ಧಾರವಾಡ | ಜಗತ್ತಿನಲ್ಲಿ ಎಲ್ಲದಕ್ಕಿಂತ ʼಜ್ಞಾನʼದ ಮೌಲ್ಯ ಹೆಚ್ಚು: ಕುಲಸಚಿವ ಎ ಚೆನ್ನಪ್ಪ

Date:

ಜಗತ್ತಿನಲ್ಲಿ ಎಲ್ಲದಕ್ಕಿಂತ ಜ್ಞಾನಕ್ಕೆ ಬೆಲೆಯಿದೆ ಮತ್ತು ಹೊಟ್ಟೆಯ ಹಸಿವಿಗಿಂತ ಜ್ಞಾನದ ಹಸಿವು ನಮ್ಮಲ್ಲಿ ಮೂಡಿದಾಗ ಮಾತ್ರ ನಾವು ಏನಾದರೂ ಸಾಧಿಸಲು ಸಾಧ್ಯ. ಹಾಗಾಗಿ ಸಮಾಜದಲ್ಲಿ ಎಲ್ಲಿಯಾದರೂ ಒಂದು ದೊಡ್ಡ ಗೌರವ ಮತ್ತು ಸ್ವಾಗತ ಬೇಕು ಅಂದರೆ ಅದು ಒಳ್ಳೆಯ ಪಾಂಡಿತ್ಯದ ಜ್ಞಾನದಿಂದ ಮಾತ್ರ ಎಂದು ಕವಿವಿ ಕುಲಸಚಿವ ಎ ಚೆನ್ನಪ್ಪ ಅವರು ಹೇಳಿದರು.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

“ಇನ್‌ಕಮ್ ಇದ್ದರೆ ಸಮಾಜದಲ್ಲಿ ವೆಲ್‌ಕಮ್ ಸಿಗುತ್ತದೆ ಇಲ್ಲಿ ಇನ್‌ಕಮ್ ಎಂದರೆ ಅತಿಯಾದ ಕಾನೂನು ಜ್ಞಾನವನ್ನು ಪಡೆದುಕೊಳ್ಳುವುದು ಎಂದು ಅರ್ಥ” ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾವಿದ್ಯಾಲಯದ ‌ಪ್ರಾಂಶುಪಾಲೆ ಡಾ ಎಸ್ ಆರ್ ಮಂಜುಳಾ ಅವರು ಮಾತನಾಡಿ, “ಕಾಲೇಜಿನ ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಕಡಿಮೆ ಬೆಂಚ್ ಹಾಗೂ ಇನ್ನಿತರ ಉಪಕರಣಗಳ ಅವಶ್ಯಕತೆ ಇದೆ. ಶಿಥಿಲಗೊಂಡಿರುವ ಕಾರ್ಯಕ್ರಮದ ಸಭಾಂಗಣವನ್ನು ಅಭಿರುದ್ಧಿಪಡಿಸುವಂತೆ ಮತ್ತು ಮಹಾವಿದ್ಯಾಲಯಕ್ಕೆ ಖಾಯಂ ಶಿಕ್ಷಕರನ್ನು ನೇಮಿಸಬೇಕು” ಎಂದು ನೆರೆದ ವಿದ್ಯಾರ್ಥಿಗಳ ಸಮಕ್ಷಮದಲ್ಲಿ ಕುಲಸಚಿವರಿಗೆ ಮನವರಿಕೆ ಮಾಡುವ ಮೂಲಕ ಬೇಡಿಕೆಯಿಟ್ಟರು.

ಈ ಸುದ್ದಿ ಓದಿದ್ದೀರಾ? ವಿಧಾನ ಪರಿಷತ್ ಉಪಚುನಾವಣೆ; ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟ

ಕುಲಸಚಿವರು ಪ್ರಾಂಶುಪಾಲರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ವಿಭಿನ್ನರೀತಿಯ ಚಟುವಟಿಕೆಗಳಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಪ್ರಾಧ್ಯಾಪಕರುಗಳಾದ ಡಾ ಆರ್ ಎಂ ಕಾಂಬಳೆ, ಡಾ. ಶಶಿರೇಖಾ ಮಾಳಗಿ, ಡಾ. ಶಿವಕುಮಾರ ಎಂ ಎ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...