ಧಾರವಾಡ | ಕಿತ್ತೂರಿನ ಇತಿಹಾಸದ ಸಮಗ್ರ ಸಾಹಿತ್ಯ ಇನ್ನೂ ಪ್ರಕಟವಾಗದೇ ಇರುವುದು ವಿಪರ್ಯಾಸ: ರಾಜಶೇಖರ ಬಿರಾದಾರ

Date:

ಕಿತ್ತೂರ ನಾಡಿನ ಮೊದಲ ಇತಿಹಾಸ ಸಂಶೋಧಕರಾದ ದೊಡ್ಡಭಾವೆಪ್ಪ ಮೂಗಿ ಕಿತ್ತೂರಿನ ಇತಿಹಾಸದ ವಿಶ್ವಕೋಶದಂತಿದ್ದರು. ಜನಪದರಿಂದ ಲಾವಣಿ, ಗೀಗೀ ಪದಗಳನ್ನು ಹಾಡಿಸಿ ದಾಖಲೆ ರೂಪದಲ್ಲಿ ಸಂಗ್ರಹಿಸಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ನೀಡಿದರು. ಆದರೆ ಕಿತ್ತೂರಿನ ಇತಿಹಾಸದ ಸಮಗ್ರ ಸಾಹಿತ್ಯ ಇನ್ನೂ ಪ್ರಕಟವಾಗದೇ ಉಳಿದಿದ್ದು ವಿಪರ್ಯಾಸ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ದೊಡ್ಡಭಾವೆಪ್ಪ ಮೂಗಿ ಸ್ಮರಣಾರ್ಥ ದತ್ತಿ ಕಾರ್ಯಕ್ರಮದಲ್ಲಿ ‘ಹೃದಯವಂತ ಸಂಶೋಧಕ ದೊಡ್ಡಭಾವೆಪ್ಪ ಮೂಗಿ’ ವಿಷಯದ ಕುರಿತು ಯರಗಟ್ಟಿ ಸರಕಾರಿ ಪ್ರಥಮ ದರ್ಜೆಯ ಪ್ರಾಧ್ಯಾಪಕ ರಾಜಶೇಖರ ಬಿರಾದಾರ ಮಾತನಾಡಿದರು.

ದೊಡ್ಡಭಾವೆಪ್ಪ ಮೋಗಿಯವರು ಬಾಲ್ಯದಿಂದಲೇ ಕಿತ್ತೂರ ಸಂಸ್ಥಾನದ ವೀರಗಾಥೆ ರಾಜರುಗಳ ಸ್ವಾಭಿಮಾನದ ಧೈರ್ಯದ ಕಥೆಗಳನ್ನು ಕೇಳುತ್ತಲೇ ಬೆಳೆದವರು. ಹೃದಯವಂತರಾದ ದೊಡ್ಡ ಭಾವೆಪ್ಪನವರು ಒಬ್ಬ ಸಂಶೋಧಕನಲ್ಲಿರಬಹುದಾದ ಚಿಕಿತ್ಸಕತೆ ಕುತೂಹಲ ಪ್ರವೃತ್ತಿ ಹೊಂದಿದವರಾಗಿದ್ದರು. ಕಿತ್ತೂರಿನ ಇತಿಹಾಸ ತಿಳಿಯಲು ತಲಸ್ಪರ್ಶ ಅಧ್ಯಯನ ಮಾಡಿದರು. ಹಳ್ಳಿ-ಹಳ್ಳಿಗಳಿಗೂ ಸಂಚರಿಸಿ ಕಾಗದಪತ್ರಗಳನ್ನು ಪೂರಕ ದಾಖಲೆಗಳನ್ನು ಸಂಗ್ರಹಿಸಿದರು. ಅವರು ಒಬ್ಬ ಇತಿಹಾಸ ಸಂಶೋಧಕರು ಮಾತ್ರವಲ್ಲ. ಮಹಾನ್ ದೇಶಭಕ್ತರು. ಗಾಂಧೀಜಿ ಹಾಗೂ ಸುಭಾಸಚಂದ್ರ ಭೋಸರಿಂದ ಸ್ಫೂರ್ತಿಗೊಂಡ ಅವರು ದೇಶದ ಏಕತೆ ಹಾಗೂ ಸಮಗ್ರತೆಯ ಚಿಂತನೆಗಳನ್ನು ಹೊಂದಿದ್ದರು. ಕಿತ್ತೂರಿಗೆ ಸಂಬಂಧಿಸಿದ ಅನೇಕ ಗ್ರಂಥಗಳನ್ನು ಪ್ರಕಟಿಸಿದ ಇವರು ಇತಿಹಾಸದ ಸಂಶೋಧಕನಾಗಿ ಉರ್ದು, ಮರಾಠಿ ಭಾಷೆಗಳನ್ನು ಅಧ್ಯಯನ ಮಾಡಬೇಕಾಯಿತು. ಮೂಗಿಯವರು ಸುಸಂಸ್ಕೃತ ಸಂಸಾರವುಳ್ಳ ಶರಣ ಸಂಸ್ಕೃತಿಯ ಮನೆತನದವರಾಗಿದ್ದು, ದಾನಧರ್ಮದ ಕಾರ್ಯಗಳಲ್ಲಿ ಸದಾ ಎತ್ತಿದ ಕೈ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ. ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ಕಿತ್ತೂರ ಸಂಸ್ಥಾನ ಮಲ್ಲಸರ್ಜ ದೇಸಾಯಿ ಹಾಗೂ ಅಲ್ಲಪ್ಪಗೌಡ ದೇಸಾಯಿ ಅವರ ಆಡಳಿತದಲ್ಲಿ ವೈಭವಯುತವಾಗಿತ್ತೆಂದು ಹೇಳಿ, ಕಿತ್ತೂರಿನ ಆಂತರಿಕ ಆಡಳಿತ ವ್ಯವಸ್ಥೆಯ ಬಗ್ಗೆ ತಿಳಿಸಿದರು. ಕ.ವಿ.ವ. ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೈಲಹೊಂಗದ ಮೂಗಿಯವರ ಮನೆತನಕ್ಕೆ ತಮ್ಮದೇ ಆದ ಇತಿಹಾಸವಿದೆ. ನಾಡು ಕಟ್ಟಿದವರಲ್ಲಿ ಆ ಮನೆತನದ್ದು ಪಾತ್ರವಿದೆ. ದೊಡ್ಡಭಾವೆಪ್ಪನವರ ಜೀವನದ ಯಶೋಗಾಥೆ ನಮಗೆಲ್ಲಾ ಪ್ರೇರಣೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ನಿರೂಪಿಸುವಲ್ಲಿ ಪೋಷಕರ, ಶಿಕ್ಷಕರ ಸಮಾನ ಜವಾಬ್ದಾರಿ ಇದೆ: ಜಿಲ್ಲಾಧಿಕಾರಿ ದಿವ್ಯಪ್ರಭು

ಡಾ. ಜಿನದತ್ತ ಹಡಗಲಿ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಮಹೇಶ ಧ. ಹೊರಕೇರಿ ನಿರೂಪಿಸಿದರು. ಶಿವಾನಂದ ಭಾವಿಕಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಶ್ರೀನಿವಾಸ ವಾಡಪ್ಪಿ, ಬಸವಪ್ರಭು ಹೊಸಕೇರಿ, ವೀರಣ್ಣ ಒಡ್ಡೀನ, ಸಿ.ಎಸ್. ಪಾಟೀಲ, ರಾಜೇಂದ್ರ ಸಾವಳಗಿ, ಬಿ.ಡಿ. ಪಾಟೀಲ, ಎಸ್.ಎಚ್. ಪಾಟೀಲ, ಎಂ.ಆರ್. ಮಾಮಲೇದೇಸಾಯಿ, ಶಂಕರಲಿಂಗ ಶಿವಳ್ಳಿ ಸೇರಿದಂತೆ ಮುಂತಾದವರಿದ್ದರು. ಪ್ರಾರಂಭದಲ್ಲಿ ಶಕುಂತಲಾ ಹಾದಿಮನಿ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು. ಗುರುಬಸವ ಮಹಾಮನೆ, ಅಲ್ಲಮಪ್ರಭು ಕಡಕೋಳ, ಬಸವರಾಜ ಹೂಗಾರ ಸಂಗೀತಕ್ಕೆ ಸಾಥ್ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...