ಧಾರವಾಡ | ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ ಲಾಡ್

Date:

ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತದಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾ ಯೋಜನಾ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯಲ್ಲಿ ಮಾತನಾಡಿ, ಸರಕಾರವು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವಕಾಶವಾಗುವಂತೆ ಅಗತ್ಯ ಅನುದಾನ ನೀಡಲು ಕ್ರಮವಹಿಸಲಿದೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಅಗತ್ಯ ಕಾಮಗಾರಿ, ಕಾರ್ಯಕ್ರಮಗಳನ್ನು ಯೋಜನಾ ವರದಿಯಲ್ಲಿ ಸೇರಿಸಬೇಕು. ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಮುನ್ನೊಟವಾಗಬೇಕು. ಗ್ರಾಮೀಣ ಅಭಿವೃದ್ಧಿಗೆ ಮತ್ತು ನಗರ ಅಭಿವೃದ್ಧಿಗೆ ವಿಸೃತ ವರದಿ ರೂಪಿಸಬೇಕು. ಮೂಲಭೂತ ಸೌಕರ್ಯಗಳ ಹೆಚ್ಚಳ ಜೊತೆಗೆ ಜನರ ಕಲ್ಯಾಣ ಕಾರ್ಯಕ್ರಮಗಳ ಸೆರ್ಪಡೆ ಮಾಡಿ ಉತ್ತಮ ಯೋಜನೆ ರೂಪಿಸಬೇಕು. ಜನರ ಜೀವನಮಟ್ಟ ಸುಧಾರಣೆಗೆ ಹಾಗೂ ಆರ್ಥಿಕ ಚಟುವಟಿಕೆಗಳ ಹೆಚ್ಚಳಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ಅಭಿವೃದ್ಧಿ ಯೋಜನಾ ವರದಿಯಲ್ಲಿ ಸೇರಿಸಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಸರಕಾರದ ಮುಖ್ಯ ಸಚೇತಕ ಸಲೀಂ ಅಹಮ್ಮದ ಮಾತನಾಡಿ, ಜಿಲ್ಲೆಯ ಸಮಗ್ರ ವರದಿಗೆ ಅಧಿಕಾರಿಗಳು ಅಗತ್ಯ ಯೋಜನಾ ವರದಿ ರೂಪಿಸಬೇಕು. ಎಲ್ಲ ಸಮುದಾಯಗಳ ಪ್ರಗತಿಗೆ ಪೂರಕವಾಗಿರಬೇಕು ಎಂದರು. ವಿಧಾನ ಪರಿಷತ್ ಸದಸ್ಯ ಎಫ್.ಹೆಚ್.ಜಕ್ಕಪ್ಪನವರ ಮಾತನಾಡಿ, ಎಸ್.ಎಸ್.ಟಿ ಗ್ರಾಮಸಭೆ ಆಗಬೇಕು. ಜಿಲ್ಲೆಯ ಎಲ್ಲ ಎಸ್.ಸಿ., ಎಸ್.ಟಿ. ಸಮುದಾಯ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಗೊಳ್ಳಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ರಾಜ್ಯದಲ್ಲಿ ಮೊದಲ ಬಾರಿಗೆ, ನಮ್ಮ ಜಿಲ್ಲೆಯಲ್ಲಿ ಜಿಲ್ಲಾ ಯೋಜನಾ ಅಭಿವೃದ್ಧಿ ಸಮಿತಿ ಜರುಗುತ್ತಿದೆ. ಇಂದಿನ ಸಭೆ ಪೂರ್ವಭಾವಿ ಸಭೆ ಆಗಿದ್ದು, ಎಲ್ಲ ಸಮುದಾಯ, ಗ್ರಾಮ ಮತ್ತು ನಗರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಯನ್ನು ರೂಪಿಸಲಾಗುತ್ತದೆ. ಮುಂದಿನ ವಾರ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಯೋಜನಾ ವರದಿ ತಯ್ಯಾರಿಸುವ ಕುರಿತು ಕಾರ್ಯಾಗಾರ ಮಾಡಲಾಗುವುದು ಎಂದು ಹೇಳಿದರು. ಸಭೆಯಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ, ಎಂ.ಆರ್.ಪಾಟೀಲ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ ಮಾತನಾಡಿದರು. ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಗುಂಜನ್ ಆರ್ಯ ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...