್ಕಾರದ ಆರೋಗ್ಯ ಯೋಜನೆಗಳ ಬಗ್ಗೆ ಮಾಹಿತಿ ನೀಡುವುದು ನಮ್ಮ ಆದ್ಯತೆಗಳಲ್ಲಿ ಸೇರಿವೆ. ಮಹಿಳೆಯರು ಕೇವಲ ಮನೆಯ ಕೆಲಸಕ್ಕೆ ಸೀಮಿತರಾಗದೆ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಬೇಕು. ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಪ್ರೋತ್ಸಾಹಿಸುವ ಮೂಲಕ ನಾವು ಅವರನ್ನು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ನೆರವಾಗಬಹುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಧಾರವಾಡ | ಓಝೋನ್ ಪದರು; ಮನುಕುಲದ ಜೀವ ರಕ್ಷಕವಾಗಿದೆ: ಡಾ. ಎನ್ ಬಿ ನಾಲತವಾಡ

ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಸುರೇಶ ಕಳಸಣ್ಣವರ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಲೀಲಾವತಿ ಸೂಲದ, ಸದಸ್ಯರಾದ ಪಕ್ಕಿರೇಶ ಪಶುಪತಿಹಾಳ, ಶಂಕ್ರಪ್ಪ ಬ್ಯಾಹಟ್ಟಿ, ಪರಶುರಾಮ ಸೂಲದ, ಬಸವರಾಜ ಇಟಗಿ, ದೊಡ್ಡೇಶ,ಡಿ. ಕವಿತಾ. ಕೆ ಎಚ್, ಅನಿತಾ ಕೂನಬೇವು, ಮಂಜುಳಾ ಸುಂಕದ, ವಿಜಯಲಕ್ಷ್ಮಿ ಗಬ್ಬೂರ, ಗಿರಿಜಾ ಹೊಸಮನಿ, ಪಾತೀಮಾ ಅಣ್ಣಿಗೇರಿ, ಕಮಲಾ ಅರ್ಕಸಾಲಿ, ನಿರ್ಮಲಾ ಗಾಂಜಿ, ರೇಣುಕಾ ಗುಡಗೇರಿ, ಮಂಜುಳಾ ಗಡಗಿ, ಶೈಲಾ ಕೊಡ್ಲಿವಾಡ, ಸವಿತಾ ಲಕ್ಷ್ಮೇಶ್ವರ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...