ಧಾರವಾಡ | ಉಪಯೋಗಕ್ಕೆ ಬಾರದೇ ಮುಚ್ಚಿದ ಕಲಾಭವನ; ಕೂಡಲೇ ಬಾಗಿಲು ತೆರೆಯಲು ಒತ್ತಾಯ

Date:

ಹೆಸರಾಂತ ಸಂಗೀತಗಾರರಾದ ಡಾ. ಮಲ್ಲಿಕಾರ್ಜುನ ಮನ್ಸೂರ ಹೆಸರಿನ ಕಲಾಭವನವು ಹಲವು ವರ್ಷಗಳಿಂದ ಯಾವುದೇ ಸಭೆ ಸಮಾರಂಭಗಳಿಗೆ ಉಪಯೋಗಕ್ಕೆ ಬಾರದೆ ಮುಚ್ಚಿದ್ದನ್ನು ಮತ್ತು ಹಲವು ನಿರುಪಯುಕ್ತ ವಸ್ತುಗಳನ್ನು ತುಂಬಿದ್ದನ್ನು ಖಂಡಿಸಿ, ಸಮುದಾಯ, ಕರ್ನಾಟಕ ಪತ್ರಕರ್ತರ ಒಕ್ಕೂಟ, ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ರಂಗಭೂಮಿ ಕಲಾವಿದರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ನಡೆಸಿ, ಮನವಿ ಸಲ್ಲಿಸಿದರು.

ಧಾರವಾಡದ ಪವಿತ್ರ ಭೂಮಿಯಲ್ಲಿ ನಿರ್ಮಿಸಿದ ಡಾ. ಮಲ್ಲಿಕಾರ್ಜುನ ಮನ್ಸೂರ ಭವನದ ದೈನಿಕ ಬಾಡಿಗೆ ಹೆಚ್ಚಾಗಿರುವ ಬಡ ಕಲಾಕಾರರು ಬಾಡಿಗೆ ಪಡೆದು ತಮ್ಮ ಪ್ರತಿಭೆ ತೋರಿಸದಿರುವ ಕಾರಣ ಕಲಾ ಆಸಕ್ತರಿಗೆ ತುಂಬಾ ನಿರಾಶೆಯಾಗಿದೆ. ರಿಯಾಯಿತಿ ದರದಲ್ಲಿ ಬಾಡಿಗೆ ಕೊಟ್ಟಲ್ಲಿ ಪಾಲಿಕೆಗೂ ಲಕ್ಷಾಂತರ ರೂಪಾಯಿ ಆದಾಯವೂ ಬರುತ್ತಿತ್ತು. ಅಚ್ಚು ಕಟ್ಟಾಗಿಯೂ ಉಳಿಯುತ್ತಿತ್ತು. ತನ್ನ ಸಂಗೀತದ ಮೂಲಕ ವಿಶ್ವದಾದ್ಯಂತ ಹೆಸರುವಾಸಿಯಾಗಿರುವ ಮಲ್ಲಿಕಾರ್ಜುನ ಮನ್ಸೂರ ಕಟ್ಟೆಯ ಮೇಲೆ ಕುಡುಕರು, ಪುಂಡಪೋಕರಿಗಳು, ದುಷ್ಟಟದ ವಿದಾರ್ಥಿಗಳು ತಮ್ಮ ಮಜಾಮಾಡುವ ತಾಣವಾಗಿಸಿದ್ದಾರೆ. ಈ ಹಾವಳಿಯನ್ನು ತಪ್ಪಿಸಲು ಕಲಾಕಾರಿಗೆ, ರಂಗಕರ್ಮಿಗಳಿಗೆ, ಚರ್ಚಾಕೂಟಗಳಿಗೆ, ಉದ್ಯಮದ ಶಿಬಿರಗಳಿಗೆ, ಸಂಸ್ಕೃತಿಕ ಕಾರ್ಯಕ್ರಮ ಮಾಡುವವರಿಗೆ, ಹತ್ತು ಹಲವು ಬಗೆಯ ಕಾರ್ಯಕ್ರಮಗಳಿಗೆ ಯೋಗ್ಯ ರಿಯಾಯಿತಿ ದರದಲ್ಲಿ ಬಾಡಿಗೆ ನೀಡಲು ಉತ್ತರ ಕರ್ನಾಟಕ ಫೀಲ್ಕ ಚೆಂಬರ ಮತ್ತು, ಕರ್ನಾಟಕ ಪತ್ರಕರ್ತರ ಒಕ್ಕೂಟವು ವಿನಂತಿಸಿಕೊಳ್ಳುತ್ತದೆ ಎಂದು ಮನವಿ ಪತ್ರದಲ್ಲಿ ಕಾಣಿಸಿದ್ದಾರೆ.

ಈ ಮೂಲಕ ಕಲೆ. ಸಾಹಿತ್ಯ, ಸಂಗೀತದ ತವರೂರ ಧಾರವಾಡದ ಬಹುತೇಕ ಕುಟುಂಬಗಳಲ್ಲಿ ಒಬ್ಬ ಸಾಹಿತಿಯಾಗಿಯೋ, ಕಲಾಕಾರನಾಗಿಯೋ, ಸಂಗೀತಗಾರನಾಗಿಯೋ ಜನಿಸಿ ವಿಶ್ವದಾದ್ಯಂತ ಹೆಸರು ಮಾಡುವುದರ ಮೂಲಕ ಇತಿಹಾಸದ ಪುಟಗಳಲ್ಲಿ ಸೇರಿದ್ದಾರೆ. ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಈಗಾಗಲೇ ಸತತ 12 ವರ್ಷಗಳಿಂದ ಅನೇಕ ನಿರ್ಮಾಪಕರನ್ನು, ನಿರ್ದೇಶಕರನ್ನು ಸಾಹಿತಿ ಕಲಾವಿದರನ್ನು ಪ್ರೋತ್ಸಾಹಿಸುತ್ತ ಅನೇಕ ಚಲನಚಿತ್ರಗಳನ್ನು ನಿರ್ಮಿಸಿ ದೇಶ ವಿದೇಶಗಳಲ್ಲಿ ಪ್ರದರ್ಶಿಸಿ, ತನ್ನದೇ ಆದ ಹೆಸರನ್ನು ಅಚ್ಚಳಿಯದೇ ಉಳಿಸಿಕೊಂಡಿರುವುದಲ್ಲದೆ, ಅನೇಕ ಯುವ ಕಲಾವಿದರನ್ನು ಗುರುತಿಸಿ ಬೆಳಕಿಗೆ ತಂದಿದೆ. ಇಂಥ ಚಟುವಟಿಕೆಗಳನ್ನು ನಿರಂತರವಾಗಿ ಮಂದುವರೆಸಲು ಜಿಲ್ಲಾಧಿಕಾರಿಗಳು ಪ್ರೋತ್ಸಾಹಿಸುವರೆಂಬ ನಂಬಿಕೆಯಿದೆ. ಆದ್ದರಿಂದ ಈ ಮನವಿಗೆ ಸ್ಪಂದಿಸಿ ರಿಯಾಯಿತಿ ದರದಲ್ಲಿ ಬಾಡಿಗೆ ಕೊಡಲು ಅತೀ ಶೀಘ್ರವಾಗಿ ಆದೇಶ ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ಪ್ರೊ. ಶಿ. ಶಿ. ಬಸವನಾಳ ಲೇಸೆನಿಸಿಕೊಂಡು ಬದುಕಿದ ಪುಣ್ಯಪುರುಷರು: ಡಾ. ರುದ್ರೇಶ ಮೇಟಿ

ಈ ವೇಳೆ ಬಿ ಐ ಈಳಗೇರ, ಎಮ್ ಕೆ ನದಾಪ್, ಸತೀಶ ಮುರಗೋಡ, ಬಿ ಕೆ ಸೋದರ, ಪ್ರಸಾದ್, ವಿನೋದ ಗೋಟ್ಕೆ, ರಾಹುಲ್ ದತ್ತಪ್ರಸಾದ್, ಮಹಮ್ಮದ್‌ಅಲಿ ಗೂಡುಭಾಯಿ, ಕಿರಣ ಸಿದ್ಧಾಪುರ, ಪುಷ್ಪಾ ಹಿರೇಮಠ, ವಿವಿಧ ಸಂಘಟಕರು, ಕಲಾವಿದರು, ರಂಗಕರ್ಮಿಗಳು, ಹೋರಾಟಗಾರರು, ಪತ್ರಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...