ಧಾರವಾಡ | ಕಾರ್ಲ್ ಮಾರ್ಕ್ಸ್ 141ನೇ ಸ್ಮರಣಾ ಕಾರ್ಯಕ್ರಮ

Date:

ಕಾರ್ಲ್ ಮಾರ್ಕ್ಸ್ ರವರ 141ನೇ ಸ್ಮರಣಾ ದಿನಾಚರಣೆ ಕಾರ್ಯಕ್ರಮವನ್ನು ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷವು ಧಾಡವಾಡದಲ್ಲಿ ನಡೆಸಿದೆ. ಕಾರ್ಯಕ್ರಮದಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗಣ್ಣವರ ಧ್ವಜಾರೋಹಣ ನೆರವೇರಿಸಿ, ಕಾರ್ಲ್ ಮಾರ್ಕ್ಸ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಕಾರ್ಲ್ ಮಾರ್ಕ್ಸ್ ರವರು ತಮ್ಮ 17ನೇ ವಯಸ್ಸಿನಲ್ಲಿ ಬರೆದ ಲೇಖನದಲ್ಲಿ, ನಮ್ಮ ಜೀವನದಲ್ಲಿ ನಾವೆಲ್ಲರೂ ಮನುಕುಲಕ್ಕಾಗಿ ಶ್ರಮಿಸುವುದನ್ನು ಆರಿಸಿಕೊಂಡರೆ, ನಮ್ಮನ್ನು ಯಾವ ಭಾರವೂ ಕುಸಿಯುವಂತೆ ಮಾಡಲಾರದು, ಏಕೆಂದರೆ ಅವುಗಳು ಎಲ್ಲರ ಹಿತಕ್ಕಾಗಿ ಮಾಡಿದ ಬಲಿದಾನಗಳು. ಆಗ ನಾವು ಸಣ್ಣತನದ, ಸೀಮಿತವಾದ, ಸ್ವಾರ್ಥದಿಂದ ಕೂಡಿದ, ಸಂತೋಷವನ್ನು ಅನುಭವಿಸುವುದಿಲ್ಲ. ಬದಲಾಗಿ ನಮ್ಮ ಸಂತೋಷ ಲಕ್ಷಾಂತರ ಜನರಿಗೆ ಸೇರುತ್ತದೆ. ನಮ್ಮ ಕೆಲಸಗಳು ಸದ್ದು ಮಾಡುವುದಿಲ್ಲ. ಆದರೆ, ಶಾಶ್ವತವಾಗಿರುತ್ತವೆ ಮತ್ತು ನಮ್ಮ ಸಮಾಧಿಯ ಮೇಲೆ ಉದಾತ್ತ ಚೇತನಗಳ ಬಿಸಿ ಕಂಬನಿಗಳು ಬೀಳುತ್ತವೆ ಎಂದು ಹೇಳಿದ್ದನ್ನು ಸ್ಮರಿಸಿದರು.

ಇಂದು, ಭಾರತ ಸೇರಿದಂತೆ ಪ್ರಪಂಚದಾದ್ಯಂತ ಆರ್ಥಿಕ, ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ತೀವ್ರವಾದ ಬಿಕ್ಕಟ್ಟನ್ನು ಕಾಣುತ್ತಿದ್ದೇವೆ. ಜನಸಾಮಾನ್ಯರ, ದುಡಿಯುವ ಜನಗಳ ಬದುಕು ಬೀದಿಗೆ ಬಂದಿದೆ. ಮಾರುಕಟ್ಟೆ ವಿಸ್ತರಣೆಗೋಸ್ಕರ ಯುದ್ಧಗಳು ನಡೆಯುತ್ತಿವೆ. ಕೊಳೆತ ಬಂಡವಾಳಶಾಹಿ ವ್ಯವಸ್ಥೆಯ ಹುಟ್ಟುಹಾಕಿರುವ ಇಂತಹ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ವಿಶ್ವದ ದುಡಿಯುವ ಜನರ ವಿಮೋಚನೆಗೆ ಮಾರ್ಕ್ಸ್ ವಾದ ಒಂದು ಅಸ್ತ್ರವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಕ್ಸ್ ರವರ ಸ್ಮರಣ ದಿನವನ್ನು ಕೇವಲ ಸಾಂಪ್ರದಾಯಿಕವಾಗಿ ಆಚರಿಸದೆ ನಮ್ಮ ದೇಶದಲ್ಲಿಯೂ ಶೋಷಣಾಯುಕ್ತ ಬಂಡವಾಳಶಾಹಿ ವ್ಯವಸ್ಥೆಯನ್ನು ಕಿತ್ತೊಗೆದು ಶೋಷಣಾರಹಿತ ಸಮಾಜವಾದಿ ವ್ಯವಸ್ಥೆಯನ್ನು ಸ್ಥಾಪಿಸಲು ಮಾರ್ಕ್ಸ್ ವಾದವನ್ನು ಸರಿಯಾದ ನೆಲೆಗಟ್ಟಿನಲ್ಲಿ ಅರ್ಥೈಸಿಕೊಂಡು ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿ ನೆರವೇರಿಸಲು ಸಂಕಲ್ಪ ತೊಡುವುದು ನಾವು ಮಾರ್ಕ್ಸ್ ರವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸೆಕ್ರೆಟರಿಯೇಟ್ ಸದಸ್ಯ ಗಂಗಾಧರ ಬಡಿಗೇರ, ಜಿಲ್ಲಾ ಸಮಿತಿ ಸದಸ್ಯ ಭುವನಾ, ಶರಣು ಗೋನುವಾರ, ಮಧುಲತಾ ಗೌಡರ, ಭವಾನಿಶಂಕರ ಸೇರಿದಂತೆ ಪಕ್ಷದ ಸದಸ್ಯರು ಕಾರ್ಯಕರ್ತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...