ಯುವಕನೋರ್ವ ಚರಸ್ ಮಾದಕ ಪದಾರ್ಥವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಧಾರವಾಡದ ಚಿಕ್ಕಮಲ್ಲಿಗವಾಡ ಕ್ರಾಸ್ ಬಸ್ ಸ್ಟ್ಯಾಂಡ್ ಹತ್ತಿರ ನವೆಂಬರ್ 11, ರಂದು ಮಧ್ಯಾಹ್ನ 1ಗಂಟೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಾನಂದ ಕಟಗಿ, ಧಾರವಾಡ ಗ್ರಾಮೀಣ ಉಪವಿಭಾಗದ ಡಿ.ಎಸ್.ಪಿ ವಿನೋದ ಮುಕ್ತೇದಾರ, ಪೊಲೀಸ್ ಇನ್ಸಪೆಕ್ಟರ್ ಎಸ್. ಎಸ್. ಕಮತಗಿ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಪ್ರವೀಣ ಕೋಟಿ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ಕೈಕೊಂಡು ಆರೋಪಿ ಅಕೀಲಅಹ್ಮದ್ ತಂದೆ ಕುತುಬುದ್ದಿನ್ ಮುನವಳ್ಳಿ ಅನ್ನು ಬಂಧಿಸಿದದ್ದು, ಆತನಿಂದ 220 ಗ್ರಾಂ ಅಂದಾಜು ಮೌಲ್ಯ 80000 ರೂಗಳ ಚರಸ್ ಮಾದಕ ಪದಾರ್ಥವನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ
ಈ ಬಗ್ಗೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ ಎನ್.ಡಿ.ಪಿ.ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





