ಧಾರವಾಡ | ಕ.ವಿ.ವ ಸಂಘವು ಕನ್ನಡದ ಕಂಪನ್ನು ಗಡಿಯಾಚೆಗೂ ವಿಸ್ತರಿಸಿದೆ: ನ್ಯಾ. ಪ್ರಕಾಶ ಭಾವಿಕಟ್ಟಿ

Date:

ಕನ್ನಡದ ಕಂಪನ್ನು ನಾಡಿನಲ್ಲಿ ಮಾತ್ರವಲ್ಲದೆ ಗಡಿಯಾಚೆಗೂ ವಿಸ್ತರಿಸಿದ ಕ.ವಿ.ವ ಸಂಘದ ಮಹೋನ್ನತ ಸಾಧನೆಯಾಗಿದೆ ಎಂದು ನವೆಂಬರ್ 7ರಂದು ಸಂಘವು 70ನೇ ರಾಜ್ಯೋತ್ಸವದ ಅಂಗವಾಗಿ ನಾಡಹಬ್ಬ-2025 ನಿಮಿತ್ತ ಆಯೋಜಿಸಿರುವ ಸಾಧಕರ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನ್ಯಾಯವಾದಿ ಪ್ರಕಾಶ ಭಾವಿಕಟ್ಟಿ ಮಾತನಾಡಿದರು.

ಕವಿವ ಸಂಘವು ನವ್ಹಂಬರ ತಿಂಗಳು ಪೂರ್ತಿ ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸಿ ಕನ್ನಡ ಭಾಷೆ ಸಂಸ್ಕೃತಿಯ ಹಿರಿಮೆ ಹೆಚ್ಚಿಸಿದೆ. ವಿದ್ಯಾರ್ಥಿಗಳು ಇಂದು ಓದಿನ ಜೊತೆಗೆ ಕನ್ನಡ ಕಟ್ಟುವ ಕಾರ್ಯ ಮಾಡಬೇಕು. ಅನ್ಯ ವಿಷಯಗಳತ್ತ ಗಮನ ಕೊಡದೇ ಸಮಯ ಪ್ರಜ್ಞೆಯೊಂದಿಗೆ ಅಧ್ಯಯನ ಮಾಡಬೇಕೆಂದು ಹೇಳಿದರು.

ಸಾಧಕರ ಸನ್ಮಾನ ಪ್ರಶಸ್ತಿಗೆ ಭಾಜನರಾದ ವಾ.ಕ.ರಾ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಪ್ರಕಾಶಯ್ಯ ಶಿವಯೋಗಿಮಠ ಸನ್ಮಾನ ಸ್ವೀಕರಿಸಿ ಈ ಸನ್ಮಾನ ಇನ್ನೂ ಹೆಚ್ಚು ನನಗೆ ಕನ್ನಡದ ಕೆಲಸ ಮಾಡಲು ಪ್ರೇರಣೆಯಾಗಿದೆ. ನಾನು ನಿರ್ವಾಹಕನಾಗಿ ೨ ದಶಕಗಳಿಂದ ಶ್ರದ್ಧೆ ಬದ್ದತೆಯಿಂದ ಕಾರ್ಯ ಮಾಡಿದ್ದೇನೆ. ಪ್ರಯಾಣಿಕರ ಜೊತೆ ಆಂಗ್ಲ ಪದ ಬಳಸದೇ ಕನ್ನಡದಲ್ಲೇ ವ್ಯವಹರಿಸಿದ್ದೇನೆ. ಕನ್ನಡದ ಬಗ್ಗೆ ಕಿಟೆಲ್‌ರಂತಹ ವಿದೇಶಿ ಮಹನೀಯರು ಬಹುದೊಡ್ಡ ಕೊಡುಗೆ ನೀಡಿದ್ದು. ಕನ್ನಡಿಗರಾಗಿ ನಾವೇ ಕನ್ನಡದಲ್ಲಿ ವ್ಯವಹರಿಸದಿದ್ದರೆ ಹೇಗೆ? ಭಾಷೆ ಉಳಿದರೆ ಮಾತ್ರ ನಾಡು ಸಮೃದ್ಧವಾಗಲು ಸಾಧ್ಯ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಿಟೆಲ್ ಕಾಲೇಜಿನ ಪ್ರಾಚಾರ್ಯ ಡಾ. ರೇಖಾ ಜೋಗುಳ ಮಾತನಾಡಿ, ಕವಿವ ಸಂಘಕ್ಕೂ ನಮ್ಮ ಸಂಸ್ಥೆಗಳಿಗೂ ಅವಿನಾಭಾವ ಸಂಬಂಧ ಮೊದಲಿನಿಂದಲೂ ಇದೆ. ಕನ್ನಡದ ಕೆಲಸಕ್ಕೆ ನಮ್ಮ ಸಂಸ್ಥೆಯ ಸಹಕಾರ ಸದಾಕಾಲ ತಮಗೆ ಇದೆ. ನಮ್ಮ ವಿದ್ಯಾರ್ಥಿಗಳು ಪ್ರತಿಭಾವಂತರಿದ್ದು ಜಾನಪದ ವಾದ್ಯ ಸ್ಪರ್ಧೆಯಲ್ಲಿ ರಾಷ್ಟೀಯ ಮಟ್ಟದಲ್ಲಿ ನಾಲ್ಕನೆ ಸ್ಥಾನ ಪಡೆದದ್ದು ಅಭಿಮಾನದ ಸಂಗತಿ ಎಂದರು.

ಕಿಟೆಲ್ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಭರತ ನಾಟ್ಯ, ಜಾನಪದ ಸಮೂಹ ನೃತ್ಯ, ಹಾಡು ವೈವಿದ್ಯಮಯ ಕಾರ್ಯಕ್ರಮಗಳು ಜರುಗಿದವು. ಪ್ರಾರಂಭದಲ್ಲಿ ಸರಿತಾ ಮಹೇಶ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ತಬಲಾ ಸಾಥ್ ಡಾ. ಅಲ್ಲಮಪ್ರಭು ಕಡಕೋಳ ಹಾಗೂ ವಿನೋದ ಪಾಟೀಲ ಹಾರ್ಮೊನಿಯಮ್ ಸಾಥ್ ನೀಡಿದರು. ವೀರಣ್ಣ ಒಡ್ಡೀನ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕ ಮಾತನಾಡಿದರು. ಶಂಕರ ಕುಂಬಿ ನಿರೂಪಿಸಿದರು. ಸತೀಶ ತುರಮರಿ ಸನ್ಮಾನ ಪತ್ರ ಓದಿದರು, ಶಿವಾನಂದ ಭಾವಿಕಟ್ಟಿ ವಂದಿಸಿದರು.

ಇದನ್ನೂ ಓದಿ ಧಾರವಾಡ | ಕನಕದಾಸರು ಯಾವುದೇ ಜಾತಿ, ಮತ, ಧರ್ಮಕ್ಕೆ ಸೀಮಿತವಾದವರಲ್ಲ: ಡಾ. ಸುರೇಶ ಹೊರಕೇರಿ

ಪ್ರೊ. ಎಸ್. ಜಿ. ಬೇಲಿ, ಡಾ. ಸುರೇಶ ನ್ಯಾಮತಿ, ಕಿರಣ ಸಿದ್ಧಾಪೂರ, ಭೀಮು ಖಾಟವೆ, ಸುಪ್ರೀಯಾ ಭಟ್, ಈರಣ್ಣ ನವಲಗುಂದ, ಮೆಹಬೂಬಅಲಿ, ಬಸಯ್ಯ ಪತ್ರಿಮಠ, ಡಾ. ಪ್ರಕಾಶ ಮಲ್ಲಿಗವಾಡ ಹಾಗೂ ಕಿಟೆಲ್ ಮಹಾವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...