ಧಾರವಾಡ | ಹಿಂಗಾರಿನಲ್ಲಿ ಕಡಲೆ, ಜೋಳ, ಗೋಧಿ, ಕುಸುಬೆ ಬಿತ್ತನೆ‌ ಮಾಡಿ: ರೈತರಿಗೆ ಕೃಷಿ‌ ಇಲಾಖೆ ಸಲಹೆ

Date:

ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಪ್ರಾರಂಭವಾಗುವ ಹಂತದಲ್ಲಿದ್ದು, ಮುಖ್ಯ ಬೆಳೆಗಳಾದ ಕಡಲೆ, ಜೋಳ, ಗೋಧಿ ಹಾಗೂ ಕುಸುಬೆ ಬಿತ್ತಲು ರೈತರು ಸೂಕ್ತ ಕ್ರಮ ವಹಿಸುವುದು ಉತ್ತಮವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಲೆ: ಪ್ರತಿ ಕಿ.ಗ್ರಾಂ ಬೀಜಕ್ಕೆ 4 ಮಿ. ಲೀ ರೈಝೋಬಿಯಂ ಎಸ್.ಬಿ 120 ಮತ್ತು 4 ಮಿ. ಲೀ ರಂಜಕ ಕರಗಿಸುವ ಜೈವಿಕ ಗೊಬ್ಬರ ಬಿತ್ತನೆ ಮಾಡುವಾಗ ಬೀಜಕ್ಕೆ ಉಪಚರಿಸುವುದು. ಬಿತ್ತನೆಗೆ ಮೊದಲು ಬರ ನಿರೋಧಕತೆ ಹೆಚ್ಚಿಸಲು ಬೀಜವನ್ನು ಶೇ. 2 ಕ್ಯಾಲ್ಸಿಯಂ ಕ್ಲೋರೈಡ್ ದ್ರಾವಣದಲ್ಲಿ 30 ನಿಮಿಷ ಅಥವಾ ಶೇ. 25 ರ ಗೋಮೂತ್ರದಲ್ಲಿ 8 ಗಂಟೆಗಳ ಕಾಲ ನೆನೆಸಿ, ಕನಿಷ್ಠ 7 ಘಂಟೆ ನೆರಳಿನಲ್ಲಿ ಒಣಗಿಸಿ ಬೀಜವನ್ನು ಕಠಿಣಗೊಳಿಸಿ ನಂತರ ರೈಜೋಬಿಯಂ ಹಾಗೂ ರಂಜಕ ಕರಗಿಸುವ ಅಣುಜೀವಿಯಿಂದ ಉಪಚರಿಸಬೇಕು. ಅಲ್ಲದೇ, ಬಿತ್ತನೆಯ ಸಮಯದಲ್ಲಿ ಎಕರೆಗೆ 8 ಕಿ. ಗ್ರಾಂ ಮೈಕೊರೈಜಾ ಜೈವಿಕಗೊಬ್ಬರವನ್ನು 200 ಕಿ.ಗ್ರಾಂ ಎರೆಹುಳು ಗೊಬ್ಬರದ ಜೊತೆಗೆ ಮಿಶ್ರಣ ಮಾಡಿ ಬಿತ್ತನೆಯ ಸಾಲಿನ ಮಣ್ಣಿನಲ್ಲಿ ಹಾಕಿ ಬೆರೆಸಬೇಕು.

ಕಡಲೆಯಲ್ಲಿ ನಟೆ ರೋಗ, ಸಿಡಿ ರೋಗ, ಸೊರಗು ರೋಗ ತಡೆಗಟ್ಟಲು ಪ್ರತಿ ಕಿ.ಗ್ರಾಂ ಬೀಜಕ್ಕೆ 2 ಗ್ರಾಂ ಕ್ಯಾಪ್ಟಾನ್ 80 ಡಬ್ಲೂ.ಪಿ ಅಥವಾ ಥೈರಾಮ್ 75 ಡಬ್ಲೂ.ಪಿ ಅಥವಾ ಮೆಂಕೋಜೆಬ್ 75 ಡಬ್ಲೂ.ಪಿ ಅಥವಾ 3.5 ಗ್ರಾಂ (ಕಾರ್ಬನಡೈಜಿಮ್ + ಮ್ಯಾಂಕೋಜೆಬ್) ಅಥವಾ 4 ಗ್ರಾಂ ಟ್ರೈಕೋಡರ್ಮಾ ಜೈವಿಕ ಶಿಲೀಂಧ್ರದಿಂದ ಬೀಜೋಪಚಾರ ಮಾಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋಧಿ: ಎಕರೆಗೆ ಬೇಕಾಗುವ ಬಿತ್ತನೆ ಬೀಜವನ್ನು ದ್ರವ ರೂಪದ 80 ಮಿ.ಲೀ ಅಝೋಸ್ಫಿರಿಲಂ ಹಾಗೂ 80 ಮಿ.ಲೀ ದ್ರವ ರೂಪದ ರಂಜಕ ಕರಗಿಸುವ ಜೈವಿಕ ಗೊಬ್ಬರದಿಂದ ಉಪಚರಿಸಿ. ಬಿತ್ತನೆ ಮಾಡುವ ಮೊದಲು ರಸಗೊಬ್ಬರಗಳೆಲ್ಲವನ್ನೂ 6-8 ಸೆಂ.ಮೀ ಆಳದ ಸಾಲುಗಳಲ್ಲಿ ಮಣ್ಣಿನಲ್ಲಿ ಬೆರೆಸಿ, 23 ಸೆಂ.ಮೀ ಅಂತರದ ಸಾಲಿನಲ್ಲಿ ಬಿತ್ತನೆ ಮಾಡಬೇಕು. ಅಲ್ಲದೇ, ಬಿತ್ತನೆಯ ಸಮಯದಲ್ಲಿ ಎಕರೆಗೆ 8 ಕಿ.ಗ್ರಾಂ ಮೈಕೋರೈಜಾ ಜೈವಿಕ ಗೊಬ್ಬರವನ್ನು 200 ಕಿ.ಗ್ರಾಂ ಎರೆಹುಳು ಗೊಬ್ಬರದ ಜೊತೆಗೆ ಮಿಶ್ರಣ ಮಾಡಿ ಬಿತ್ತನೆಯ ಸಾಲಿನ ಮಣ್ಣಿನಲ್ಲಿ ಹಾಕಿ ಬೆರೆಸಬೇಕು.

ಜೋಳ: ಪ್ರತಿ ಕಿ.ಗ್ರಾಂ ಬೀಜಕ್ಕೆ ಕನಿಷ್ಠ 4 ಮಿ.ಲೀ ಅಝೋಸ್ಫಿರಿಲಂ ಮತ್ತು 4 ಮಿ.ಲೀ ದ್ರವ ರೂಪದ ರಂಜಕ ಕರಗಿಸುವ ಜೈವಿಕ ಗೊಬ್ಬರ ಬಿತ್ತನೆ ಮಾಡುವಾಗ ಬೀಜಕ್ಕೆ ಉಪಚರಿಸಬೇಕು. ಬೀಜೋಪಚಾರದ ಪೂರ್ವದಲ್ಲಿ ಪ್ರತಿ ಕಿ.ಗ್ರಾಂ ಬೀಜವನ್ನು 1.5 ಲೀ ನೀರಿನಲ್ಲಿ 30 ಗ್ರಾಂ ಕ್ಯಾಲ್ಸಿಯಂ ಕ್ಲೋರೈಡ್ ಅಥವಾ 7.5 ಗ್ರಾಂ ಪೊಟ್ಯಾಷಿಯಂ ನೈಟ್ರೇಟ್ ಬೆರೆಸಿದ ಅಥವಾ ಗೋಮೂತ್ರ (ಶೇ. 25) ಬೆರೆಸಿದ ದ್ರಾವಣದಲ್ಲಿ 8 ಘಂಟೆಗಳ ಕಾಲ ನೆನೆಸಿ ನೆರಳಿನಲ್ಲಿ ಒಣಗಿಸಿ ಬಿತ್ತುವುದರಿಂದ ಬೀಜ ಮೊಳಕೆ ಹಾಗೂ ಸಸಿಗಳ ಬೆಳವಣಿಗೆ ಸುಧಾರಿಸುವುದು.

ಇದನ್ನು ಓದಿದ್ದೀರಾ? ಬೆಂಗಳೂರು | ಆನ್‌ಲೈನ್ ಉದ್ಯೋಗದ ಹೆಸರಲ್ಲಿ 6 ಕೋಟಿ ವಂಚನೆ: 10 ಮಂದಿ ಆರೋಪಿಗಳ ಬಂಧನ

ಕುಸುಬೆ: ಬಿತ್ತುವ ಪೂರ್ವದಲ್ಲಿ ಬೀಜವನ್ನು ಶೇ. 2 ರ ಕ್ಯಾಲ್ಸಿಯಂ ಕ್ಲೋರೈಡ್ ದ್ರಾವಣದಲ್ಲಿ (1.0 ಲೀ ನೀರಿನಲ್ಲಿ 20 ಗ್ರಾಮ ಕ್ಯಾಲ್ಸಿಯಂ ಕ್ಲೋರೈಡ್) 12 ಘಂಟೆಗಳ ಕಾಲ ನೆನೆಸಿ ನಂತರ ನೆರಳಿನಲ್ಲಿ ಒಣಗಿಸಿ ಬಿತ್ತುವುದರಿಂದ ಬೀಜ ಮೊಳಕೆ ಪ್ರಮಾಣ ಅಧಿಕವಾಗುವುದು. ನಂತರ ಪ್ರತಿ ಎಕರೆಗೆ ಬೇಕಾಗುವ ಬಿತ್ತನೆ ಬೀಜವನ್ನು 200 ಗ್ರಾಂ ಅಝೋಸ್ಫಿರಿಲಂ ಜೀವಾಣುವಿನಿಂದ ಉಪಚರಿಸಿ ಬಿತ್ತಬೇಕು. ಮತ್ತು ಸತುವಿನ ಸಲ್ಪೇಟ್ 6 ಕಿ.ಗ್ರಾಂ ಅನ್ನು ಬಿತ್ತುವಾಗ ಪುಡಿ ಮಾಡಿದ ಕೊಟ್ಟಿಗೆ ಗೊಬ್ಬರದ ಜೊತೆಗೆ ಸಮಪ್ರಮಾಣದಲ್ಲಿ ಬೆರೆಸಿ ಪ್ರತ್ಯೇಕವಾದ ಎಳೆಶಡ್ಡಿ ಮುಖಾಂತರ ಮಣ್ಣಿನಲ್ಲಿ ಬೆರೆಸಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...